AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ IPS ಅಧಿಕಾರಿಗೆ ಬೆದರಿದರಾ ಮಂಡ್ಯ ರಾಜಕಾರಣಿಗಳು? ಎಸ್‌ಪಿ ವರ್ಗವಾದರೂ ಮಂಡ್ಯಕ್ಕೆ ಬರಲು ಬಿಡದ ಪ್ರಭಾವಿಗಳು

ಮಂಡ್ಯ SP ವರ್ಗಾವಣೆ ಕಸರತ್ತು! ಮಹಿಳಾ ಅಧಿಕಾರಿ ಎಂಬ ಒಂದು ನೆಪ ಮುಂದೊಡ್ಡಿದ್ದರೆ, ಮತ್ತೊಂದು ಡೈರೆಕ್ಟ್ ಐಪಿಎಸ್ ಆದ ಸುಮನ್ ಅವರು ಖಡಕ್ ಪೊಲೀಸ್ ಆಫೀಸರ್ ಎಂದು ಜನಜನಿತರಾಗಿದ್ದಾರೆ. ಹಾಗಾಗಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ಸ್ಥಳೀಯರು ಬೇರೊಬ್ಬ ಅಧಿಕಾರಿಗೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಖಡಕ್ IPS ಅಧಿಕಾರಿಗೆ ಬೆದರಿದರಾ ಮಂಡ್ಯ ರಾಜಕಾರಣಿಗಳು? ಎಸ್‌ಪಿ ವರ್ಗವಾದರೂ ಮಂಡ್ಯಕ್ಕೆ ಬರಲು ಬಿಡದ ಪ್ರಭಾವಿಗಳು
ಎಲೆಕ್ಷನ್ ಬ್ಯುಸಿಯಲ್ಲಿರುವ ಸರ್ಕಾರಿ ಆಡಳಿತ ಯಂತ್ರ; ವಾರವಾದರೂ ಬಗೆಹರಿದಿಲ್ಲ ಮಂಡ್ಯ ಎಸ್ಪಿ ನೇಮಕ, ವಿವಾದ ಸೀದಾ ರಾಜ್ಯಪಾಲರ ಅಂಗಳಕ್ಕೆ
TV9 Web
| Edited By: |

Updated on:Oct 23, 2021 | 12:19 PM

Share

ಮಂಡ್ಯ: ಬುಧವಾರ ರಾಜ್ಯ ಸರ್ಕಾರ 9 ಪೊಲೀಸ್​ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ಆದರೆ ಈ ಮಧ್ಯೆ ಒಂದು ವರ್ಗಾವಣೆಗೆ ತಡೆ ನೀಡಿದೆ. ನಿನ್ನೆಯಷ್ಟೇ ಮಂಡ್ಯ ಜಿಲ್ಲೆಗೆ ಹೊಸ ಪೊಲೀಸ್​ ವರಿಷ್ಠಾಧಿಕಾರಿಯನ್ನು (ಎಸ್‌ಪಿ) ನೇಮಿಸಿ ಆದೇಶ ಹೊರಡಿಸಿದೆ. ಅದರ ಬೆನ್ನಲ್ಲೇ ಅವರಿಗೆ ಅಧಿಕಾರ ಸ್ವೀಕರಿಸದಂತೆ ಇಂದು ದಿಢೀರ್ ಮೌಖಿಕ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ನಿನ್ನೆ ಮಂಡ್ಯಕ್ಕೆ ವರ್ಗಾವಣೆಗೊಂಡಿರುವ ಖಡಕ್ IPS ಅಧಿಕಾರಿಗೆ ಬೆದರಿದರಾ ಸ್ಥಳೀಯ ರಾಜಕಾರಣಿಗಳು? ವರ್ಗಾವಣೆಯಾದರೂ ಮಂಡ್ಯಕ್ಕೆ ಬರಲು ಪ್ರಭಾವಿಗಳು ಬಿಡುತ್ತಿಲ್ಲವಾ? ಎಬ ಅನುಮಾನಗಳು ಮೂಡಿವೆ.

ಇನ್ನೂ ಎರಡು ದಿನಗಳ ಕಾಲ ಕಾದು ನೋಡುವಂತೆ ವರ್ಗಾವಣೆಗೊಂಡಿರುವ IPS ಅಧಿಕಾರಿ ಸುಮನ್ ಡಿ. ಪನ್ನೇಕರ್ ಅವರಿಗೆ DPAR ವಿಭಾಗದಿಂದ ಸೂಚನೆ ನೀಡಲಾಗಿದೆಯಂತೆ. ಸರ್ಕಾರದ DPAR ವಿಭಾಗದಿಂದ ದೂರವಾಣಿ ಕರೆ ಮಾಡಿ, ಈ ಸಂದೇಶ ತಲುಪಿಸಲಾಗಿದೆಯಂತೆ. ಡಾ. ಸುಮನ್ ಡಿ. ಪನ್ನೇಕರ್ ಪ್ರಸ್ತುತ ಮೈಸೂರು ಪೊಲೀಸ್ ಅಕಾಡೆಮಿಯಲ್ಲಿದ್ದಾರೆ.

ಏನಿದು ವರ್ಗಾವಣೆ ಕಸರತ್ತು!? ಮಹಿಳಾ ಅಧಿಕಾರಿ ಎಂಬ ಒಂದು ನೆಪ ಮುಂದೊಡ್ಡಿದ್ದರೆ, ಮತ್ತೊಂದು ಡೈರೆಕ್ಟ್ ಐಪಿಎಸ್ ಆದ ಸುಮನ್ ಅವರು (Dr Suman D Pennekar) ಖಡಕ್ ಪೊಲೀಸ್ ಆಫೀಸರ್ ಎಂದು ಜನಜನಿತರಾಗಿದ್ದಾರೆ. ಹಾಗಾಗಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ಸ್ಥಳೀಯರು ಬೇರೊಬ್ಬ ಅಧಿಕಾರಿಗೆ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಇಡೀ ರಾತ್ರಿ ಕಾರ್ಯತಂತ್ರ ನಡೆಸಿರುವ ಮಂಡ್ಯ ರಾಜಕಾರಣಿಗಳು ಮತ್ತು ಅಧಿಕಾರಿ ವರ್ಗ ಸರ್ಕಾರದ ಮೇಲೆ ಪ್ರಭಾವ ಬೀರಿ, ಬೇರೆ ಅಧಿಕಾರಿ ನಿಯೋಜನೆಗೆ ಕಸರತ್ತು ನಡೆಸಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ನಿನ್ನೆಯ ತನ್ನ ಆದೇಶಕ್ಕೆ ಅಂಟಿಕೊಳ್ಳುತ್ತದಾ? ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿಯುತ್ತಾ ಎಂಬುದು ಕಾದು ನೋಡಬೇಕಿದೆ.

Mandyaದಲ್ಲಿ ಮಹಿಳಾ ಅಧಿಕಾರಿಗಳು v/s ಪ್ರಭಾವಿ ರಾಜಕಾರಣಿ! ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಹಿಳಾ SPಪಿ ಬೇಡ್ವಂತೆ!

ಇದನ್ನೂ ಓದಿ:

ಆರ್​ಎಸ್​ಎಸ್​ನ ನಾಲ್ಕು ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ

(mandya politicians stop the transfer of ips suman pannekar as mandya superintendent of police)

Published On - 12:04 pm, Thu, 21 October 21

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ