ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು

ಮೊನ್ನೆ ನಡೆದ ಪೌರ ಕಾರ್ಮಿಕರ ದಿನಾಚರಣೆ ದಿನವೇ ಕಾರ್ಮಿಕರಿಗೆ ಅಗೌರವ ಸೂಚಿಸಿಲಾಗಿದೆ. ಗ್ಲೌಸ್, ಗಮ್ ಬೂಟ್ ಇಲ್ಲದೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛ ಮಾಡಿದ್ದಾರೆ. ಪಿಡಿಓ ಅಧಿಕಾರಿ ಗ್ಲೌಸ್, ಬೂಟ್ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು
ಸುರಕ್ಷತೆ ವಹಿಸಿದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು
Edited By: sandhya thejappa

Updated on: Sep 25, 2021 | 11:08 AM

ಮಂಡ್ಯ: ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ಕೂ ಮುನ್ನ ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವ ಘಟನೆ ವರದಿಯಾಗಿದೆ. ಬರಿಗೈನಿಂದಲೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ದೃಶ್ಯ ಕಂಡುಬಂದಿದೆ.

ಮೊನ್ನೆ ನಡೆದ ಪೌರ ಕಾರ್ಮಿಕರ ದಿನಾಚರಣೆ ದಿನವೇ ಕಾರ್ಮಿಕರಿಗೆ ಅಗೌರವ ಸೂಚಿಸಿಲಾಗಿದೆ. ಗ್ಲೌಸ್, ಗಮ್ ಬೂಟ್ ಇಲ್ಲದೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛ ಮಾಡಿದ್ದಾರೆ. ಪಿಡಿಓ ಅಧಿಕಾರಿ ಗ್ಲೌಸ್, ಬೂಟ್ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಸುರಕ್ಷತಾ ಕ್ರಮವಹಿಸಿ ಕಾರ್ಮಿಕರು ಕೆಲಸ ಮಾಡಬೇಕಂಬ ನಿಯಮವಿದ್ದರೂ ನಿರ್ಲಕ್ಷ್ಯ ತೋರಿದ ಬೇಲೂರು ಪಂಚಾಯತಿ ಪಿಡಿಓ ಸುರೇಶ್ ಅಮಾನವೀಯ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಬೇಜವಾಬ್ದಾರಿ ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹತ್ತಾರು ಮಂದಿ ಪೌರ ಕಾರ್ಮಿಕರು ಪೌರ ಕಾರ್ಮಿಕರ ದಿನಾಚರಣೆ ದಿನವೇ ಬೇಲೂರು ಗ್ರಾಮದಲ್ಲಿ ಬರಿಗೈಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಇದನ್ನೂ ಓದಿ:
ಕಸ ತೆಗೆಯುತ್ತಿದ್ದಾಗ ಕಂತೆಕಂತೆ ನೋಟು ಕಂಡು ಕಂಗಾಲಾದ ಪೌರಕಾರ್ಮಿಕರು; ಸ್ಥಳಕ್ಕೆ ಓಡೋಡಿ ಬಂದ ಪೊಲೀಸರು ಬಿದ್ದುಬಿದ್ದು ನಕ್ಕರು !

ಇದನ್ನೂ ಓದಿ:
ಪೌರ ಕಾರ್ಮಿಕರಿಗೆ ಸದ್ಯದಲ್ಲೇ ಕೈಮಗ್ಗದ ಸಮವಸ್ತ್ರ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹೊಸ ಪ್ರಯೋಗ

(Mandya pourakarmikas clean bare handed in belur village pdo negligence criticised)

Published On - 8:34 am, Sat, 25 September 21

Web contact

TV9 Kannada

Read More
Follow Us