AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿತರ ನೆರವಿಗೆ ನಿಂತ ಮಂಡ್ಯದ ಪುರಸಭೆ ಸದಸ್ಯೆ; ಸಹಾಯ ಹಸ್ತಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ಕಳೆದ ವರ್ಷ ಲಾಕ್​ಡೌನ್ ಆಗಿದ್ದ ಸಂದರ್ಭದಲ್ಲಿ, ಪ್ರಿಯಾಂಕ ಪ್ರತೀ ಭಾನುವಾರದಂದು 250 ಕೆಜಿ ಕೋಳಿ​ ತಂದು ಚಿಕನ್ ಚಾಪ್ಸ್, ಸಾಂಬಾರ್, ಮುದ್ದೆ ಸೇರಿದಂತೆ ವಿವಿಧ ರೀತಿಯ ಅಡುಗೆ ತಯಾರಿಸಿ ನೀಡಿದ್ದರು. ಇದೀಗ ಮತ್ತೊಮ್ಮೆ ತಮ್ಮ ಕಾಯಕವನ್ನು ಮುಂದುವರೆಸಿದ್ದಾರೆ.

ಕೊವಿಡ್ ಸೋಂಕಿತರ ನೆರವಿಗೆ ನಿಂತ ಮಂಡ್ಯದ ಪುರಸಭೆ ಸದಸ್ಯೆ; ಸಹಾಯ ಹಸ್ತಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ಪುರಸಭೆ ಸದಸ್ಯೆ ಪ್ರಿಯಾಂಕ ಮತ್ತು ಅವರ ಪತಿ ಬಡವರಿಗೆ ಬಿಯಾನಿ ಬಡಿಸುತ್ತಿರುವುದು
preethi shettigar
|

Updated on: May 22, 2021 | 1:52 PM

Share

ಮಂಡ್ಯ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸಾವು- ನೋವಿನ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಆದರೆ ಲಾಕ್​ಡೌನ್​ ನಿಂದಾಗಿ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಹೀಗಿರುವಾಗ ಕೆಲವು ಸಂಘ-ಸಂಸ್ಥೆಗಳು, ನಟ-ನಟಿಯರು ಸಹಾಯ ಹಸ್ತ ನೀಡಿದ್ದಾರೆ. ಅಂತವರ ಸಾಲಿಗೆ ಮಂಡ್ಯದ ದಂಪತಿಗಳಿಬ್ಬರೂ ಸೇರಿದ್ದು, ಕೊರೋನಾದಿಂದಾಗಿ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸುತ್ತಿರುವುದರ ಜತೆಗೆ ಕೊವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ನೂರಾರು ಜನರಿಗೆ ಊಟ ನೀಡಿ ನೆರವು ನೀಡುತ್ತಿದ್ದಾರೆ.

ಮಂಡ್ಯದಲ್ಲೂ ಸಾಕಷ್ಟು ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅತೀ ಹೆಚ್ಚು ಕೊರೊನಾ ಸಕ್ರಿಯ ಪಟ್ಟಿಯಲ್ಲಿ ಮಂಡ್ಯದ ಹೆಸರೂ ಇದೆ. ಹೀಗಾಗಿಯೇ ಇಲ್ಲಿ ನೊಂದ ಜನರು ಹೆಚ್ಚಾಗಿ ಇದ್ದಾರೆ. ಇವರ ನೆರವಿಗೆ ಸದ್ಯ ಮಂಡ್ಯ ಜಿಲ್ಲೆ ಮದ್ದೂರು ಪುರಸಭೆ ಸದಸ್ಯೆ ಪ್ರಿಯಾಂಕ ನಿಂತಿದ್ದಾರೆ. ಮದ್ದೂರು ಪಟ್ಟಣದ ಕೆ. ಹೆಚ್ ನಗರದ ನಿವಾಸಿಯಾಗಿರುವ ಪ್ರಿಯಾಂಕ ಮದ್ದೂರು ಪುರಸಭೆಯ 4 ನೇ ವಾರ್ಡ್​ನ ಸದಸ್ಯೆ ಆಗಿದ್ದು, ಜನರು ಕಷ್ಟಪಡುತ್ತಿದ್ದನ್ನ ಗಮನಿಸಿ ತಾವು ಏನಾದರೂ ಮಾಡಬೇಕು ಎಂದು ನಿರ್ಧರಿಸಿಕೊಂಡು ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ತಾಲೂಕಿನಲ್ಲಿ ಈಗಾಗಲೇ 20 ಕ್ಕೂ ಹೆಚ್ಚು ಜನರ ಅಂತ್ಯಸಂಸ್ಕಾರ ನೆರವೇರಿಸಿರುವ ಪ್ರಿಯಾಂಕ, ಯಾವುದೇ ಜನಾಂಗದವರು ಮರಣ ಹೊಂದಿದರೂ ಕೊವಿಡ್ ನಿಯಮಗಳಿಗೆ ಅನುಸಾರವಾಗಿ, ಆಯಾ ಜನಾಂಗದ ನಂಬಿಕೆಗೆ ಅನುಗುಣವಾಗಿ ಅಂತ್ಯಕ್ರಿಯೆ ನಡೆಸುತ್ತಿದ್ದಾರೆ. ಇಷ್ಟೇ ಅಲ್ಲ ಕೊವಿಡ್ ಸೋಂಕಿಗೆ ತುತ್ತಾಗಿ ವಿವಿಧ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಅಡುಗೆ ತಯಾರಿಸಿ ಊಟವನ್ನ ನೀಡುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿನ ಬಹುತೇಕ ಜನರು ನಾನ್ ವೆಜ್ ಪ್ರಿಯರಾಗಿದ್ದು, ಇಂತಹ ಸಮಯದಲ್ಲಿ ಅವರಿಗೆ ನಾನ್ ವೆಜ್ ಆಹಾರದ ಅಗತ್ಯವಿದೆ ಎಂಬುದನ್ನ ಅರಿತು ವಾರಕ್ಕೊಂದು ದಿನ ನೂರಾರು ಜನರಿಗೆ ಚಿಕನ್ ಬಿರಿಯಾನಿ ತಯಾರಿಸಿ ತಾವೇ ಕುದ್ದು ಹೋಗಿ ಆಹಾರ ನೀಡಿ ಬರುತ್ತಿದ್ದಾರೆ.

ಕಳೆದ ವರ್ಷ ಲಾಕ್​ಡೌನ್ ಆಗಿದ್ದ ಸಂದರ್ಭದಲ್ಲಿ, ಪ್ರಿಯಾಂಕ ಪ್ರತೀ ಭಾನುವಾರದಂದು 250 ಕೆಜಿ ಕೋಳಿ​ ತಂದು ಚಿಕನ್ ಚಾಪ್ಸ್, ಸಾಂಬಾರ್, ಮುದ್ದೆ ಸೇರಿದಂತೆ ವಿವಿಧ ರೀತಿಯ ಅಡುಗೆ ತಯಾರಿಸಿ ನೀಡಿದ್ದರು. ಇದೀಗ ಮತ್ತೊಮ್ಮೆ ತಮ್ಮ ಕಾಯಕವನ್ನು ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೆ ಮದ್ದೂರು ಪಟ್ಟಣದ ತಮ್ಮ ವಾರ್ಡ್ ಸೇರಿದಂತೆ ಬೇರೆ ಬೇರೆ ವಾರ್ಡ್​ಗಳಲ್ಲಿ ಸ್ಯಾನಿಟೈಸ್ ಮಾಡುವುದು, ಜನರಿಗೆ ಮಾಸ್ಕ್​ಗಳನ್ನ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸವನ್ನೂ ಮಾಡಿದ್ದಾರೆ. ಇವರಿಗೆ ಪತಿ ಅಪ್ಪುಗೌಡ ಸಹ ಸಾಥ್ ನೀಡಿದ್ದು, ಪತ್ನಿಯ ಎಲ್ಲಾ ಕೆಲಸದಲ್ಲೂ ಜತೆ ನಿಂತು ಕೊವಿಡ್ ಸಂದರ್ಭದಲ್ಲಿ ಜನರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೀವಿ ಎಂದು ತಿಳಿಸಿದ್ದಾರೆ.

ಕೊರೊನಾ ವಿರುದ್ಧ ಸಾಕಷ್ಟು ಜನರು ತಮ್ಮದೇ ಆದ ರೀತಿಯಲ್ಲಿ ಹೋರಾಟ ಮಾಡುತ್ತಿದ್ದು, ಮದ್ದೂರು ಪುರಸಭೆ ಸದಸ್ಯೆ ಆಗಿರುವ ಪ್ರಿಯಾಂಕ ಅವರು ತಮ್ಮ ವಾರ್ಡ್​ನಲ್ಲಿ ಜನರಿಗೆ ಅರಿವು ಮೂಡಿಸುವುದರ ಜತೆಗೆ ಸೋಂಕಿತರು ಮೃತಪಟ್ಟರೆ ಅಂತ್ಯಸಂಸ್ಕಾರ ನೆರವೇರಿಸುವ ಕಾಯಕ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೇಳೆ ಮಕ್ಕಳಿಗೆ ಶಿಕ್ಷಣ ನೀಡಬೇಕು; ರಾಜ್ಯ ಸರ್ಕಾರಕ್ಕೆ ಬೇಡಿಕೆಯಿಟ್ಟ ರುಪ್ಸಾ

ಕೊರೊನಾದಿಂದ ಸತ್ತ ತನ್ನ ಹೆತ್ತವರ ಶವ ಕೊಳೆಯುತ್ತಿರುವುದನ್ನು ಅಸಹಾಯಕನಾಗಿ ನಿಂತು ನೋಡಿದ್ದಾರೆ ಈ ಪುತ್ರ…

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ