AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಹಣ ನೀಡಿ 13 ವರ್ಷ ಕಳೆದರೂ ಸಿಕ್ಕಿಲ್ಲ ವಸತಿ ಭಾಗ್ಯ; ಅಂಬಿ ಆಪ್ತನ ವಿರುದ್ಧ ಪೊಲೀಸ್ ನಿವೃತ್ತ ಸಂಘದಿಂದ ಗಂಭೀರ ಆರೋಪ

2009ರಲ್ಲಿ ಮಂಡ್ಯ ಪೊಲೀಸ್ ಪತ್ತಿನ ಗೃಹ ನಿರ್ಮಾಣ ಸಹಕಾರ ಸಂಘದವರು ಅಮರಾವತಿ ಚಂದ್ರಶೇಖರ್ ಬಳಿ ವ್ಯವಹಾರ ಮಾಡಿದ್ರು. 4.5 ಲಕ್ಷಕ್ಕೆ 30 ಬೈ 40 ನಿವೇಶನ ನೀಡುತ್ತೆನೆಂದು 507 ಮಂದಿ ಬಳಿ ಚಂದ್ರಶೇಖರ್ ಹಣ ಪಡೆದಿದ್ದಾರೆ. 22 ಕೋಟಿ 5 ಲಕ್ಷ ಕೋಟಿ ಪ್ರಾಜೆಕ್ಟ್ ನಲ್ಲಿ, ಈಗಾಗ್ಲೆ 18.88 ಕೋಟಿ ಹಣ ಸಂದಾಯವಾಗಿದೆ.

ಕೋಟಿ ಕೋಟಿ ಹಣ ನೀಡಿ 13 ವರ್ಷ ಕಳೆದರೂ ಸಿಕ್ಕಿಲ್ಲ ವಸತಿ ಭಾಗ್ಯ; ಅಂಬಿ ಆಪ್ತನ ವಿರುದ್ಧ ಪೊಲೀಸ್ ನಿವೃತ್ತ ಸಂಘದಿಂದ ಗಂಭೀರ ಆರೋಪ
ನಿವೇಷನಕ್ಕಾಗಿ ಹಣ ಕೊಟ್ಟು ಕಂಗಾಲಾದ ನಿವೃತ್ತ ಪೊಲೀಸರು
ಆಯೇಷಾ ಬಾನು
|

Updated on: May 26, 2023 | 8:46 AM

Share

ಮಂಡ್ಯ: ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಲಾ ಎಂಡ್ ಆರ್ಡರ್ ಕಾಪಾಡೋರು ಪೊಲೀಸರು(Police). ಆದ್ರೆ ಅಂತ ಪೊಲೀಸರಿಗೆ ಈಗ ಮೋಸವಾಗಿದೆ. ಜೀವಮಾನವಿಡಿ ಕೂಡಿಟ್ಟ ಹಣವನ್ನ ಕೊಟ್ಟು ನಿವೇಷನ ಕೊಂಡು ಕೊಳ್ಳುವ ಸಂತದಲ್ಲಿದ್ದವರಿಗೆ ಮಹಾ ವಂಚನೆಯಾಗಿದೆ. ಮನೆ ಕಟ್ಟಿ ನೋಡು ಮದ್ವೆ ಮಾಡಿ ನೋಡು ಅನ್ನೋ ಮಾತಿದೆ. ಪ್ರತಿಯೊಬ್ಬರಿಗೂ ಸ್ವಂತ ಮನೆ ಕಟ್ಟಬೇಕು ಅನ್ನೋ ಆಸೆ ಇರುತ್ತೆ. ಇದೇ ರೀತಿಯ ಆಸೆ ಮಂಡ್ಯ ಪೊಲೀಸರಿಗೂ ಸಹ ಇತ್ತು. ಪೊಲೀಸ್ ಗೃಹ ನಿರ್ಮಾಣ ಸಂಘದವರು ಅಮರಾವತಿ ಡೆವಲಪರ್ಸ್ ಬಳಿ ಹಣ ಕೊಟ್ಟು ನಿವೇಶನ ಕೊಂಡು ಕೊಳ್ಳುವ ಪ್ಲಾನ್ ಮಾಡಿದ್ರು. ಆದ್ರೆ ಹಣ ಕೊಟ್ಟು ಬರೋಬ್ಬರಿ 12 ರಿಂದ 13 ವರ್ಷಗಳು ಕಳೆದ್ರು ನಿವೇಶನ ಮಾತ್ರ ಇನ್ನೂ ಸಿಕ್ಕಿಲ್ಲ.

ಹಣ ಪಡೆದು ನಿವೇಶನ ನೀಡದೆ ವಂಚಿಸಿದ್ರಾ ಅಂಬಿ ಆಪ್ತ

ರಿಟೈಡ್​ಮೆಂಟ್ ಲೈಫ್ ಅಲ್ಲಿ ಮನೆ ಮಾಡ್ಕೊಂಡು ಆರಾಮಾಗಿ ಇರಬೇಕು ಅಂದುಕೊಂಡ ಪೊಲೀಸರು ನಿದ್ದೆಗೆಡುವಂತಾಗಿದೆ. ಅಂದ್ಹಾಗೆ ನಿವೇಶನದ ಆಸೆ ಹೊಂದಿದವ್ರಿಗೆ ಮೋಸ ಮಾಡಿರುವ ಆರೋಪ ಎದುರಸ್ತಿರೋದು ಬೇರಾರು ಅಲ್ಲ. ನಟ ಅಂಬರೀಶ್​​ ಆಪ್ತನೆಂದು ಖ್ಯಾತರಾಗಿರುವ ಕಾಂಗ್ರೆಸ್​ ಮುಖಂಡ ಅಮರಾವತಿ ಚಂದ್ರಶೇಖರ್. ಇವರು ಅಮರಾವತಿ ಡೆವಲಪರ್ಸ್ ಹೆಸ್ರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸ್ತಿದ್ದಾರೆ. 2009ರಲ್ಲಿ ಮಂಡ್ಯ ಪೊಲೀಸ್ ಪತ್ತಿನ ಗೃಹ ನಿರ್ಮಾಣ ಸಹಕಾರ ಸಂಘದವರು ಅಮರಾವತಿ ಚಂದ್ರಶೇಖರ್ ಬಳಿ ವ್ಯವಹಾರ ಮಾಡಿದ್ರು. 4.5 ಲಕ್ಷಕ್ಕೆ 30 ಬೈ 40 ನಿವೇಶನ ನೀಡುತ್ತೆನೆಂದು 507 ಮಂದಿ ಬಳಿ ಚಂದ್ರಶೇಖರ್ ಹಣ ಪಡೆದಿದ್ದಾರೆ. 22 ಕೋಟಿ 5 ಲಕ್ಷ ಕೋಟಿ ಪ್ರಾಜೆಕ್ಟ್ ನಲ್ಲಿ, ಈಗಾಗ್ಲೆ 18.88 ಕೋಟಿ ಹಣ ಸಂದಾಯವಾಗಿದೆ. 27 ಎಕರೆ ಜಾಗದಲ್ಲಿ 17 ಎಕರೆಯನ್ನ ಪೊಲೀಸರ ನಿವೇಶನಕ್ಕೆ ಮೀಸಲಿಡಲಾಗಿದೆ. ಆದ್ರೆ 13 ವರ್ಷ ಕಳೆದ್ರು ಹಣ ಕಟ್ಟಿದವರಿಗೆ ಇನ್ನು ನಿವೇಶನ ಮಾತ್ರ ಸಿಕ್ಕಿಲ್ಲ.

ಇದನ್ನೂ ಓದಿ: ಮಂಡ್ಯ: ವಸತಿ ನೀಡುವುದಾಗಿ ವಂಚನೆ ಆರೋಪ; ನಿವೃತ್ತ ಪೊಲೀಸ್ ಅಧಿಕಾರಿಗಳಿಂದ ಪ್ರತಿಭಟನೆ

ಈ ವಿಷಯವಾಗಿ ಪೊಲೀಸರು ವಿಚಾರಿಸಿದ್ರೆ ಇವತ್ತು ಕೊಡ್ತಿನಿ ನಾಳೆ ಕೊಡ್ತೀನಿ ಅಂತ ಪೊಲೀಸರಿಗೆ ಯಾಮಾರಿಸುತ್ತಲೇ ಇದ್ದಾರೆ. ಇದರಿಂದ ರೋಸಿ ಹೋಗಿರೋ ಪೊಲೀಸರು, ಅಧಿಕಾರಿಗಳು ಮೊರೆ ಹೋಗಿದ್ದಾರೆ. ವಿಪರ್ಯಾಸ ಅಂದ್ರೆ ಹಣ ಕೊಟ್ಟಿರೋರ ಪೈಕಿ ಬಹುತೇಕರು ನಿವೃತ್ತಿಯಾಗಿದ್ರೆ ಇನ್ನು ಕೆಲವರು ಮೃತಪಟ್ಟಿದ್ದಾರೆ.

ಅಮರಾವತಿ ಚಂದ್ರಶೇಖರ್​ ಸರಿಯಾಗಿ ರೆಸ್ಪಾನ್ಸ್ ಮಾಡ್ತಿಲ್ಲ. ಇವತ್ತು ನಾಳೆ ಎಂದುಕೊಂಡೆ 13 ವರ್ಷ ಕಳೆದಿದ್ದಾರೆ. ಸಾಲದ್ದಕ್ಕೆ ಪೊಲೀಸರಿಗಾಗಿ ಕಾಯ್ದಿರಿಸಿರುವ ಜಮೀನಿನ ಮೇಲೆಯೂ 5 ಕೋಟಿ ಸಾಲ ಪಡೆದಿರೋ ಆರೋಪ ಕೇಳಿ ಬಂದಿದೆ.ಅದೇನೆ ಹೇಳಿ ಹಣ ಪಡೆದು 13 ವರ್ಷಗಳಿಂದ ಯಾಮಾರಿಸಿಕೊಂಡು ಬಂದಿದ್ದಾರೆ. ಸದ್ಯ ನಿವೃತ್ತ ಪೊಲೀಸ್ ಅಧಿಕಾರಿಗಳು ಕಾನೂನಿನ ಮೊರೆ ಹೋಗಲು ಚಿಂತನೆ ನಡೆಸುತ್ತಿದ್ದು ಮುಂದೆ ಏನಾಗಲಿದೆಯೋ ಕಾದು ನೋಡ್ಬೇಕಿದೆ.

ವರದಿ: ಸೂರಜ್ ಪ್ರಸಾದ್, TV9

ಮತ್ತಷ್ಟು ಮಂಡ್ಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ