AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿಸಿ ನಾಲೆಯಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು

ಶ್ರೀರಂಗಪಟ್ಟಣದ ಬಳಿ ವಿ.ಸಿ. ನಾಲೆಯಲ್ಲಿ ಕಾಲು ಜಾರಿ ಬಿದ್ದು ಮೈಸೂರಿನ ಗೌಸಿಯಾನಗರದ ಸೋನು (17), ಸಿಮ್ರಾನ್ (16) ಮತ್ತು ಸಿದ್ದೇಶ್ (9) ಎಂಬ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಈ ಮೂವರು ಚಿಕ್ಕಾಯರಳ್ಳಿಯ ಮಾರಮ್ಮ ಜಾತ್ರೆಗೆ ತೆರಳಿದ್ದರು. ಸೋನು ಮತ್ತು ಸಿದ್ದೇಶ್ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಿಮ್ರಾನ್ಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ದುರ್ಘಟನೆ ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಡ್ಯ: ವಿಸಿ ನಾಲೆಯಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು
ವಿಸಿ ನಾಲೆಯಲ್ಲಿ ಬಾಲಕನಿಗಾಗಿ ಹುಡುಕಾಟ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Apr 07, 2025 | 8:13 PM

Share

ಮಂಡ್ಯ, ಏಪ್ರಿಲ್​ 07: ಕಾಲುಜಾರಿ ವಿಸಿ ನಾಲೆಯಲ್ಲಿ (VC Nala) ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ನಾರ್ತ್​ ಬ್ಯಾಂಕ್ ಸಮೀಪ ನಡೆದಿದೆ. ಮೈಸೂರಿನ ಗೌಸಿಯಾನಗರದ ನಿವಾಸಿಗಳಾದ ಸೋನು (17), ಸಿಮ್ರಾನ್ (16), ಸಿದ್ದೇಶ್ (9) ಮೃತ ದುರ್ದೈವಿಗಳು. ಮೂವರು ಚಿಕ್ಕಾಯರಳ್ಳಿಯ ಮಾರಮ್ಮ ಜಾತ್ರೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಸೋನು ಹಾಗೂ ಸಿದ್ದೇಶ್ ಅವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಸಿಮ್ರಾನ್​ಗಾಗಿ ವಿಸಿ ನಾಲೆಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕೆಆರ್​​ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾವಿಯಲ್ಲಿ ಮುಳುಗಿ ಐಟಿಐ ವಿದ್ಯಾರ್ಥಿ ಸಾವು

ಕೋಲಾರ: ಮುಳಬಾಗಿಲು ತಾಲೂಕಿನ ದೇವರಾಯಸಮುದ್ರ ಬಳಿ ಬಾವಿಯಲ್ಲಿ ಮುಳುಗಿ ಐಟಿಐ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ವಿದ್ಯಾರ್ಥಿ ಪ್ರಜ್ವಲ್​ ಮೃತದುರ್ದೈವಿ. ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಪ್ರಜ್ವಲ್ ಸಾವಿಗೀಡಾಗಿದ್ದಾರೆ. ಪೊಲೀಸರು ಬಾವಿಯಿಂದ​ ಮೃತದೇಹ ಹೊರತೆಗೆದಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ.. ಪತಿ ಕಥೆ ಮುಗಿಸಿದ ಪತ್ನಿ, ಗಂಡನ ಶವದ ಮುಂದೆ ಕಣ್ಣೀರಿಟ್ಟಿದ್ದ ಮಳ್ಳಿ

ಇದನ್ನೂ ಓದಿ
Image
ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!
Image
ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ!
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಉದ್ಯಮಿ ಕೊಲೆಗೆ ಟ್ವಿಸ್ಟ್; ಹೆಣ್ಣು ಕೊಟ್ಟ ಅತ್ತೆಯೇ ಕತ್ತು ಸೀಳಿ ಹತ್ಯೆ!

ಅಪಘಾತದಲ್ಲಿ ಯುವಕ ಸಾವು

ಚಿತ್ರದುರ್ಗ: ಹೊಳಲ್ಕೆರೆ ಹೊರವಲಯದಲ್ಲಿ ಕಾರು-ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರಿಯೂರು ಮೂಲದ ಬೋರೇಶ್ (36) ಮೃತ ದುರ್ದೈವಿ. ಬೈಕ್​​ ಹಿಂಬದಿ ಸವಾರ ಸುನಿಲ್​ಗೆ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿ ಸಂಬಂಧಿ ಮದುವೆ ಮುಗಿಸಿ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Mon, 7 April 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು