AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಹರಾಜಿಗಿದೆ, ಹೆಚ್ಚು ಬಿಡ್​​​ ಕೂಗಿದವರನ್ನು ಸರ್ಕಾರ ನೇಮಿಸಲಿದೆ ಎಂಬ ಪೋಸ್ಟ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್
TV9 Web
| Edited By: |

Updated on:Oct 28, 2021 | 5:26 PM

Share

ಮಂಡ್ಯ: ಮಂಡ್ಯದ ಮಹಿಳಾ ಎಸ್​ಪಿ ನೇಮಕಾತಿ ವಿವಾದ ಇನ್ನೂ ಬಗೆಹರಿದಿಲ್ಲ. ದಿನದಿಂದ ದಿನಕ್ಕೆ ಈ ಪ್ರಕರಣದಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜಕೀಯ ಒತ್ತಡದಿಂದ ಮಂಡ್ಯದ ನೂತನ ಮಹಿಳಾ ಎಸ್​ಪಿ ಸುಮನ್ ಡಿ. ಪನ್ನೇಕರ್ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಕಳೆದ 1 ವಾರದಿಂದ ಮಂಡ್ಯ ಎಸ್​ಪಿ ಸ್ಥಾನ ಖಾಲಿಯಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡ್ಯ ಎಸ್​ಪಿ ಅಧಿಕಾರ ಸ್ವೀಕರಿಸಲು ಯಾವುದೇ ಅಡ್ಡಿಯಿಲ್ಲ ಎಂದಿದ್ದಾರೆ.

ಮಂಡ್ಯ ಎಸ್​ಪಿ ನೇಮಕ ವಿಚಾರದಲ್ಲಿ ಯಾವುದೇ ಒತ್ತಡವಿಲ್ಲ. ಅನೇಕ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಅವರಿಗೆ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳುವುದಕ್ಕೆ ಸಮಯ ಇರುತ್ತದೆ. ಮಂಡ್ಯ ಎಸ್​ಪಿ ಸುಮನ್ ಪನ್ನೇಕರ್ ಅಧಿಕಾರ ಸ್ವೀಕರಿಸಲು ಯಾವುದೇ ತಡೆಯಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇನ್ನು, ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಹರಾಜಿಗಿದೆ, ಹೆಚ್ಚು ಬಿಡ್​​​ ಕೂಗಿದವರನ್ನು ಸರ್ಕಾರ ನೇಮಿಸಲಿದೆ ಎಂಬ ಪೋಸ್ಟ್​ಗಳು ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಕ್ಕು ಹೋರಾಟಗಾರ ರವೀಂದ್ರ ಈ ಪೋಸ್ಟ್​ ಹಾಕಿದ್ದು, ಮಂಡ್ಯ ಎಸ್​ಪಿ ಹುದ್ದೆ ಒಂದು ವಾರದಿಂದ ಖಾಲಿಯಿದೆ. ಭ್ರಷ್ಟ ಐಪಿಎಸ್​, KSPS ಅಧಿಕಾರಿಗಳಿಗೆ ಸುವರ್ಣಾವಕಾಶ ಸಿಕ್ಕಂತಾಗಿದೆ. ಹೆಚ್ಚು ಬಿಡ್​ ಕೂಗಿದವರಿಗೆ ಸರ್ಕಾರ ಎಸ್​ಪಿ ಹುದ್ದೆ ನೀಡುತ್ತದಾ? ಎಂದು ಪ್ರಶ್ನೆ ಹಾಕಿದ್ದಾರೆ.

ಅ. 20ರಂದು ಮಂಡ್ಯ ಎಸ್​ಪಿ ಡಾ.ಎಂ. ಅಶ್ವಿನಿ ಅವರನ್ನು ವರ್ಗಾವಣೆಗೊಳಿಸಿದ್ದ ಸರ್ಕಾರ ಆ ಜಾಗಕ್ಕೆ ಸುಮನ್ ಡಿ. ಪನ್ನೇಕರ್​ ಅವರನ್ನು ನೇಮಕ ಮಾಡಿತ್ತು. ಆದರೆ, ಸುಮನ್ ಡಿ. ಪನ್ನೇಕರ್​ ಅವರಿಗೆ ಎಸ್​ಪಿ ಆಗಿ ಚಾರ್ಜ್​ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮೌಖಿಕ ಆದೇಶ ನೀಡಿದ್ದರು. ಇದರಿಂದ ಕಳೆದ 1 ವಾರದಿಂದ ಖಾಲಿಯಿರುವ ಮಂಡ್ಯ ಎಸ್​ಪಿ ಹುದ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರವೀಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮಂಡ್ಯಕ್ಕೆ ಎಸ್​​ಪಿ ಇಲ್ಲಾ! ರಾಯಚೂರು ಜಿಲ್ಲೆಗೆ ಜಿಲ್ಲಾಧಿಕಾರಿ ಇಲ್ಲ: ಪ್ರಭಾವಿ ರಾಜಕಾರಣಿಗಳ ಮೇಲುಗೈ

ಎಲೆಕ್ಷನ್ ಬ್ಯುಸಿಯಲ್ಲಿರುವ ಸರ್ಕಾರಿ ಆಡಳಿತ ಯಂತ್ರ: ಬಗೆಹರಿದಿಲ್ಲ ಮಂಡ್ಯ ಎಸ್ಪಿ ನೇಮಕ, ವಿವಾದ ಸೀದಾ ರಾಜ್ಯಪಾಲರ ಅಂಗಳಕ್ಕೆ

Published On - 5:22 pm, Thu, 28 October 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ