AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದಲ್ಲಿ ಪದೇಪದೇ ಪ್ರತ್ಯಕ್ಷಗೊಂಡು ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೋನಿಗೆ ಬಿದ್ದ ಚಿರತೆ
TV9 Web
| Edited By: |

Updated on:Jan 05, 2023 | 10:27 AM

Share

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ಜನರನ್ನು ಬಿಟ್ಟುಬಿಡದೆ ಕಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನೊಳಗೆ ಸೆರೆಸಿಕ್ಕಿದೆ (Leopard falls into cage). ಸಬ್ಬನಕುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಆಗಾಗ್ಗೆ ಕಾಣಿಸಕೊಳ್ಳುತ್ತಿತ್ತು. ಇದರಿಂದಾಗಿ ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಅದರ ಆಹಾರ ತಿನ್ನಲು ಹೋಗಿ ಸೆರೆಯಾಗಿದೆ.

ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟ ಸಬ್ಬನಕುಪ್ಪೆ ಗ್ರಾಮದ ಜನರು ಚಿರತೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸೆರೆಯಾದ ಚಿರತೆಯನ್ನ ದೂರದ ಅರಣ್ಯಕ್ಕೆ ಬಿಡಲು ನಿರ್ಧಾರಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಕೇಂದ್ರ ಆಹಾರ ಸಂಶೋಧ‌ನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ

ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲೂ ಚಿರತೆ ಭೀತಿ ಇದ್ದು, ಈ ಹಿಂದೆ ಬ್ಲಫ್ ಬಳಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬುವವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಗ್ರಾಮದಲ್ಲಿ ಕತ್ತಲಾದರೆ ಸಾಕು ಜನರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೂ ಮುನ್ನ ಕೆ.ಆರ್​.ಪೇಟೆ ತಾಲೂಕಿನ ಚಟ್ಟಂಗೆರೆಯಲ್ಲೂ ಚಿರತೆ ಕಾಣಿಸಿಕೊಂಡಿತ್ತು. ಗ್ರಾಮದ ಸುತ್ತಮುತ್ತ ಹಲವು ಬಾರಿ ಕಾಣಿಸಿಕೊಂಡಿದ್ದ ಚಿರತೆ ಮನೆ ಮುಂದೆ ಕಟ್ಟಿ ಹಾಕಿದ್ದ ಶ್ವಾನವನ್ನು ಕಚ್ಚಿ ಎಳೆದು ಕೊಂಡು ಹೋಗಿತ್ತು. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಚಿರತೆ ದಾಳಿಯಿಂದ ಕಂಗೆಟ್ಟ ಚಟ್ಟಂಗೆರೆ ಗ್ರಾಮಸ್ಥರು, ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Thu, 5 January 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!