AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ: ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ, ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನ, ವಿಡಿಯೋ ಬಹಿರಂಗ

ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪೂರ್ವನಿಯೋಜಿತ ಕೃತ್ಯ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಈ ಆರೋಪಗಳಿಗೆ ಪುಷ್ಟಿ ಕೊಡುವಂಥ ಕೆಲವು ವಿಡಿಯೋಗಳು ಬಯಲಾಗಿವೆ. ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನಿಸಿದ ವಿಡಿಯೋ ಇದೀಗ ಬಯಲಾಗಿವೆ.

ಪ್ರಶಾಂತ್​ ಬಿ.
| Edited By: |

Updated on: Sep 17, 2024 | 12:59 PM

Share

ಮಂಡ್ಯ, ಸೆಪ್ಟೆಂಬರ್ 17: ಮಂಡ್ಯದ ನಾಗಮಂಗಲ ಕೋಮು ಗಲಭೆಗೆ ಮೊದಲೇ ಸಂಚು ಹೂಡಿರುವುದಕ್ಕೆ ಘಟನೆ ಸಂಬಂಧಿತ ಒಂದೊಂದು ವಿಡಿಯೋಗಳೇ ಸಾಕ್ಷಿ ಹೇಳುತ್ತಿವೆ. ಗಲಭೆಯ ರಹಸ್ಯಗಳು ದಿನೇ ದಿನೇ ಬಯಲಾಗುತ್ತಲೇ ಇವೆ. ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಪೊಲೀಸರೇ ಅಸಹಾಯಕರಾಗಿ ನಿಂತಿರುವ ವಿಡಿಯೋ ಸೋಮವಾರ ಬಯಲಾಗಿತ್ತು. ಇದೀಗ ಗಲಭೆ ವೇಳೆ ಸಾಕ್ಷ್ಯನಾಶಕ್ಕೆ ಯತ್ನಿಸಿರುವ ಮತ್ತೊಂದು ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಕಿಡಿಗೇಡಿಗಳಿಂದ ಬೆಂಕಿ

ಕಿಡಿಗೇಡಿಗಳು ಮೊದಲೇ ಸಿದ್ಧತೆ ಮಾಡಿಕೊಂಡು ಏಕಾಏಕಿ ಪಾತ್ರೆ ಅಂಗಡಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚಿರುವುದು ಸಿಸಿಟಿವಿ ದೃಶ್ಯದದಿಂದ ಬಯಲಾಗಿದೆ. ಸೆಪ್ಟೆಂಬರ್ 11ರ ರಾತ್ರಿ 10.47ರ ಸುಮಾರಿಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವತ್ತು ಕಿಡಿಗೇಡಿಗಳ ಕೃತ್ಯಕ್ಕೆ ಇಡೀ ಪಾತ್ರೆ ಅಂಗಡಿಯೇ ಭಸ್ಮ ಆಗಿತ್ತು.

ಬೆಂಕಿ ಹಚ್ಚುವ ವೇಳೆ ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನ

ನಾಗಮಂಗಲ ಗಲಭೆ ಪೂರ್ವನಿಯೋಜಿತ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ದುಷ್ಕರ್ಮಿಗಳು ಯಾವಾಗ ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾರೋ, ಕೃತ್ಯ ಯಾರಿಗೂ ಗೊತ್ತಾಗಬಾರದು ಎಂದು ಸಾಕ್ಷ್ಯನಾಶಕ್ಕೆ ಯತ್ನಿಸಿದ್ದಾರೆ. ಬೆಂಕಿ ಹಚ್ಚುವ ವೇಳೆ ಸಿಸಿಟಿವಿಗೂ ಕಲ್ಲೆಸೆದು ಅಟ್ಟಹಾಸ ಮೆರೆದಿದ್ದಾರೆ.

ನಾಗಮಂಗಲ ಗಲಭೆಗೆ ಇದೆಯಾ ಬಾಂಗ್ಲಾ ವಲಸಿಗರ ನಂಟು?

ಈ ಮಧ್ಯೆ, ನಾಗಮಂಗಲ ಗಲಭೆಗೆ ಬಾಂಗ್ಲಾದೇಶ ವಲಸಿಗರ ನಂಟಿದೆ ಎಂದು ಜೆಡಿಎಸ್​ ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಬಾಂಗ್ಲಾ ದೇಶದವರು ಕೂಡ ಇದ್ದಾರೆ. ಅವರು ಹೇಗೆ ಬಂದಿದ್ದಾರೆ ಗೊತ್ತಿಲ್ಲ. ಪೆಟ್ರೋಲ್ ಬಾಂಬ್​ ಅನ್ನು ಸಾಮಾನ್ಯ ಜನರು ಎಸೆಯಲು ಸಾಧ್ಯವಿಲ್ಲ, ನಿಪುಣರಿಂದಷ್ಟೇ ಸಾಧ್ಯ. ತನಿಖೆಯನ್ನ ಎನ್​ಐಎಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎನ್​ಐಎಯಿಂದ ಮಾತ್ರ ತನಿಖೆ ಸಾಧ್ಯ: ಶೋಭಾ ಕರಂದ್ಲಾಜೆ

ನಾಗಮಂಗಲ ಗಲಭೆಯ ಹಿಂದೆ ಕೇರಳದ ಕೈವಾಡ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ಹೇಳಿದ್ದಾರೆ. ಎನ್​​ಐಎಯಿಂದ ಮಾತ್ರ ಪ್ರಕರಣದ ತನಿಖೆ ಮಾಡಲು ಸಾಧ್ಯ. ಕರ್ನಾಟಕ ಪೊಲೀಸರಿಗೆ ಇಂದು ಸತ್ವ ಇಲ್ಲ. ಯಾಕೆಂದರೆ, ಪೊಲೀಸರ ಕೈಯನ್ನು ರಾಜ್ಯ ಸರ್ಕಾರ ಕಟ್ಟಿ ಹಾಕಿದೆ. ಪೊಲೀಸರು ಕೇವಲ ರಾಜ್ಯ ಸರ್ಕಾರ ಹೇಳಿದಂತೆ ಮಾಡುತ್ತಾರೆ ಅಷ್ಟೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು

ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಇದು ಚಿಕ್ಕ ಘಟನೆ ಎಂದಿದ್ದಾರೆ. ಸಿಎಂ, ಗೃಹಸಚಿವರಿಂದ ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಎನ್​ಐಎ ತನಿಖೆಯಿಂದ ಯಾರು ಕುಮ್ಮಕ್ಕು ನೀಡಿದ್ದಾರೆಂಬುದನ್ನು ತಿಳಿಯಲು ಸಾಧ್ಯ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು