AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!

ರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾಭಾನು ಆರೋಪಿಸಿದ್ದಾರೆ.

ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!
ಹಿನಾ ಕೌಸರ್ ಮತ್ತು ತೌಸಿಫ್
Follow us
TV9 Web
| Updated By: preethi shettigar

Updated on: Aug 31, 2021 | 12:01 PM

ಮಂಡ್ಯ: ಜಿಲ್ಲೆಯ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರಾದ ಹಿನಾ ಕೌಸರ್ ಮತ್ತು ತೌಸಿಫ್ ಎಂಬಿಬ್ಬರು ದಾಖಲಾತಿ ಸೃಷ್ಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಿನಾ ಕೌಸರ್ ಮತ್ತು ತೌಸಿಫ್ ದಂಪತಿ ದೇಶದ್ರೋಹ ಕೃತ್ಯ ಎಸಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಮಂಡ್ಯದ ಕೆರೆ ಅಂಗಳದಲ್ಲಿ ನಕಲಿ ದಾಖಲಾತಿಗಳು ಸಿಗುತ್ತಿವೆ ಎಂದು ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಹಲವು ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ಸೇರಿ ನಕಲಿ ದಾಖಲೆ‌ ಸೃಷ್ಟಿಸಿ ಹಣ ಮಾಡುತ್ತಿದ್ದಾರೆ. ನಕಲಿ ಮಾರ್ಕ್ಸ್ ಕಾರ್ಡ್, ಓಟರ್ ಐಡಿ, ಪಾನ್‌ಕಾರ್ಡ್, ಪಾಸ್ ಪೋರ್ಟ್​ಗಳನ್ನು ಸೃಷ್ಟಿ ಮಾಡುತ್ತಿದ್ದು, ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಈ ರೀತಿಯ ದಂಧೆ ದೇಶಕ್ಕೆ ಮಾರಕವಾಗಲಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. 700 ರಿಂದ 3 ಸಾವಿರ ರೂ. ವರೆಗೂ ಹಣ ಪಡೆದು ನಕಲಿ ದಾಖಲೆಗಳ ಸೃಷ್ಟಿ ಮಾಡುತ್ತಿದ್ದಾರೆ. ಈ ಹಿಂದೆ ಮಂಡ್ಯ ನಗರ ವಿಳಾಸದಲ್ಲಿ ಛೋಟಾ ರಾಜನ್‌ ಹೆಸರಲ್ಲಿ ಸೃಷ್ಟಿಯಾಗಿದ್ದ ನಕಲಿ ಓಟರ್ ಐಡಿ ಬಗ್ಗೆ ಸುದ್ದಿಯಾಗಿತ್ತು. ಆದರೆ ಮುಂದಿನ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಈ ದಂಧೆಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಸಿಎಂ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ 13 ಜನರ ಕಿಸೆಗೆ ಬಿತ್ತು ಕತ್ತರಿ! 1.50 ಲಕ್ಷ ಕಳ್ಳತನದ ಆರೋಪ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ