AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!

ರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾಭಾನು ಆರೋಪಿಸಿದ್ದಾರೆ.

ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!
ಹಿನಾ ಕೌಸರ್ ಮತ್ತು ತೌಸಿಫ್
TV9 Web
| Edited By: |

Updated on: Aug 31, 2021 | 12:01 PM

Share

ಮಂಡ್ಯ: ಜಿಲ್ಲೆಯ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರಾದ ಹಿನಾ ಕೌಸರ್ ಮತ್ತು ತೌಸಿಫ್ ಎಂಬಿಬ್ಬರು ದಾಖಲಾತಿ ಸೃಷ್ಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಿನಾ ಕೌಸರ್ ಮತ್ತು ತೌಸಿಫ್ ದಂಪತಿ ದೇಶದ್ರೋಹ ಕೃತ್ಯ ಎಸಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಮಂಡ್ಯದ ಕೆರೆ ಅಂಗಳದಲ್ಲಿ ನಕಲಿ ದಾಖಲಾತಿಗಳು ಸಿಗುತ್ತಿವೆ ಎಂದು ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಹಲವು ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ಸೇರಿ ನಕಲಿ ದಾಖಲೆ‌ ಸೃಷ್ಟಿಸಿ ಹಣ ಮಾಡುತ್ತಿದ್ದಾರೆ. ನಕಲಿ ಮಾರ್ಕ್ಸ್ ಕಾರ್ಡ್, ಓಟರ್ ಐಡಿ, ಪಾನ್‌ಕಾರ್ಡ್, ಪಾಸ್ ಪೋರ್ಟ್​ಗಳನ್ನು ಸೃಷ್ಟಿ ಮಾಡುತ್ತಿದ್ದು, ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಈ ರೀತಿಯ ದಂಧೆ ದೇಶಕ್ಕೆ ಮಾರಕವಾಗಲಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. 700 ರಿಂದ 3 ಸಾವಿರ ರೂ. ವರೆಗೂ ಹಣ ಪಡೆದು ನಕಲಿ ದಾಖಲೆಗಳ ಸೃಷ್ಟಿ ಮಾಡುತ್ತಿದ್ದಾರೆ. ಈ ಹಿಂದೆ ಮಂಡ್ಯ ನಗರ ವಿಳಾಸದಲ್ಲಿ ಛೋಟಾ ರಾಜನ್‌ ಹೆಸರಲ್ಲಿ ಸೃಷ್ಟಿಯಾಗಿದ್ದ ನಕಲಿ ಓಟರ್ ಐಡಿ ಬಗ್ಗೆ ಸುದ್ದಿಯಾಗಿತ್ತು. ಆದರೆ ಮುಂದಿನ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಈ ದಂಧೆಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಸಿಎಂ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ 13 ಜನರ ಕಿಸೆಗೆ ಬಿತ್ತು ಕತ್ತರಿ! 1.50 ಲಕ್ಷ ಕಳ್ಳತನದ ಆರೋಪ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?