ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!

ರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾಭಾನು ಆರೋಪಿಸಿದ್ದಾರೆ.

ಈ ಹಿಂದೆ ಛೋಟಾ ರಾಜನ್‌ ಹೆಸರಲ್ಲಿ ನಕಲಿ ವೋಟರ್ ಐಡಿ ಸೃಷ್ಟಿ; ಈಗ ಮಂಡ್ಯದ ಕೆರೆ ಅಂಗಳದಲ್ಲಿ ಸಿಕ್ತಿದೆ ನಕಲಿ ದಾಖಲಾತಿಗಳು!
ಹಿನಾ ಕೌಸರ್ ಮತ್ತು ತೌಸಿಫ್
Follow us
| Updated By: preethi shettigar

Updated on: Aug 31, 2021 | 12:01 PM

ಮಂಡ್ಯ: ಜಿಲ್ಲೆಯ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರಾದ ಹಿನಾ ಕೌಸರ್ ಮತ್ತು ತೌಸಿಫ್ ಎಂಬಿಬ್ಬರು ದಾಖಲಾತಿ ಸೃಷ್ಟಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಿನಾ ಕೌಸರ್ ಮತ್ತು ತೌಸಿಫ್ ದಂಪತಿ ದೇಶದ್ರೋಹ ಕೃತ್ಯ ಎಸಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಮಂಡ್ಯದ ಕೆರೆ ಅಂಗಳದಲ್ಲಿ ನಕಲಿ ದಾಖಲಾತಿಗಳು ಸಿಗುತ್ತಿವೆ ಎಂದು ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಹಲವು ವರ್ಷಗಳಿಂದ ಪತಿ, ಪತ್ನಿ ಇಬ್ಬರೂ ಸೇರಿ ನಕಲಿ ದಾಖಲೆ‌ ಸೃಷ್ಟಿಸಿ ಹಣ ಮಾಡುತ್ತಿದ್ದಾರೆ. ನಕಲಿ ಮಾರ್ಕ್ಸ್ ಕಾರ್ಡ್, ಓಟರ್ ಐಡಿ, ಪಾನ್‌ಕಾರ್ಡ್, ಪಾಸ್ ಪೋರ್ಟ್​ಗಳನ್ನು ಸೃಷ್ಟಿ ಮಾಡುತ್ತಿದ್ದು, ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ದಾಖಲೆಗಳನ್ನು ಮಾಡಿಕೊಡುತ್ತಿದ್ದಾರೆ. ಅಲ್ಲದೆ ದೇಶದೊಳಗೆ ಅಕ್ರಮವಾಗಿ ನುಸುಳಿ ಬಂದವರಿಗೂ ನಕಲಿ ದಾಖಲೆ ಮಾಡಿಕೊಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಆರೋಪಿಸಿದ್ದಾರೆ.

ಈ ರೀತಿಯ ದಂಧೆ ದೇಶಕ್ಕೆ ಮಾರಕವಾಗಲಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. 700 ರಿಂದ 3 ಸಾವಿರ ರೂ. ವರೆಗೂ ಹಣ ಪಡೆದು ನಕಲಿ ದಾಖಲೆಗಳ ಸೃಷ್ಟಿ ಮಾಡುತ್ತಿದ್ದಾರೆ. ಈ ಹಿಂದೆ ಮಂಡ್ಯ ನಗರ ವಿಳಾಸದಲ್ಲಿ ಛೋಟಾ ರಾಜನ್‌ ಹೆಸರಲ್ಲಿ ಸೃಷ್ಟಿಯಾಗಿದ್ದ ನಕಲಿ ಓಟರ್ ಐಡಿ ಬಗ್ಗೆ ಸುದ್ದಿಯಾಗಿತ್ತು. ಆದರೆ ಮುಂದಿನ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಈ ದಂಧೆಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಂಡ್ಯದ ಸಾಮಾಜಿಕ ಕಾರ್ಯಕರ್ತೆ ಸಲ್ಮಾ ಭಾನು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಸಿಎಂ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ 13 ಜನರ ಕಿಸೆಗೆ ಬಿತ್ತು ಕತ್ತರಿ! 1.50 ಲಕ್ಷ ಕಳ್ಳತನದ ಆರೋಪ

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್