AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗ ಹುಡುಗಿ ಸಿಗಲೆಂದು ಮಂಡ್ಯ ಯುವಕರಿಂದ ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ

ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯ’ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕು ಎಂದು ಮಂಡ್ಯದ ಯುವಕ ಗಿರಿಮಲ್ಲು ಒತ್ತಾಯಿಸಿದರು. ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು ಮದುವೆಯ ಕನಸು ಕಾಣುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು.

ಬೇಗ ಹುಡುಗಿ ಸಿಗಲೆಂದು ಮಂಡ್ಯ ಯುವಕರಿಂದ ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 15, 2023 | 9:17 AM

Share

ಮಂಡ್ಯ ನ.15: ಅದೆಷ್ಟೊ ಯುವಕರು ಕನ್ಯೆ (Bride) ಸಿಗದೆ ಜಿಗುಪ್ಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಂತು ಯುವ ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲವೆಂದು ಪೋಷಕರು ಸಾರಾಸಗಾಟವಾಗಿ ಹೇಳುತ್ತಿದ್ದಾರೆ. ಇದರಿಂದ 30 ವಯಸ್ಸು ದಾಟಿದರೂ ಯುವಕರಿಗೆ ಕನ್ಯೆ ಸಿಗುತ್ತಿಲ್ಲ. ಕೊರೊನಾ ನಂತರ ಯುವಕರು ಖಾಸಗಿ ಉದ್ಯೋಗ ತೊರೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಇವರಿಗೆ ಯಾವ ಪೋಷಕರು ಕನ್ಯೆ ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯದ 30 ವರ್ಷ ಮೇಲ್ಪಟ್ಟ ಯುವಕರು ಡಿಸೆಂಬರ್‌ನಲ್ಲಿ ಎರಡು ಉದ್ದೇಶಗಳೊಂದಿಗೆ ಜಿಲ್ಲೆಯ ಪ್ರಭಾವಿ ಮಠವಾದ ಶ್ರೀ ಆದಿಚುಂಚನಗಿರಿ ಮಠಕ್ಕೆ (Adichunchanagiri Mutt) ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ಒಂದು ಅದೃಷ್ಟದ ಬದಲಾವಣೆಗೆ ಮತ್ತು ಅವರ ಸಂಕಟದ ಬಗ್ಗೆ ಜಾಗೃತಿ ಮೂಡಿಸಲು.

ಈ ವರ್ಷ ನಡೆಯುತ್ತಿರುವ ಎರಡನೇ ಪಾದಯಾತ್ರೆ ಇದಾಗಿದೆ. ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯ’ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕು ಎಂದು ಮಂಡ್ಯದ ಯುವಕ ಗಿರಿಮಲ್ಲು ಒತ್ತಾಯಿಸಿದರು. ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು ಮದುವೆಯ ಕನಸು ಕಾಣುವುದನ್ನು ನಿಲ್ಲಿಸಿದ್ದಾರೆ ಎಂದು ಗಿರಿಮಲ್ಲು ಹೇಳಿದರು.

ಇದನ್ನೂ ಓದಿ: ಮನೆ ಇಲ್ಲವೆಂದು ಕನ್ಯೆ ಕೊಡುತ್ತಿಲ್ಲ, ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ: ಜನತಾ ದರ್ಶನದಲ್ಲಿ ವ್ಯಕ್ತಿ ಅಳಲು

ಇದೇನು ಮೊದಲ ಪಾದಯಾತ್ರೆಯಲ್ಲ ಈ ಹಿಂದೆ ಫೆಬ್ರವರಿಯಲ್ಲಿ ಯುವ ಕೃಷಿಕರು ಕನ್ಯೆ ಸಿಗುತ್ತಿಲ್ಲವೆಂದು ಮಳವಳ್ಳಿ ತಾಲೂಕಿನಿಂದ ಚಾಮರಾಜನಗರ ಜಿಲ್ಲೆಯ ಎಂ.ಎಂ.ಹಿಲ್ಸ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಮಾತನಾಡಿ, ಜನರು ವಧು ಹುಡುಕುವ ಸವಾಲುಗಳ ಬಗ್ಗೆ ಹೆಚ್ಚು ತಿಳಿದಿದ್ದಾರೆ. ಆದರೆ “ವಧುಗಳು ಮತ್ತು ಅವರ ಕುಟುಂಬಗಳ ಮನಸ್ಥಿತಿ” ಯಲ್ಲಿ ಯಾವುದೇ ಸ್ಪಷ್ಟವಾದ ಬದಲಾವಣೆ ಇಲ್ಲ ಎಂದು ಅಖಿಲ ಕರ್ನಾಟಕ ಬ್ರಹ್ಮಚಾರಿಗಳ ಸಂಘದ ಸಂಸ್ಥಾಪಕ ಕೆ.ಎಂ.ಶಿವಪ್ರಸಾದ್ ಹೇಳಿದ್ದರು.

ನಾವು ವರದಕ್ಷಿಣೆ ಕೇಳುತ್ತಿಲ್ಲ, ಸಂಸಾರವನ್ನು ನಿಭಾಯಿಸಿಕೊಂಡು ಹೋದರೆ ಸಾಕು. ಆದರೆ ಯಾವ ಕುಟುಂಬವೂ ನಮಗೆ ಹೆಣ್ಣು ಕೊಡಲು ಸಿದ್ಧರಿಲ್ಲ ಎಂದು ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಸಂತೋಷ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​