AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​​​ರೈತರಿಗೆ ಬಿಗ್​ ಶಾಕ್​​: ಲೀಟರ್​ ಹಾಲಿಗೆ 1.50 ರೂ. ಇಳಿಸಿದ ಮನ್ಮುಲ್​​​​

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅನ್ನದಾತರಿಗೆ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ. ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ.

​​​​ರೈತರಿಗೆ ಬಿಗ್​ ಶಾಕ್​​: ಲೀಟರ್​ ಹಾಲಿಗೆ 1.50 ರೂ. ಇಳಿಸಿದ ಮನ್ಮುಲ್​​​​
ಮನ್ಮುಲ್
TV9 Web
| Edited By: |

Updated on:Dec 26, 2023 | 11:10 AM

Share

ಮಂಡ್ಯ, ಡಿಸೆಂಬರ್​ 26: ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (Manmul) ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್​ಗೆ ಮತ್ತೊಂದು ಶಾಕ್: ಮನ್ಮುಲ್ ಕಾಂಗ್ರೆಸ್ ತೆಕ್ಕೆಗೆ, ದಳಪತಿಗಳಿಗೆ ಮುಖಭಂಗ

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 am, Tue, 26 December 23

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್