AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್: ಖರೀದಿ ಹಾಲಿನ ದರ ಕಡಿತ

ರೈತರಿಂದ ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ರೈತರಿಗೆ ಬಿಗ್ ಶಾಕ್ ಕೊಟ್ಟ ಮನ್ಮುಲ್: ಖರೀದಿ ಹಾಲಿನ ದರ ಕಡಿತ
ಮನ್ಮುಲ್
ಆಯೇಷಾ ಬಾನು
|

Updated on: Jun 03, 2023 | 10:18 AM

Share

ಮಂಡ್ಯ: ಮನ್ಮುಲ್(Manmul) ರೈತರಿಗೆ ಬಿಗ್ ಶಾಕ್ ಕೊಟ್ಟಿದೆ. ರೈತರಿಂದ(Farmer) ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಜೂನ್ 1ರಿಂದಲೇ ಪರಿಷ್ಕೃತ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ.

ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜೂ.1 ರಿಂದ ಮುಂದಿನ ಆದೇಶದವರೆಗೆ ಈ ನೂತನ ದರ ಪರಿಷ್ಕರಣೆ ಮುಂದುವರಿಯುತ್ತದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್.ಮಂಜೇಶ್ ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲಾ ಹಾಲು ಒಕ್ಕೂಟವು ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸುತ್ತಿದೆ. ಬೇಸಿಗೆ ಕಾಲದಲ್ಲಿ ಹಸಿರು ಮೇವಿನ ಕೊರತೆಯಿಂದ ಉತ್ಪಾದಕರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಸದ್ಯ ನೂತನ ದರದಂತೆ ಸಂಘಗಳಿಗೆ ಶೇ 4.0 ಜಿಡ್ಡು ಮತ್ತು ಶೇ 8.5 ಜಿಡ್ಡೇತರ ಘನಾಂಶಕ್ಕೆ 33.15 ರೂ. ಬದಲು 32.15 ರೂ ಹಾಗೂ ಉತ್ಪಾದಕರಿಗೆ 32.25 ರೂ ಬದಲು 31.25 ರೂ. ನಿಗಧಿಗೊಳಿಸಲಾಗಿದೆ.

ಒಕ್ಕೂಟದ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಅರಂಭವಾಗಿದ್ದು, ಹಸಿರು ಮೇವಿನ ಲಭ್ಯತೆ ಸುಧಾರಿಸಿದೆ. ಹೀಗಾಗಿ ದರ ಕಡಿತ ಮಾಡಲಾಗಿದೆ ಎಂದು ಮನ್‌ಮುಲ್ ಆಡಳಿತ ಮಂಡಳಿ ದರ ಇಳಿಕೆಗೆ ಸಮರ್ಥನೆ ನೀಡಿದ್ದಾರೆ.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!