AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ
ಮನ್ಮೂಲ್​
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 16, 2023 | 8:37 AM

Share

ಮಂಡ್ಯ: ಮಂಡ್ಯ ಜಿಲ್ಲಾ ಹಾಲು (Manmul) ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ (Milk) ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ (Farmers) ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆ‌ಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ.

ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ. ಕಳೆದ ತಿಂಗಳು ಜೂನ್​​ನಲ್ಲಿ ಕೂಡ ಮನ್ಮೂಲ್​ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ನಿರ್ಣಯವನ್ನು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ