AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ

ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 17, 2022 | 5:03 PM

Share

ಮಂಡ್ಯ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಸಂಬಂಧಿಸಿದಂತೆ ಈಗಾಗಲೇ ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕೋಲಾರ ಪ್ರವಾಸ ಮಾಡಿದ್ದಾರೆ. ಇನ್ನು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಮುಂದಿನ ಸಿಎಂ ಎಂಬ ಸರ್ವೆ ಕೂಡ ಮಾಡಿದ್ದಾರೆ. ಈ ಕುರಿತಾಗಿ ಜಿಲ್ಲೆಯ ಮಳವಳ್ಳಿ ತಾಲೂಕಿನ ಕನ್ನಹಳ್ಳಿಯಲ್ಲಿ ಬಸವ ಭವನ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿ, ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ಬಹಳ ಜನರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೇಳಿದರು. ಕಟ್ಟಡ ನಿರ್ಮಾಣ ಆಗುವಷ್ಟರಲ್ಲಿ ಮುಂದಿನ ಸರ್ಕಾರ ಬಂದಿರುತ್ತೆ ಆಗ ನಾನೇ ಒಂದು ಕೋಟಿ ರೂ. ನೀಡುತ್ತೇನೆ ಮತ್ತು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೊಂಡರು.

ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ

ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಳಾಗುತ್ತಿವೆ. ಕಾಯಕವೇ ದೇವರು ಎಂಬ ಸಂದೇಶ ಸಾರಿದ ಬಸವಣ್ಣ, ಅವರ ತತ್ವಗಳು ನಿಜ ಜೀವನದಲ್ಲಿ ಅಳವಡಿಕೆಯಾಗಬೇಕು. ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಭಾವನಾತ್ಮಕ ಸಂಬಂಧಗಳಿಗೆ ಬೆಲೆ ಕೊಡಬೇಕು. ಬಸವಣ್ಣನವರು ಆ ಕಾಲದಲ್ಲೇ ಸಮಾನತೆ ಸಂದೇಶ ಸಾರಿದ್ದರು. ಸರ್ವಜನಾಂಗದ ಶಾಂತಿಯ ತೋಟವಾಗಿ ನಾವೆಲ್ಲ ಬಾಳಬೇಕು. ಅನ್ನದಾನಿ ಕ್ಷೇತ್ರದ ಸಮಸ್ಯೆಗಳಿಗೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅನ್ನದಾನಿ ಕಾರ್ಯಕ್ಕೆ ನನ್ನ ಮೆಚ್ಚುಗೆ ಇದೆ. ನಮ್ಮ ಮನೆ ಹುಡುಗ ಅಂತಾ ನಾನು ಹತ್ತಿರದಿಂದ ಆತನನ್ನ ನೋಡಿದ್ದೇನೆ ಎಂದು ಹೇಳಿದರು.

ಗೋಪುರ ಹೇಗಿದೆ ಎಂಬುದು ಮುಖ್ಯವಲ್ಲ ನೆರಳು ನೀಡುವುದು ಮುಖ್ಯ 

ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್​ ನಿರ್ಮಾಣ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು ಗುಂಬಜ್ ಇದೆಯೋ, ಗೋಪುರ ಇದೆಯೋ ಅನ್ನೋದು ಮುಖ್ಯವಲ್ಲ. ಆದರೆ ನೆರಳು ನೀಡುವ ಕೆಲಸ ಆಗುತ್ತಿದೆಯಾ ಎಂಬುದು ಮುಖ್ಯ. ಬಸ್​ ನಿಲ್ದಾಣ ತೆರವು ಮಾಡಬೇಕು ಅನ್ನೋದು ಮೂರ್ಖರ ಹೇಳಿಕೆ. ಪ್ರತಾಪ್ ಸಿಂಹಗೆ ಕಟ್ಟಿ ಅಭ್ಯಾಸವಿಲ್ಲ, ಅವರಿಗೇನಿದ್ದರೂ ಕೆಡವಿ ಅಭ್ಯಾಸ. ಆ ಪಕ್ಷದ ಶಾಸಕರೇ ಸಂಸದರಿಂದ ನೋವು ಅನುಭವಿಸುತ್ತಿದ್ದಾರೆ. ಇನ್ನು ಮತ ಹಾಕಿದ ಮತದಾರರ ಕತೆ ಏನೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರ್ಸನಲ್ ಡೇಟಾ ಕಲೆ ಹಾಕಿದ ಆರೋಪ ಕುರಿತು ಮಾತನಾಡಿದ್ದು, ಬಿಜೆಪಿಯ ಸರ್ಕಾರದಲ್ಲಿ ಕೆಲ ಖಾಸಗಿ ಸಂಸ್ಥೆಗಳಿಗೆ ಡೇಟಾ ಬೇಸ್ ಕಲೆ ಹಾಕುವ ಜವಾಬ್ದಾರಿ ಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಟ್ಯಾಂಪರ್ ಮಾಡಬೇಕು ಅನ್ನೋದು ಮುಖ್ಯ ಉದ್ದೇಶವಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕಾಗೇರಿ ಹೇಳಿಕೆಯನ್ನು ಕುಮಾರಸ್ವಾಮಿ ಪ್ರಸ್ಥಾಪಿಸಿದರು. ಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಹೋದರೆ ಗೆಲ್ಲಲು ಆಗೋಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂದು ಸರ್ಕಾರ ಸ್ಪಷ್ಠೀಕರಣ ನೀಡಬೇಕಿದೆ. 2010 ರಲ್ಲಿ ಬಿಬಿಎಂಪಿಯಲ್ಲಿ ದಾಖಲಾತಿಗಳ ಕೊಠಡಿಗೆ ಬೆಂಕಿ ಹಚ್ಚಲಾಗಿತ್ತು. ಇವಿಎಂ ಪ್ರೊಡಕ್ಷನ್ ಮಾಡೋ ಅಭ್ಯರ್ಥಿಗಳೇ ಈ ಕೆಲಸದಲ್ಲಿದ್ದಾರೆಂಬ ಮಾತುಗಳಿವೆ. ಇದರಲ್ಲಿ ಇಂಟರ್​ಲಿಂಕ್​ಗಳಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Thu, 17 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!