AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ

ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂಬುದು ಹಲವರ ಆಸೆ: ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೇಳಿಕೊಂಡ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Nov 17, 2022 | 5:03 PM

Share

ಮಂಡ್ಯ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಸಂಬಂಧಿಸಿದಂತೆ ಈಗಾಗಲೇ ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಇತ್ತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕೋಲಾರ ಪ್ರವಾಸ ಮಾಡಿದ್ದಾರೆ. ಇನ್ನು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಮುಂದಿನ ಸಿಎಂ ಎಂಬ ಸರ್ವೆ ಕೂಡ ಮಾಡಿದ್ದಾರೆ. ಈ ಕುರಿತಾಗಿ ಜಿಲ್ಲೆಯ ಮಳವಳ್ಳಿ ತಾಲೂಕಿನ ಕನ್ನಹಳ್ಳಿಯಲ್ಲಿ ಬಸವ ಭವನ ಶಂಕು ಸ್ಥಾಪನೆ ಉದ್ಘಾಟಿಸಿ ಮಾತನಾಡಿ, ಭಗವಂತ ಯಾರ ಹಣೆ ಮೇಲೆ ಏನು ಬರೆದಿದ್ದಾನೋ ಗೊತ್ತಿಲ್ಲ. ಬಹಳ ಜನರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ರಾಜ್ಯದ ಜನರೇ ಈ ಬಾರಿ ಜೆಡಿಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಹೇಳಿದರು. ಕಟ್ಟಡ ನಿರ್ಮಾಣ ಆಗುವಷ್ಟರಲ್ಲಿ ಮುಂದಿನ ಸರ್ಕಾರ ಬಂದಿರುತ್ತೆ ಆಗ ನಾನೇ ಒಂದು ಕೋಟಿ ರೂ. ನೀಡುತ್ತೇನೆ ಮತ್ತು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ಮುಂದಿನ ಸಿಎಂ ನಾನೇ ಎಂದು ಪರೋಕ್ಷವಾಗಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೊಂಡರು.

ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ

ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಳಾಗುತ್ತಿವೆ. ಕಾಯಕವೇ ದೇವರು ಎಂಬ ಸಂದೇಶ ಸಾರಿದ ಬಸವಣ್ಣ, ಅವರ ತತ್ವಗಳು ನಿಜ ಜೀವನದಲ್ಲಿ ಅಳವಡಿಕೆಯಾಗಬೇಕು. ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಭಾವನಾತ್ಮಕ ಸಂಬಂಧಗಳಿಗೆ ಬೆಲೆ ಕೊಡಬೇಕು. ಬಸವಣ್ಣನವರು ಆ ಕಾಲದಲ್ಲೇ ಸಮಾನತೆ ಸಂದೇಶ ಸಾರಿದ್ದರು. ಸರ್ವಜನಾಂಗದ ಶಾಂತಿಯ ತೋಟವಾಗಿ ನಾವೆಲ್ಲ ಬಾಳಬೇಕು. ಅನ್ನದಾನಿ ಕ್ಷೇತ್ರದ ಸಮಸ್ಯೆಗಳಿಗೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅನ್ನದಾನಿ ಕಾರ್ಯಕ್ಕೆ ನನ್ನ ಮೆಚ್ಚುಗೆ ಇದೆ. ನಮ್ಮ ಮನೆ ಹುಡುಗ ಅಂತಾ ನಾನು ಹತ್ತಿರದಿಂದ ಆತನನ್ನ ನೋಡಿದ್ದೇನೆ ಎಂದು ಹೇಳಿದರು.

ಗೋಪುರ ಹೇಗಿದೆ ಎಂಬುದು ಮುಖ್ಯವಲ್ಲ ನೆರಳು ನೀಡುವುದು ಮುಖ್ಯ 

ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್​ ನಿರ್ಮಾಣ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು ಗುಂಬಜ್ ಇದೆಯೋ, ಗೋಪುರ ಇದೆಯೋ ಅನ್ನೋದು ಮುಖ್ಯವಲ್ಲ. ಆದರೆ ನೆರಳು ನೀಡುವ ಕೆಲಸ ಆಗುತ್ತಿದೆಯಾ ಎಂಬುದು ಮುಖ್ಯ. ಬಸ್​ ನಿಲ್ದಾಣ ತೆರವು ಮಾಡಬೇಕು ಅನ್ನೋದು ಮೂರ್ಖರ ಹೇಳಿಕೆ. ಪ್ರತಾಪ್ ಸಿಂಹಗೆ ಕಟ್ಟಿ ಅಭ್ಯಾಸವಿಲ್ಲ, ಅವರಿಗೇನಿದ್ದರೂ ಕೆಡವಿ ಅಭ್ಯಾಸ. ಆ ಪಕ್ಷದ ಶಾಸಕರೇ ಸಂಸದರಿಂದ ನೋವು ಅನುಭವಿಸುತ್ತಿದ್ದಾರೆ. ಇನ್ನು ಮತ ಹಾಕಿದ ಮತದಾರರ ಕತೆ ಏನೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರ್ಸನಲ್ ಡೇಟಾ ಕಲೆ ಹಾಕಿದ ಆರೋಪ ಕುರಿತು ಮಾತನಾಡಿದ್ದು, ಬಿಜೆಪಿಯ ಸರ್ಕಾರದಲ್ಲಿ ಕೆಲ ಖಾಸಗಿ ಸಂಸ್ಥೆಗಳಿಗೆ ಡೇಟಾ ಬೇಸ್ ಕಲೆ ಹಾಕುವ ಜವಾಬ್ದಾರಿ ಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಟ್ಯಾಂಪರ್ ಮಾಡಬೇಕು ಅನ್ನೋದು ಮುಖ್ಯ ಉದ್ದೇಶವಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕಾಗೇರಿ ಹೇಳಿಕೆಯನ್ನು ಕುಮಾರಸ್ವಾಮಿ ಪ್ರಸ್ಥಾಪಿಸಿದರು. ಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಹೋದರೆ ಗೆಲ್ಲಲು ಆಗೋಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂದು ಸರ್ಕಾರ ಸ್ಪಷ್ಠೀಕರಣ ನೀಡಬೇಕಿದೆ. 2010 ರಲ್ಲಿ ಬಿಬಿಎಂಪಿಯಲ್ಲಿ ದಾಖಲಾತಿಗಳ ಕೊಠಡಿಗೆ ಬೆಂಕಿ ಹಚ್ಚಲಾಗಿತ್ತು. ಇವಿಎಂ ಪ್ರೊಡಕ್ಷನ್ ಮಾಡೋ ಅಭ್ಯರ್ಥಿಗಳೇ ಈ ಕೆಲಸದಲ್ಲಿದ್ದಾರೆಂಬ ಮಾತುಗಳಿವೆ. ಇದರಲ್ಲಿ ಇಂಟರ್​ಲಿಂಕ್​ಗಳಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:58 pm, Thu, 17 November 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ