AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ 14 ಎಕರೆ ಭೂಮಿ ಅಕ್ರಮವಾಗಿ ಪರಭಾರೆ ಆರೋಪ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದ ಜಾಗದ ಮೇಲೂ ಭೂಗಳ್ಳರ ಕಣ್ಣು ಬಿದ್ದಿದೆ. ಮೈಸೂರಿನ ಕೆಸರೆ ಗ್ರಾಮ ವ್ಯಾಪ್ತಿಯಲ್ಲಿರುವ ದೇವಾಲಯದ 14 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ.

ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ 14 ಎಕರೆ ಭೂಮಿ ಅಕ್ರಮವಾಗಿ ಪರಭಾರೆ ಆರೋಪ
ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನ
ಪ್ರಶಾಂತ್​ ಬಿ.
| Edited By: |

Updated on: Jan 16, 2024 | 8:01 AM

Share

ಮಂಡ್ಯ, ಜನವರಿ 16: ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ (Melkote Cheluvanarayana Swamy) ದೇವಸ್ಥಾನದ ಜಾಗದ ಮೇಲೂ ಭೂಗಳ್ಳರ ಕಣ್ಣು ಬಿದ್ದಿದೆ. ಮೈಸೂರಿನ ಕೆಸರೆ ಗ್ರಾಮ ವ್ಯಾಪ್ತಿಯಲ್ಲಿರುವ ದೇವಾಲಯದ 14 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗೆ ರವಿಕುಮಾರ್ ಎಂಬುವರು ದೂರು ನೀಡಿದ್ದಾರೆ.

ಮೈಸೂರು ಮಹಾರಾಜರು ಮೇಲುಕೋಟೆಯ ಚಲುವನಾರಾಯಣ ಸ್ವಾಮಿ ದೇಗುಲಕ್ಕೆ ದೇಣಿಗೆಯಾಗಿ 20 ಎಕರೆ ಭೂಮಿ ನೀಡಿದ್ದಾರೆ. ಈ ಪೈಕಿ 14 ಎಕರೆ ಭೂಮಿಯನ್ನು ನಾಲ್ವರ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ. ಅಧಿಕಾರಿಗಳು 2001ರಲ್ಲಿ ನಾಲ್ವರ ಹೆಸರಿಗೆ 1973 ರಲ್ಲಿ ಭೂ ಸುಧಾರಣೆ ಕಾಯ್ದೆಯಡಿಯಲ್ಲಿ ಜಮೀನು ಮಂಜೂರಾದಂತೆ ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪವಿದೆ. ದೇವಾಲಯದ ಜಮೀನು ಪರಭಾರೆಯಲ್ಲಿ ಕಂದಾಯ ಅಧಿಕಾರಿಗಳು ಶಾಮೀಲು ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ

ದೂರುದಾರ ರವಿಕುಮಾರ್​ ಜಮೀನನ್ನು ಮತ್ತೆ ದೇವಾಲಯದ ಹೆಸರಿಗೆ ವರ್ಗಾಯಿಸುವಂತೆ ಆಗ್ರಹಿಸಿದ್ದಾರೆ. ದೂರಿನವ್ವಯ ಮಂಡ್ಯ ಜಿಲ್ಲಾಡಳಿತ ದಾಖಲೆ ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ಮಂಡ್ಯ ಎಸಿ ಶಿವಮೂರ್ತಿಯಿಂದ ದಾಖಲೆ ಹಾಗೂ ಜಮೀನು ಪರಿಶೀಲನೆ ನಡೆಸಿದರು. ದೇವಾಲಯದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟಿರುವುದು ಕಾನೂನು ಪ್ರಕಾರ ಸರಿಯಲ್ಲ. ಅಲ್ಲದೇ ಕ್ರಮಬದ್ಧವಾಗಿ ಜಮೀನು ಮಂಜೂರು ಆಗಿದೆಯಾ? ಇಲ್ಲವೇ ಎಂದು ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ಮಂಡ್ಯ ಜಿಲ್ಲಾಡಳಿತ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ