AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆಯಲ್ಲಿಯೂ ಸಲಾಂ ಆರತಿ ಹೆಸರು ತೆಗೆಯಲು ಸ್ಥಾನಿಕರಿಂದ ಮನವಿ

ಮುಸ್ಲಿಂ ದಾಳಿಕೋರರಿಂದ ದಾಳಿಯಾದ ಸಂದರ್ಭದಲ್ಲಿ ಅಥವಾ ಟಿಪ್ಪುವಿನ ಕಾಲದಲ್ಲಿ ಸಂಧ್ಯಾರತಿಗೆ ಸಲಾಂ ಪದ ಸೇರಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮೇಲುಕೋಟೆಯಲ್ಲಿಯೂ ಸಲಾಂ ಆರತಿ ಹೆಸರು ತೆಗೆಯಲು ಸ್ಥಾನಿಕರಿಂದ ಮನವಿ
ಮೇಲುಕೋಟೆ ವೈರಮುಡಿ ಉತ್ಸವ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 31, 2022 | 9:48 AM

ಮಂಡ್ಯ: ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಆರತಿಯನ್ನು ಸಲಾಂ ಆರತಿ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಇದರ ಹೆಸರು ಬದಲಿಸಬೇಕು ಎಂದು ಮೇಲುಕೋಟೆ ಸ್ಥಾನಿಕರಾದ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದಾರೆ. ತ್ರಿಕಾಲದಲ್ಲಿಯೂ ದೇವರಿಗೆ ಆರತಿ ಮಾಡುವ ಪದ್ಧತಿ ಎಲ್ಲ ದೇವಾಲಯಗಳಲ್ಲಿಯೂ ಇದೆ. ಸಂಜೆ ವೇಳೆ ಮೇಲುಕೋಟೆ ದೇವಾಲಯದಲ್ಲಿ ನಡೆಯುವ ಸಂಧ್ಯಾರತಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮುಸ್ಲಿಂ ದಾಳಿಕೋರರಿಂದ ದಾಳಿಯಾದ ಸಂದರ್ಭದಲ್ಲಿ ಅಥವಾ ಟಿಪ್ಪುವಿನ ಕಾಲದಲ್ಲಿ ಸಂಧ್ಯಾರತಿಗೆ ಸಲಾಂ ಪದ ಸೇರಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮೂಲ ಮೂರ್ತಿಗೆ ಆರತಿಯಾಗುವ ಸಂಧರ್ಭದಲ್ಲಿ ದೇವಾಲಯದ ಹೊರಗಡೆ ದೀವಟಿಗೆ ಸಲಾಂ ಮಾಡಲಾಗುತ್ತೆ. ಬಳಿಕ ದೇವಾಲಯ ಗರ್ಭಗುಡಿಯ ಬಳಿಯು ದೀವಟಿಗೆ ಸಲಾಂ ಮಾಡಲಾಗುತ್ತೆ. ಚಲುವನಾರಾಯಣ ಸ್ವಾಮಿ ಎಲ್ಲಾ ಉತ್ಸವ ಮುಗಿಸಿ ಆಸ್ಥಾನಕ್ಕೆ ಬರುವ ವೇಳೆ ಈ ದೀವಟಿಗೆ ಸಲಾಂ ಮಾಡಲಾಗುತ್ತೆ. ಸಂಧ್ಯಾರತಿಗೆ ಯಾರ ಆಕ್ಷೇಪಣೆಯೂ ಇಲ್ಲ. ಆದ್ರೆ ಇಲ್ಲಿ ಹೇಳಲಾಗುವ ಸಲಾಂ ಪದಕ್ಕೆ ಎಲ್ಲರ ಆಕ್ಷೇಪಣೆ ಇದೆ. ಸಲಾಂ ಪದ ರದ್ದು ಮಾಡಬೇಕು ಎಂದು ಹಲವು ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಈ ವಿಚಾರವಾಗಿ ಸರ್ಕಾರ ಪರಿಶೀಲನೆ ಮಾಡಬೇಕು ಎಂದು ಕೋಇದರು.

ಟಿಪ್ಪು ನೆರವು ಪಡೆದ ಎಲ್ಲಾ ಕ್ಷೇತ್ರಗಳಲ್ಲೂ ಸಲಾಂ ಮಂಗಳಾರತಿ: ಇತಿಹಾಸಜ್ಞರ ಅಭಿಮತ

ಟಿಪ್ಪುವಿನಿಂದ (Tipu Sultan) ಸಹಾಯ ಪಡೆದ ಎಲ್ಲಾ ಕ್ಷೇತ್ರಗಳಲ್ಲೂ ಆ ಕಾಲದಿಂದಲೂ ಸಲಾಂ ಪೂಜೆ ನಡೆಯುತ್ತಾ ಬಂದಿದೆ ಎಂದು ಹೇಳಿದ್ದಾರೆ. ಇದನ್ನು ಪುಷ್ಟೀಕರಿಸುತ್ತಾ ಇತಿಹಾದ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇತಿಹಾಸ ತಜ್ಞ ಪ್ರೊ. ಮುರುಗೇಶಿ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಪ್ರತಿನಿತ್ಯ ಸಂಜೆ ಸಲಾಂ ಪೂಜೆ (Salam Mangalarathi) ಮಾಡುತ್ತಾರೆ. ಟಿಪ್ಪು ಸುಲ್ತಾನನ ಕಾಲದಲ್ಲಿ ಸಲಾಂ ಪೂಜೆ ಆರಂಭವಾಯಿತು. ಇದಕ್ಕೆ ಐತಿಹಾಸಿಕ ಕಾರಣವಿದೆ ಎಂದು ಹೇಳಿದ್ದಾರೆ.

ಟಿಪ್ಪು ಆಡಳಿತ ಕಾಲದಲ್ಲಿ ಮರಾಠರು ಕರಾವಳಿ ಮಲೆನಾಡಿಗೆ ದಾಳಿ ಮಾಡಿದ್ದರು. ಶೃಂಗೇರಿ ಕ್ಷೇತ್ರದ ಮೇಲೆಯೂ ಮರಾಠರು ದಾಳಿ ಮಾಡಿದ್ದರು. ಬಸ್ರೂರಿನ ಮೇಲೂ ಮರಾಠರು ದಾಳಿ ಮಾಡಿದ್ದರು. ತನ್ನ ವ್ಯಾಪ್ತಿಯ ಧಾರ್ಮಿಕ ಕ್ಷೇತ್ರಗಳಿಗೆ ಟಿಪ್ಪು ಈ ವೇಳೆ ಸಹಾಯ ಮಾಡಿದ್ದಾನೆ. ಅನ್ಯಾಯವನ್ನು ಗಮನಿಸಿ ಸಹಾಯ ಮಾಡಿದ್ದಾನೆ. ಶೃಂಗೇರಿ ಪೀಠಾಧಿಪತಿಗಳಿಗೆ ಪತ್ರ ಬರೆದಿದ್ದಾನೆ. ಶೃಂಗೇರಿಗೆ ಅನೇಕ ದಾನ ಧರ್ಮ ನೀಡಿದ್ದಾನೆ. ಶೃಂಗೇರಿಯಲ್ಲೂ ಸಲಾಂ ಪೂಜೆ ನಡೆಯುತ್ತದೆ ಎಂದು ಇತಿಹಾಸದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬಸ್ರೂರು ಭಾಗದಲ್ಲೇ ಕೊಲ್ಲೂರು ಕ್ಷೇತ್ರ ಬರುತ್ತಿತ್ತು. ಕೊಲ್ಲೂರು ಕ್ಷೇತ್ರಕ್ಕೂ ಟಿಪ್ಪು ಸಂಪೂರ್ಣ ಬೆಂಬಲ ನೀಡಿದ್ದಾನೆ. ಅದಕ್ಕೋಸ್ಕರ ಕೊಲ್ಲೂರಿನಲ್ಲಿ ಸಲಾಂ ಪೂಜೆ ನಡೆಸಲಾಗುತ್ತದೆ. ಟಿಪ್ಪು ಸುಲ್ತಾನ್ ಹಿಂದೂ ವಿರೋಧಿ ಎಂದು ಬಿಂಬಿಸಲ್ಪಟ್ಟಿದ್ದಕ್ಕೂ ಚಾರಿತ್ರಿಕ ದಾಖಲೆಗಳಿಗೂ ತಾಳೆ ಆಗುವುದಿಲ್ಲ. ಮುಸ್ಲಿಂ ಆಡಳಿತಗಾರರಾಗಿದ್ದರೂ ಸಹ ತನ್ನ ಪ್ರಜೆಗಳನ್ನು ಸಮಾನವಾಗಿ ನೋಡುತ್ತಿದ್ದರು. ಇದೆಲ್ಲಾ ಶೃಂಗೇರಿ ಕ್ಷೇತ್ರಕ್ಕೆ ಬರೆದಿರುವ ಪತ್ರಗಳಲ್ಲಿ ಲಭ್ಯವಿದೆ. ತನ್ನ ಆಡಳಿತದಿಂದ ನಿಮಗೆ ಸಹಾಯ ಮಾಡುವುದಾಗಿ ಆತ ಪತ್ರದಲ್ಲಿ ಬರೆದಿದ್ದ, ಬಸ್ರೂರು ಆಗ ಪ್ರಮುಖ ಆಡಳಿತ ಕೇಂದ್ರವಾಗಿತ್ತು. ಟಿಪ್ಪುವಿನಿಂದ ಸಹಾಯ ಪಡೆದ ಎಲ್ಲಾ ಕ್ಷೇತ್ರಗಳಲ್ಲೂ ಸಲಾಂ ಪೂಜೆ ನಡೆಯುತ್ತಾ ಬಂದಿದೆ ಎನ್ನುತ್ತಾರೆ ಪ್ರೊ. ಮುರುಗೇಶಿ.

ಇದನ್ನೂ ಓದಿ: ನಮ್ಮ ಔದಾರ್ಯದಿಂದಾಗಿ ಇದುವರೆಗೆ ದೇವಸ್ಥಾನಗಳಲ್ಲಿ ಸಲಾಂ ಮಂಗಳಾರತಿ ನಡೆಯಿತು, ಇನ್ನು ಮುಂದೆ ಇಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

ಇದನ್ನೂ ಓದಿ: ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ

ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ