AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಅಮೆರಿಕಕ್ಕೆ ಹೋಗುವುದು ತಪ್ಪೆಂದು ಗೊತ್ತಿದೆ, ಆದರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೊಟ್ಟ ಕಾರಣ ಇಲ್ಲಿದೆ

ಪದೇ ಪದೇ ಅಮೇರಿಕಾಗೆ ತೆರಳಿದ್ದ ಶಾಸಕರ ಮೇಲೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಶಾಸಕರು ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿದ್ದವು.

ಪದೇ ಪದೇ ಅಮೆರಿಕಕ್ಕೆ ಹೋಗುವುದು ತಪ್ಪೆಂದು ಗೊತ್ತಿದೆ, ಆದರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೊಟ್ಟ ಕಾರಣ ಇಲ್ಲಿದೆ
ದರ್ಶನ್ ಪುಟ್ಟಣ್ಣಯ್ಯ
TV9 Web
| Edited By: |

Updated on: Jan 20, 2024 | 3:29 PM

Share

ಮಂಡ್ಯ, ಜನವರಿ 20: ಪದೇ ಪದೇ ಅಮೇರಿಕಾಕ್ಕೆ ಹೋಗಿ ತಪ್ಪು ಮಾಡುತ್ತಿದ್ದೇನೆ ಎಂದು ಮೇಲುಕೋಟೆ (Melukote MLA) ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ (Dharshan Puttannaiah) ಒಪ್ಪಿಕೊಂಡರು. ಮಂಡ್ಯದಲ್ಲಿ ಮಾತನಾಡಿದ ಅವರು, ಶಾಸಕರಾಗಿ ಆಯ್ಕೆಯಾದ ಏಳು ತಿಂಗಳಲ್ಲಿ ನಾಲ್ಕು ಬಾರಿ ಅಮೇರಿಕಾಗೆ ಹೋಗಿರುವುದು ನಿಜ. ಹೀಗೆ ಮಾಡುವುದು ತಪ್ಪೆಂದು ಗೊತ್ತಿದೆ. ನನ್ನ ಕೆಲವು ವೈಯಕ್ತಿಕ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಿಕೊಳ್ಳಲು ಹೋಗುತ್ತಿದ್ದೇನೆ ಅಷ್ಟೆ ಎಂದು ಸ್ಪಷ್ಟನೆ ನೀಡಿದರು.

ಪದೇ ಪದೇ ಅಮೇರಿಕಾಗೆ ತೆರಳಿದ್ದ ಶಾಸಕರ ಮೇಲೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಶಾಸಕರು ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿದ್ದವು.

ಪದೇ ಪದೇ ಅಮೆರಿಕಕ್ಕೆ ಭೇಟಿ ನೀಡುತ್ತಿರುವುದು ತಪ್ಪೆಂದು ಗೊತ್ತಿದೆ. ಆದರೆ, ಕೆಲವು ವೈಯಕ್ತಿಕ ಸಮಸ್ಯೆಗಳ ಕಾರಣ ಅನಿವಾರ್ಯವಾಗಿದೆ. ನನ್ನ ಹೆಂಡತಿ-ಮಕ್ಕಳು ಇದ್ದು ಅಲ್ಲಿಗೆ ತೆರಳಬೇಕಾಗಿ ಬಂದಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳುತ್ತೇನೆ. ನಾನು ಹೋಗುತ್ತಿರುವುದನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.

ನಾನು ಅಮೆರಿಕಕ್ಕೆ ತೆರಳಿದ್ದರೂ ಇಲ್ಲಿ ಕೆಲಸ ಮಾಡಲು ತಂಡವನ್ನು ಇಟ್ಟಿದ್ದೇನೆ. ಇಲ್ಲಿ ನನ್ನ ತಂಡದವರು ಆಗಬೇಕಾದ ಕೆಲಸ ಮಾಡುತ್ತಿದ್ದಾರೆ. ನಾವು ಇಲ್ಲಿಯವರೆಗೆ ಬ್ಯಾಂಡೆಡ್ ಹಾಕೋಂಡು ಬರ್ತಿದ್ದೇವೆ. ಕ್ಷೇತ್ರದಲ್ಲಿ ಫೋನ್ ಮಾಡಿ ಹೇಳಿದ್ರೆ ಮಾತ್ರ ಯಾವುದಾದರು ಕೆಲಸ ಆಗೋದು. ನಮ್ಮ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಜನಕ್ಕೆ ಕೆಲಸ ಮಾಡಿಕೊಡಲು ಅಷ್ಟೇ ಸಾಧ್ಯ. ಜನರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ನಾನು ಅದನ್ನು ಅಧಿಕಾರಿಗೆ ಹೇಳಿ ಮಾಡಿಸುತ್ತೇನೆ ಅಷ್ಟೆ‌. ಜನರ ಸಮಸ್ಯೆಗಳು ಬೇಗ ಪರಿಹಾರ ಆಗಬೇಕು. ಶಾಸಕನ ಬಳಿ ಬರುವುದಕ್ಕಿಂತ ಸರ್ಕಾರಿ ಕಚೇರಿ ಬಳಿಗೆ ಹೋಗಬೇಕು‌. ವ್ಯವಸ್ಥೆ ಬದಲಾವಣೆಯಾಗಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ: ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ ಜನರು

ನಾನು ಈಗಾಗಲೇ ನನ್ನ ಕಂಪನಿಗಳನ್ನು ಮಾರಾಟ ಮಾಡಿದ್ದೇನೆ. 2021 ರ ಮೇ 21 ರಲ್ಲಿ ಕಂಪನಿಗಳು ಮಾರಾಟವಾಗಿವೆ. ಗೂಗಲ್​​ನಲ್ಲಿ ಚೆಕ್ ಮಾಡಿ ನೋಡಿ. ಈಗ ಆ ಕಂಪನಿಗಳಿಗೂ ನನಗೂ ಸಂಬಂಧ ಇಲ್ಲ. ಮೈಸೂರಿನಲ್ಲೂ ಸಹ ನನ್ನ ಆಫಿಸ್ ಇತ್ತು. ಅದರ ಮಾಲೀಕರ ಹೆಸರು ಕೂಡ ಬೇರೆ ಇದೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ತೇನೆ ಎಂದು ದರ್ಶನ ಪುಟ್ಟಣ್ಣಯ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ