AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಅಮೆರಿಕಕ್ಕೆ ಹೋಗುವುದು ತಪ್ಪೆಂದು ಗೊತ್ತಿದೆ, ಆದರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೊಟ್ಟ ಕಾರಣ ಇಲ್ಲಿದೆ

ಪದೇ ಪದೇ ಅಮೇರಿಕಾಗೆ ತೆರಳಿದ್ದ ಶಾಸಕರ ಮೇಲೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಶಾಸಕರು ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿದ್ದವು.

ಪದೇ ಪದೇ ಅಮೆರಿಕಕ್ಕೆ ಹೋಗುವುದು ತಪ್ಪೆಂದು ಗೊತ್ತಿದೆ, ಆದರೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೊಟ್ಟ ಕಾರಣ ಇಲ್ಲಿದೆ
ದರ್ಶನ್ ಪುಟ್ಟಣ್ಣಯ್ಯ
Follow us
TV9 Web
| Updated By: Ganapathi Sharma

Updated on: Jan 20, 2024 | 3:29 PM

ಮಂಡ್ಯ, ಜನವರಿ 20: ಪದೇ ಪದೇ ಅಮೇರಿಕಾಕ್ಕೆ ಹೋಗಿ ತಪ್ಪು ಮಾಡುತ್ತಿದ್ದೇನೆ ಎಂದು ಮೇಲುಕೋಟೆ (Melukote MLA) ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ (Dharshan Puttannaiah) ಒಪ್ಪಿಕೊಂಡರು. ಮಂಡ್ಯದಲ್ಲಿ ಮಾತನಾಡಿದ ಅವರು, ಶಾಸಕರಾಗಿ ಆಯ್ಕೆಯಾದ ಏಳು ತಿಂಗಳಲ್ಲಿ ನಾಲ್ಕು ಬಾರಿ ಅಮೇರಿಕಾಗೆ ಹೋಗಿರುವುದು ನಿಜ. ಹೀಗೆ ಮಾಡುವುದು ತಪ್ಪೆಂದು ಗೊತ್ತಿದೆ. ನನ್ನ ಕೆಲವು ವೈಯಕ್ತಿಕ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಿಕೊಳ್ಳಲು ಹೋಗುತ್ತಿದ್ದೇನೆ ಅಷ್ಟೆ ಎಂದು ಸ್ಪಷ್ಟನೆ ನೀಡಿದರು.

ಪದೇ ಪದೇ ಅಮೇರಿಕಾಗೆ ತೆರಳಿದ್ದ ಶಾಸಕರ ಮೇಲೆ ಮತದಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಶಾಸಕರು ಜನರ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿದ್ದವು.

ಪದೇ ಪದೇ ಅಮೆರಿಕಕ್ಕೆ ಭೇಟಿ ನೀಡುತ್ತಿರುವುದು ತಪ್ಪೆಂದು ಗೊತ್ತಿದೆ. ಆದರೆ, ಕೆಲವು ವೈಯಕ್ತಿಕ ಸಮಸ್ಯೆಗಳ ಕಾರಣ ಅನಿವಾರ್ಯವಾಗಿದೆ. ನನ್ನ ಹೆಂಡತಿ-ಮಕ್ಕಳು ಇದ್ದು ಅಲ್ಲಿಗೆ ತೆರಳಬೇಕಾಗಿ ಬಂದಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಳ್ಳುತ್ತೇನೆ. ನಾನು ಹೋಗುತ್ತಿರುವುದನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.

ನಾನು ಅಮೆರಿಕಕ್ಕೆ ತೆರಳಿದ್ದರೂ ಇಲ್ಲಿ ಕೆಲಸ ಮಾಡಲು ತಂಡವನ್ನು ಇಟ್ಟಿದ್ದೇನೆ. ಇಲ್ಲಿ ನನ್ನ ತಂಡದವರು ಆಗಬೇಕಾದ ಕೆಲಸ ಮಾಡುತ್ತಿದ್ದಾರೆ. ನಾವು ಇಲ್ಲಿಯವರೆಗೆ ಬ್ಯಾಂಡೆಡ್ ಹಾಕೋಂಡು ಬರ್ತಿದ್ದೇವೆ. ಕ್ಷೇತ್ರದಲ್ಲಿ ಫೋನ್ ಮಾಡಿ ಹೇಳಿದ್ರೆ ಮಾತ್ರ ಯಾವುದಾದರು ಕೆಲಸ ಆಗೋದು. ನಮ್ಮ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಜನಕ್ಕೆ ಕೆಲಸ ಮಾಡಿಕೊಡಲು ಅಷ್ಟೇ ಸಾಧ್ಯ. ಜನರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ನಾನು ಅದನ್ನು ಅಧಿಕಾರಿಗೆ ಹೇಳಿ ಮಾಡಿಸುತ್ತೇನೆ ಅಷ್ಟೆ‌. ಜನರ ಸಮಸ್ಯೆಗಳು ಬೇಗ ಪರಿಹಾರ ಆಗಬೇಕು. ಶಾಸಕನ ಬಳಿ ಬರುವುದಕ್ಕಿಂತ ಸರ್ಕಾರಿ ಕಚೇರಿ ಬಳಿಗೆ ಹೋಗಬೇಕು‌. ವ್ಯವಸ್ಥೆ ಬದಲಾವಣೆಯಾಗಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ: ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ ಜನರು

ನಾನು ಈಗಾಗಲೇ ನನ್ನ ಕಂಪನಿಗಳನ್ನು ಮಾರಾಟ ಮಾಡಿದ್ದೇನೆ. 2021 ರ ಮೇ 21 ರಲ್ಲಿ ಕಂಪನಿಗಳು ಮಾರಾಟವಾಗಿವೆ. ಗೂಗಲ್​​ನಲ್ಲಿ ಚೆಕ್ ಮಾಡಿ ನೋಡಿ. ಈಗ ಆ ಕಂಪನಿಗಳಿಗೂ ನನಗೂ ಸಂಬಂಧ ಇಲ್ಲ. ಮೈಸೂರಿನಲ್ಲೂ ಸಹ ನನ್ನ ಆಫಿಸ್ ಇತ್ತು. ಅದರ ಮಾಲೀಕರ ಹೆಸರು ಕೂಡ ಬೇರೆ ಇದೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ತೇನೆ ಎಂದು ದರ್ಶನ ಪುಟ್ಟಣ್ಣಯ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ