AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಸಚಿವ ನಾರಾಯಣಗೌಡ ಕಾರು ಅಡ್ಡಗಟ್ಟಿ ನಿಂದನೆ, ಕೈಕೈ ಮಿಲಾಯಿಸಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು

ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಸಚಿವ ಕೆಸಿ ನಾರಾಯಣಗೌಡ ಕಾರು ಅಡ್ಡಗಟ್ಟಿ ನಿಂದನೆ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ.

Mandya News: ಸಚಿವ ನಾರಾಯಣಗೌಡ ಕಾರು ಅಡ್ಡಗಟ್ಟಿ ನಿಂದನೆ, ಕೈಕೈ ಮಿಲಾಯಿಸಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು
ಕೆಸಿ ನಾರಾಯಣಗೌಡ (ಸಂಗ್ರಹ ಚಿತ್ರ)
Ganapathi Sharma
|

Updated on:May 03, 2023 | 10:43 PM

Share

ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಸಚಿವ ಕೆಸಿ ನಾರಾಯಣಗೌಡ (KC Narayana Gowda) ಕಾರು ಅಡ್ಡಗಟ್ಟಿ ನಿಂದನೆ ಮಾಡಿದ ಘಟನೆ ಬುಧವಾರ ಸಂಜೆ ನಡೆದಿದೆ. ಸಚಿವರು ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನಾರಾಯಣಗೌಡ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ 70ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತ ಏಕಾಏಕಿ ಕಾರು ತಡೆದಿದ್ದು, ಸಚಿವರನ್ನು ನಿಂದಿಸಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಈ ವೇಳೆ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕಾರು ಅಡ್ಡಗಟ್ಟಿದ ಜೆಡಿಎಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಮನಬಂದಂತೆ ನಿಂದಿಸಿ ತಳ್ಳಾಟ ನೂಕಾಟ ಮಾಡಿದ್ದಾರೆ. ತಕ್ಷಣ ಅಂಗರಕ್ಷಕರು ಸಚಿವ ಡಾ. ನಾರಾಯಣಗೌಡ ಅವರನ್ನು ರಕ್ಷಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಇದೇ 10ರಂದು ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ನಾರಾಯಣಗೌಡ ಕೂಡ ತಾವು ಕಣಕ್ಕಿಳಿದಿರುವ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್ ಅವಘಡದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿಕೆ ಶಿವಕುಮಾರ್, ​ಜ್ಯೋತಿಷಿ ಹೇಳಿದ್ದೇನು?

ಇದಕ್ಕೂ ಮುನ್ನ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣಗೌಡ, ರಾಜ್ಯ ವಿಧಾನಸಭೆಗೆ ಇದು ನನ್ನ ಕೊನೆಯ ಚುನಾವಣೆ. ಕ್ಷೇತ್ರದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿರುವ ಯುವಕರನ್ನು ಗುರುತಿಸಿ ಅವರಿಗೆ ಅಧಿಕಾರವನ್ನು ಇಟ್ಟುಕೊಡುತ್ತೇನೆ ಎಂದು ಹೇಳಿದರು.

ನಾನು ಬಿಜೆಪಿ ಪಕ್ಷವನ್ನು ನಂಬಿ ಬಂದಿದ್ದೇನೆ. ಎಂದಿಗೂ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ವಂಚನೆ ಮಾಡಲಾರೆ. ಕಾರ್ಯಕರ್ತರಿಗೆ ನನ್ನಿಂದ ಏನಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಕೆಆರ್ ಪೇಟೆಯಲ್ಲಿ ಕಮಲ ಅರಳಿಸಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಮಂಗಳವಾರ ಸಂಭವಿಸಿತ್ತು. ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Wed, 3 May 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ