AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರಿಗಿಂತ ಕಂಪನಿನೇ ಹೆಚ್ಚಾಯ್ತ? ಗೆದ್ದ 7 ತಿಂಗಳಲ್ಲಿ ನಾಲ್ಕನೇ ಬಾರಿ ಅಮೆರಿಕಕ್ಕೆ ಹಾರಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ದರ್ಶನ್ ಪುಟ್ಟಣಯ್ಯ ಪದೇ ಪದೇ ಅಮೆರಿಕಾ ಪ್ರವಾಸಕ್ಕೆ ಕೈಗೊಳ್ಳುತ್ತಿರುವುದು ಬಿಸಿನೆಸ್ ಮಾಡುವುದಕ್ಕಾಗಿ ಎಂದು ಮತದಾರರು ಆಕ್ರೋಶ ಹೊರ ಹಾಕಿದ್ದಾರೆ.

ಮತದಾರರಿಗಿಂತ ಕಂಪನಿನೇ ಹೆಚ್ಚಾಯ್ತ? ಗೆದ್ದ 7 ತಿಂಗಳಲ್ಲಿ ನಾಲ್ಕನೇ ಬಾರಿ ಅಮೆರಿಕಕ್ಕೆ ಹಾರಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಶಾಸಕ ದರ್ಶನ್ ಪುಟ್ಟಣ್ಣಯ್ಯ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on: Jan 04, 2024 | 10:39 AM

Share

ಮಂಡ್ಯ, ಜ.04: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ (Dharshan Puttannaiah) ಅವರು ಮತ್ತೆ ಅಮೆರಿಕಾಗೆ ಹಾರಿದ್ದಾರೆ. ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೆರಿಕ (America) ಪ್ರವಾಸ ಕೈಗೊಂಡಿದ್ದಾರೆ. ಕ್ಷೇತ್ರದ ಜನರ ಸಮಸ್ಯೆ ಆಲಿಸಬೇಕಿದ್ದ, ಕಾರ್ಯಕರ್ತರ ಜೊತೆ ನಿಲ್ಲಬೇಕಿದ್ದ ಶಾಸಕ ಹೀಗೆ ಪದೇ ಪದೇ ಅಮೆರಿಕಾಗೆ ಹೋಗುತ್ತಿರುವ ಬಗ್ಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 23ರಂದು ವಿದೇಶಕ್ಕೆ ತೆರಳಿರೊ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜನವರಿ 10ರಂದು ವಾಪಸ್ಸು ಬರಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು. ಅಲ್ಲದೆ ಈ ಹಿಂದೆ ಅಮೆರಿಕಾಗೆ ಹೋಗಿ ವಾಪಾಸ್ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ ಮತ್ತೆ ವಿದೇಶಕ್ಕೆ ಹೋಗಲ್ಲ‌ ಎಂದಿದ್ದರು. ಆದರೆ ಇದೀಗ ಮತ್ತೆ ಅಮೆರಿಕಾಗೆ ಹಾಕಿದ್ದಾರೆ. ಚುನಾವಣೆ ಗೆದ್ದ ಕೇವಲ ಏಳು ತಿಂಗಳಲ್ಲಿ ಇದೀಗ ನಾಲ್ಕನೇ ಬಾರಿ ವಿದೇಶಕ್ಕೆ ತೆರಳಿದ್ದಾರೆ. ಪದೇ ಪದೇ ಅಮೆರಿಕಾಗೆ ತೆರಳುತ್ತಿರುವ ಶಾಸಕರ ಮೇಲೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ: ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ ಜನರು

ದರ್ಶನ್ ಪುಟ್ಟಣಯ್ಯ ಪದೇ ಪದೇ ಅಮೆರಿಕಾ ಪ್ರವಾಸಕ್ಕೆ ಕೈಗೊಳ್ಳುತ್ತಿರುವುದು ಬಿಸಿನೆಸ್ ಮಾಡುವುದಕ್ಕಾಗಿ ಎಂದು ಮತದಾರರು ಆಕ್ರೋಶ ಹೊರ ಹಾಕಿದ್ದಾರೆ. ಶಾಸಕರು ರೈಲಿನಲ್ಲಿ, ಆಟೋದಲ್ಲಿ ಪ್ರಯಾಣ ಮಾಡ್ತಾರೆ ಎಂದು ಫೋಟೋ ಹಾಕೋರು ಇಂದು ವಿಮಾನದಲ್ಲಿ ಓಡಾಡೋದ್ನೂ ಹಾಕಬೇಕಲ್ವಾ? ಅಮೆರಿಕಾದಲ್ಲಿ ಬಿಸಿನೆಸ್ ಮಾಡೊ‌ ಬದಲು ಆ ಕಂಪನಿಯನ್ನ ಇಲ್ಲೆ ಸ್ಥಾಪಿಸಿದ್ರೆ ಇಲ್ಲಿಯವರಿಗೂ ಕೆಲಸ ಕೊಟ್ಟಂಗೆ ಆಗುತ್ತೆ. ಶಾಸಕರು ಇಲ್ಲೇ ಇದ್ದಂಗೆ ಆಗುತ್ತೆ. ಜನರ ಸಮಸ್ಯೆ ಕೇಳಬೇಕಾದವರು ಪದೇ ಪದೇ ಅಮೆರಿಕಾಗೆ ಹೋದ್ರೆ ನಮ್ಮ ಸಮಸ್ಯೆ ಯಾರ ಹತ್ರ ಹೇಳ್ಕೊಬೇಕು ಎಂದು ಮೇಲುಕೋಟೆ ಕ್ಷೇತ್ರದ ಮತದಾರರು ಆಕ್ರೋಶ ಹೊರ ಹಾಕಿದ್ದಾರೆ. ತೀವ್ರ ಬರದ ನಡುವೆ ಪದೇ ಪದೇ ವಿದೇಶಿ ಪ್ರಯಾಣ ಮಾಡುತ್ತಿರೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಮಂಡ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ