AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಮತ್ತೆ ಶಾಸಕ ಸಂಸದೆ ಜಟಾಪಟಿ: ಸುಮಲತಾ ವಿರುದ್ಧ ಸುರೇಶ್ ಗೌಡ ವಾಗ್ದಾಳಿ

ಕರ್ನಾಟಕ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ಸಂಸದೆ ಸುಮಲತಾ ದಿಶಾ ಸಭೆ ನಡೆಸಿದರು. ಅಧಿವೇಶನದಲ್ಲಿದ್ದ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎನ್ನುವುದು ಶಾಸಕ ಸುರೇಶ್ ಗೌಡ ಅವರ ಆರೋಪವಾಗಿದೆ.

ಮಂಡ್ಯದಲ್ಲಿ ಮತ್ತೆ ಶಾಸಕ ಸಂಸದೆ ಜಟಾಪಟಿ: ಸುಮಲತಾ ವಿರುದ್ಧ ಸುರೇಶ್ ಗೌಡ ವಾಗ್ದಾಳಿ
ಮಂಡ್ಯ ಸಂಸದೆ ಸುಮಲತಾ ಮತ್ತು ಸುರೇಶ್​ಗೌಡ
TV9 Web
| Edited By: |

Updated on: Mar 27, 2022 | 1:07 PM

Share

ಮಂಡ್ಯ: ಹಲವು ದಿನಗಳಲ್ಲಿ ಒಂದಲ್ಲಾ ಕಾರಣದಿಂದ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಮತ್ತು ವಿವಿಧ ಶಾಸಕರ ನಡುವೆ ಜಟಾಪಟಿ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ನಡುವೆ ಸಮನ್ವಯಕ್ಕಾಗಿ ಜಿಲ್ಲಾ ಮಟ್ಟದಲ್ಲಿ ನಡೆಸುವ ‘ದಿಶಾ’ (District Development Coordination and Monitoring Committee – DISHA) ಸಭೆ ಇದೀಗ ಶಾಸಕರು ಮತ್ತು ಸಂಸದರ ನಡುವಣ ವಿವಾದಕ್ಕೆ ನೆಪವಾಗಿ ಒದಗಿಬಂದಿದೆ. ಕರ್ನಾಟಕ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ಸಂಸದೆ ಸುಮಲತಾ ದಿಶಾ ಸಭೆ ನಡೆಸಿದರು. ಅಧಿವೇಶನದಲ್ಲಿದ್ದ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎನ್ನುವುದು ಶಾಸಕ ಸುರೇಶ್ ಗೌಡ ಅವರ ಆರೋಪವಾಗಿದೆ.

‘ಸಂಸದೆ ಸುಮಲತಾ ಹೇಗೆ ಯೋಚಿಸುತ್ತಾರೆ ಎನ್ನುವುದು ನಮಗೆ ಅರ್ಥವಾಗಿದೆ. ನಾವು ಏನು ಮಾತನಾಡಿದರೂ ಅದನ್ನೇ ಅವರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರಕ್ಕೆ ಜಗಳ ಮಾಡುವುದಕ್ಕೆಂದೇ ಅವರು ಬರುತ್ತಾರೆ ಎಂದು ಮಂಡ್ಯದಲ್ಲಿ ನಾಗಮಂಗಲ ಶಾಸಕ ಸುರೇಶ್ ಗೌಡ ಹೇಳಿದರು. ನಾವ್ಯಾರೂ ಕ್ಷೇತ್ರಗಳಲ್ಲಿ ಇರುವುದಿಲ್ಲ. ನಾವೆಲ್ಲರೂ ನಿಷ್ಪ್ರಯೋಜಕರು. ಕ್ಷೇತ್ರಕ್ಕೆ ಅನುದಾನ ತರಲೂ ನಮ್ಮಿಂದ ಸಾಧ್ಯವಾಗಿಲ್ಲ ಎಂದು ಸುಮಲತಾ ಭಾವಿಸಿರುವಂತಿದೆ. ಇನ್ನೊಂದು ವರ್ಷದ ನಂತರ ಜನರೇ ಈ ಬಗ್ಗೆ ತೀರ್ಪು ಕೊಡಲಿದ್ದಾರೆ ಎಂದು ವ್ಯಂಗ್ಯವಾಡಿದರು.

ನಮ್ಮನ್ನ ಹೊರಗಿಟ್ಟು ದಿಶಾ ಸಭೆ ಮಾಡಿದಾಗಲೇ ಇವರ ಬುದ್ಧಿ ನಮಗೆ ಅರ್ಥವಾಗಿದೆ. ವಿಧಾನಸಭೆ ನಡೆಯುವಾಗ ದರ್ಖಾಸ್ತು ಸಭೆಯನ್ನೂ ಕರೆಯುವಂತಿಲ್ಲ. ಅಂಥದ್ದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ವಿಮರ್ಶಿಸುವ ‘ದಿಶಾ’ ಸಭೆ ನಡೆಸಿದ್ದಾರೆ. ನಾವು ವಿಧಾನಸಭೆಯಲ್ಲಿ ಇರಬೇಕಾ ಅಥವಾ ದಿಶಾ ಸಭೆಗೆ ಹೋಗಬೇಕಾ ಎಂದು ಅವರು ಪ್ರಶ್ನಿಸಿದರು.

ಸ್ಪೀಕರ್ ಸೂಚನೆ ಮನ್ನಿಸಿ ನಾವು ಅಧಿವೇಶನದಲ್ಲಿ ಪಾಲ್ಗೊಂಡಿದ್ದೆವು. ನಾವು ಸಭೆಗೆ ಬಂದರೆ ಸಮಸ್ಯೆ ಬಗ್ಗೆ ನೇರವಾಗಿ ಮಾತನಾಡುತ್ತೇವೆ. ಯಾವುದೇ ಕಾರಣದಿಂದ ನಾವು ಸಭೆಗೆ ಗೈರು ಹಾಜರಾದರೆ ಅವರೊಬ್ಬರೇ ಅಧಿಕಾರಿಗಳನ್ನು ಏನು ಬೇಕಾದರೂ ಹೆದರಿಸಿಕೊಳ್ಳಬಹುದು ಎಂದು ಅವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸುಮಲತಾ ವಿರುದ್ಧ ಜೆಡಿಎಸ್ ಶಾಸಕರ ಟಾಕ್ ವಾರ್; ಬಹಿರಂಗ ಚರ್ಚೆಗೆ ಆಹ್ವಾನಿಸಿದ ಡಿಸಿ ತಮ್ಮಣ್ಣ

ಇದನ್ನೂ ಓದಿ: ಮಂತ್ರಿಗಳಿಗೆ ಲೆಟರ್ ಕೊಟ್ಟು ಫೋಟೊ ಹಾಕಿದ್ರೆ ಪ್ರಯೋಜನವಿಲ್ಲ, ಮಂಡ್ಯಕ್ಕೆ ಏನು ಅನುದಾನ ತಂದಿದ್ದೀರಿ?: ಸುಮಲತಾಗೆ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?