AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ! ಜೀವ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

Kiccha Sudeep: 102 ವರ್ಷಗಳ ಇತಿಹಾಸವುಳ್ಳ ಪಾಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ದಿನ ನಿತ್ಯ ಪ್ರಾಣ ಭಯದಲ್ಲೇ ಪಾಠ ಕೇಳುತ್ತಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ಮೈ ಆಟೋಗ್ರಾಫ್ ಸಿನಿಮಾ ಚಿತ್ರೀಕರಣಕ್ಕೆ ಶಾಲೆಯನ್ನ ಬಳಸಿಕೊಳ್ಳಲಾಗಿತ್ತು.

ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ! ಜೀವ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ!
TV9 Web
| Updated By: ಸಾಧು ಶ್ರೀನಾಥ್​|

Updated on:Dec 24, 2022 | 10:33 AM

Share

ಮಂಡ್ಯ: ನೂರಾರು ವರ್ಷ ಇತಿಹಾಸವುಳ್ಳ ಸರ್ಕಾರಿ ಶಾಲೆಯ ಪರಿಸ್ಥಿತಿ ಕೇಳೊರೆ ಇಲ್ಲಾವಾಗಿದೆ. ಗೋಡೆ ಕುಸಿದು ಶಾಲೆಯಲ್ಲಿ ಕುಳಿತುಕೊಳ್ಳಲೂ ಸ್ಥಳವಿಲ್ಲದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರದಾಟ ನಡೆಸಿದ್ದಾರೆ. ವಿದ್ಯಾರ್ಥಿಗಳು (students) ಜೀವ ಭಯದಲ್ಲೇ ಪಾಠ ಕೇಳುತ್ತಿದ್ದಾರೆ; ಅಧ್ಯಾಪಕರೂ ಸಹ ಜೀವ ಭಯದಲ್ಲೇ ಪಾಠ ಮಾಡುತ್ತಿದ್ದಾರೆ. ಇದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ (srirangapattana, mandya) ತಾಲೂಕಿನ ಪಾಲಹಳ್ಳಿ ಸರ್ಕಾರಿ ಶಾಲೆಯ (Palahalli government school) ಶೋಚನೀಯ ಸ್ಥಿತಿ.

ಹೊಸ ಕಟ್ಟಡ ನಿರ್ಮಾಣ ಮಾಡಿ ಕೊಡುವಂತೆ ಮಾನವಿ ಮಾಡಿದ್ದರೂ ಜಿಲ್ಲಾಡಳಿತ ದಿವ್ಯ ನಿರ್ಲಕ್ಷ್ಯ ತೋರಿದೆ. ಇದರೊಂದಿಗೆ 47 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಸರ್ಕಾರಿ ಶಾಲೆ ಉಳಿಸಿ ಸರ್ಕಾರಿ ಶಾಲೆ ಬೆಳಸಿ ಅನ್ನೋದು ಬರಿ ಬಾಯಿ ಮಾತಿಗೆ ಸೀಮಿತವಾಯ್ತಾ? ಎಂಬ ಆತಂಕವೂ ನಿರ್ಮಾಣವಾಗಿದೆ.

Also Read:

Burial Ground: ಆರಗ ಜ್ಞಾನೇಂದ್ರ ಕ್ಷೇತ್ರದ ಗ್ರಾಮಸ್ಥರಿಗೆ ಸಾವಿನ ನೋವಿಗಿಂತ ಅಂತ್ಯಸಂಸ್ಕಾರ ಮಾಡುವುದೇ ಸಂಕಟಮಯ!

ಜಿಲ್ಲಾಡಳಿತವು ಬಡವರು, ರೈತರ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡಲು ಕಾದು ಕುಳಿತಿದ್ಯಾ ಎಂಬ ಅನುಮಾನವೂ ಮೂಡಿದೆ. ವಿದ್ಯಾರ್ಥಿ ಹಾಗೂ ಶಿಕ್ಷಕರ ಜೀವದ ಜೊತೆ ಜಿಲ್ಲಾಡಳಿತ ಚೆಲ್ಲಾಟವಾಡುತ್ತಿದೆ. ಜಿಲ್ಲಾಡಳಿತದ ಈ ಧೋರಣೆಗೆ ಪಾಲಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

102 ವರ್ಷಗಳ ಇತಿಹಾಸವುಳ್ಳ ಪಾಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ದಿನ ನಿತ್ಯ ಪ್ರಾಣ ಭಯದಲ್ಲೇ ಪಾಠ ಕೇಳುತ್ತಿದ್ದಾರೆ. ಮೈ ಆಟೋ ಗ್ರಾಫ್ ಚಿತ್ರದಲ್ಲಿ ಬಳಕೆಯಾಗಿರೊ ಪಾಲಹಳ್ಳಿ ಸರ್ಕಾರಿ ಶಾಲೆ ಇದಾಗಿದೆ. ಕಿಚ್ಚ ಸುದೀಪ್ (Kiccha Sudeep) ಅಭಿನಯದ ಮೈ ಆಟೋಗ್ರಾಫ್ ಸಿನಿಮಾ ಚಿತ್ರೀಕರಣಕ್ಕೆ ಶಾಲೆಯನ್ನ ಬಳಸಿಕೊಳ್ಳಲಾಗಿತ್ತು. ಯಾವ ಕ್ಷಣದಲ್ಲಿ ಬೇಕಾದರೂ ಕಟ್ಟಡ ಕುಸಿದು ಅಪಾಯ ಸಂಭವಿಸೋ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Sat, 24 December 22

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ