AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆಗೆ 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ! ರೈತ ಮಹಿಳೆ ಕಣ್ಣೀರು

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಹಿರಜಮ್ಮ ಎಂಬುವವರಿಗೆ ಸೇರಿದ ಮರಗಳು ನಾಶವಾಗಿದೆ. ರೈತ ಮಹಿಳೆ ಹಿರಜಮ್ಮ ತೆಂಗಿನ ಮರಗಳನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ.

ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆಗೆ 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ! ರೈತ ಮಹಿಳೆ ಕಣ್ಣೀರು
ನೆಲಕ್ಕೆ ಉರುಳಿದ ತೆಂಗಿನ ಮರಗಳು
TV9 Web
| Updated By: sandhya thejappa|

Updated on:May 09, 2022 | 11:19 AM

Share

ಮಂಡ್ಯ: ರಾಜ್ಯದಲ್ಲಿ ಹಲವು ಕಡೆ ಕಳೆದ ವಾರದಿಂದ ಗಾಳಿ ಸಹಿತ ಮಳೆಯಾಗುತ್ತಿದೆ. ಭಾರಿ ಮಳೆಗೆ (Heavy Rain) ಅವಾಂತರ ಸೃಷ್ಟಿಯಾಗಿದ್ದು, ರೈತರು (Farmers) ಆತಂಕಗೊಂಡಿದ್ದಾರೆ. ರಾತ್ರಿ ಸುರಿದ ಮಳೆಗೆ 90ಕ್ಕೂ ಹೆಚ್ಚಿನ ಮರಗಳು ನೆಲಕ್ಕೆ ಉರುಳಿವೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಹಿರಜಮ್ಮ ಎಂಬುವವರಿಗೆ ಸೇರಿದ ಮರಗಳು ನಾಶವಾಗಿದೆ. ರೈತ ಮಹಿಳೆ ಹಿರಜಮ್ಮ ತೆಂಗಿನ ಮರಗಳನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದಾರೆ. ನೆಲಸಮಗೊಂಡ ತೆಂಗಿನ ಮರದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ನಷ್ಟವನ್ನು ನೆನೆದು ಮಹಿಳೆ ಕಣ್ಣೀರು ಹಾಕಿದ್ದಾರೆ.

ಧರೆಗುರುಳಿದ ದೊಡ್ಡ ಮರ: ವಿಜಯನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಹೊಸಪೇಟೆಯ ಚಿತ್ತವಾಡ್ಗಡಿಯಲ್ಲಿ ದೊಡ್ಡ ಮರ ಧರೆಗುರುಳಿದೆ. ಕೂಡ್ಲಿಗಿ ತಾಲೂಕಿನ ನಿಂಬಳಗೇರೆಯಲ್ಲಿ ಬಾಳೆ ಬೆಳೆ ನೆಲಸಮವಾಗಿದೆ. ವಿದ್ಯುತ್ ತಂತಿ ತಗುಲಿ ತೆಂಗಿನ ಮರ ದಿಢೀರ್ ಹೊತ್ತಿ ಉರಿದಿದೆ.

ಇನ್ನು ಅತ್ತಿಬೆಲೆ, ಸರ್ಜಾಪುರ, ಚಂದಾಪುರದ ಬಳಿ ಎತ್ತರದ ಜಾಹೀರಾತು ಹೋರ್ಡಿಂಗ್ಸ್ ಧರೆಗುರುಳಿದೆ. ಪರವಾನಗಿ ಪಡೆದುಕೊಳ್ಳದ ಜಾಹಿರಾತು ಹೋರ್ಡಿಂಗ್ಸ್ ನೆಲಕ್ಕೆ ಉರುಳಿವೆ. ಸರಕಾರಕ್ಕೆ ತೆರಿಗೆ ಕಟ್ಟದೇ ಫಲಕಗಳನ್ನ ನಿರ್ಮಾಣ ಮಾಡಿದ್ದರು. ರಾತ್ರಿ ಬೀಸಿದ ಗಾಳಿಗೆ ಜಾಹಿರಾತು ಕಂಬ ಅಂಗಡಿಗಳ ಮೇಲೆ ಬಿದ್ದಿದೆ. ಪಿಡಬ್ಲ್ಯೂಡಿ ಇಲಾಖೆ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

4 ದಿನ ಬಾರಿ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿ, ಉಷ್ಣ ಅಲೆ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ 4 ದಿನ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ

ಸೇಡು ತೀರಿಸಿಕೊಳ್ಳಿ: ವಿಜಯೋತ್ಸವ ಪರೇಡ್​ನಲ್ಲಿ ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ವೀರಾವೇಶದ ಭಾಷಣ

ತಮ್ಮ ಪಕ್ಷಕ್ಕೆ ಮತ ಹಾಕಬೇಡಿ ಎಂದ ಜೆಡಿಎಸ್ ಎಂಎಲ್​ಸಿ ಮರಿತಿಬ್ಬೇಗೌಡ! ಮಂಡ್ಯದಲ್ಲಿ ದಳಪತಿಗಳ ಮತ್ತೊಂದು ವಿಕೆಟ್ ಪತನ ಸಾಧ್ಯತೆ

Published On - 11:15 am, Mon, 9 May 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ