AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha Ambarish: ಸಕ್ರಮ ಗಣಿಗಾರಿಕೆಗೆ ನನ್ನ ವಿರೋಧವಿಲ್ಲ, ಆದರೆ ಅಕ್ರಮದ ಹೆಸರಲ್ಲಿ ಗಣಿಗಾರಿಕೆ ಸಕ್ರಮ ಬೇಕೇ? ಸಂಸದೆ ಸುಮಲತಾ ಅಂಬರೀಶ್

ಕೆ.ಆರ್.ಎಸ್ ಡ್ಯಾಂ ಮತ್ತು ನಮ್ಮ ಪರಿಸರ ನಮಗೆ ಮುಖ್ಯ. ಪ್ರವಾಹ ಬಂತು ಅಂದ್ರೆ 5 ಸಾವಿರ ಕೋಟಿ ಕೊಡಿ, 10 ಸಾವಿರ ಕೋಟಿ ಕೊಡಿ ಅಂದ್ರೆ ಸರ್ಕಾರ ಕೊಡಬಹುದು. ಆದ್ರೆ ಮತ್ತೆ ಮತ್ತೆ ಪ್ರವಾಹ ಬಂದ್ರೆ ಏನ್ಮಾಡೋದು? 

Sumalatha Ambarish: ಸಕ್ರಮ ಗಣಿಗಾರಿಕೆಗೆ ನನ್ನ ವಿರೋಧವಿಲ್ಲ, ಆದರೆ ಅಕ್ರಮದ ಹೆಸರಲ್ಲಿ ಗಣಿಗಾರಿಕೆ ಸಕ್ರಮ ಬೇಕೇ? ಸಂಸದೆ ಸುಮಲತಾ ಅಂಬರೀಶ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 11, 2021 | 6:11 PM

Share

ಮಂಡ್ಯ: ಸಕ್ರಮ ಗಣಿಗಾರಿಕೆಗೆ ನನ್ನ ವಿರೋಧವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆದರೆ ಕೆಆರ್​ಎಸ್ ಡ್ಯಾಂ ಸುತ್ತಮುತ್ತ ಅಕ್ರಮ ಗಣಿಗಾರಿಕೆ ಹಸರಲ್ಲಿ ಹೆಸರಲ್ಲಿ ಗಣಿಗಾರಿಕೆ ಸಕ್ರಮ ಬೇಕೇ?ಎಂದು ಅವರು ಪ್ರಶ್ನಿಸಿದ್ದಾರೆ.  ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ದೊಡ್ಡರಸಿನಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಕ್ರಮ ಗಣಿಗಾರಿಕೆ ಬಗ್ಗೆ ನಾನು ಚರ್ಚೆ ಮಾಡಲ್ಲ. ಗಣಿಗಾರಿಕೆ ಬಗ್ಗೆ ಮಾತನಾಡಿದರೆ ಕೆಲವರು ಮಾತನಾಡುತ್ತಾರೆ. ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿದ್ದರಿಂದಲೇ ಗ್ರೌಟಿಂಗ್ ಮಾಡಿದ್ದಾರೆ. 67 ಕೋಟಿ ವೆಚ್ಚದಲ್ಲಿ ಗ್ರೌಟಿಂಗ್ ಮಾಡಿ ದುರಸ್ತಿ ಮಾಡಿದ್ದಾರೆ. ಗಣಿ ಇಲಾಖೆ ನೂತನ ಸಚಿವರನ್ನು ಭೇಟಿಯಾಗಿ ಚರ್ಚಿಸುವೆ. ಕೆಆರ್ಎಸ್ ಡ್ಯಾಂ 5 ಕಿ.ಮೀ. ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸಚಿವರಿಗೆ ಒತ್ತಾಯಿಸುವೆ ಎಂದು ಸುಮಲತಾ ಅಂಬರೀಶ್ ಹೇಳಿದರು.

ಎರಡು ವರ್ಷದಿಂದಲು ಕೂಡ ಈ ಬಗ್ಗೆ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಮೊನ್ನೆ ಅಧಿವೇಶನದಲ್ಲಿದ್ದಾಗಲೂಈ ಬಗ್ಗೆ ಚರ್ಚೆ ಮಾಡಿದ್ದೇನೆ. ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ. ಎಲ್ಲರೂ ಕೂಡ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಅಮಿತ್ ಶಾ ಅಧಿಕಾರಿಗಳಿಗೆ ಹೇಳಿದ್ದಾರೆ. ಅಕ್ರಮ ನಡೆಯುತ್ತಿದೆ ಎಂದು ಧ್ವನಿ ಎತ್ತಿದಾಗ ಹಲವು ಕಡೆಯಿಂದ ವಿರೋಧ ವ್ಯಕ್ತವಾಗಿದೆ.  ಕೆಲವರು ವಿರೋಧ ಮಾಡಿದರು ಅಂತ ನಾನು ಭಯ ಪಟ್ಟು ಹಿಂದೆಸರಿಯಲ್ಲ. ನಾನು ಏನೋ ತಪ್ಪು ಮಾಡಿದ್ದೇನೆ ಎಂದು ಬಿಂಬಿಸಲು ಹೊರಟವರಿಗೆ ನನ್ನ ಹೋರಾಟದ ಮೂಲಕ ಉತ್ತರ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

ಅಕ್ರಮ ಗಣಿಗಾರಿಕೆಯನ್ನು ಸಕ್ರಮ ಮಾಡಬೇಕು ಎಂದು ಹೇಳುತ್ತಿರುವವರು ಮೊದಲು ಅಕ್ರಮ ನಡೆಯುತ್ತಿದೆ ಎಂದು ಒಪ್ಪಿಕೊಳ್ಳಬೇಕು. ಈಗ ಅಕ್ರಮ ಮಾಡಿದ್ದೇವೆ, ಸಕ್ರಮ ಮಾಡಿಕೊಡಿ ಎಂದು ಹೇಳಿದ್ರೆ ಅದಕ್ಕೆ ಒಂದು ಪ್ರಾಸೆಸ್ ಇರುತ್ತೆ. ಆದರೆ ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆಗೆ ಅವಕಾಶ ಮಾಡಿಕೊಡಿ ಅಂದ್ರೆ ಅದು ಆಗಲ್ಲ. ಕೆ.ಆರ್.ಎಸ್ ಡ್ಯಾಂ ಮತ್ತು ನಮ್ಮ ಪರಿಸರ ನಮಗೆ ಮುಖ್ಯ. ಪ್ರವಾಹ ಬಂತು ಅಂದ್ರೆ 5 ಸಾವಿರ ಕೋಟಿ ಕೊಡಿ, 10 ಸಾವಿರ ಕೋಟಿ ಕೊಡಿ ಅಂದ್ರೆ ಸರ್ಕಾರ ಕೊಡಬಹುದು. ಆದ್ರೆ ಮತ್ತೆ ಮತ್ತೆ ಪ್ರವಾಹ ಬಂದ್ರೆ ಏನ್ಮಾಡೋದು?  ಮೊದಲು ಎಚ್ಚೆತ್ತುಕೊಳ್ಳೋದು ನಮ್ಮ ಜವಾಬ್ದಾರಿ. ನಾವು ಪರಿಸರವನ್ನ ನಾಶ ಮಾಡಿದ್ರೆ, ಪರಿಸರ ನಮ್ಮನ್ನ ನಾಶ ಮಾಡುತ್ತೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: 

ಗಣಿಗಾರಿಕೆ ಸ್ಥಗಿತದಿಂದ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ

ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪ; ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಂಸದೆ ಸುಮಲತಾ ಒತ್ತಾಯ

Published On - 5:35 pm, Wed, 11 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?