AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ತರಾಟೆ, ಜೆಡಿಎಸ್​ ಶಾಸಕರಿಗೆ ಮತ್ತೊಮ್ಮೆ ಪಂಥಾಹ್ವಾನ

ನೀವು ಇಷ್ಟು ಬೇಜವಾಬ್ದಾರಿಯಿಂದ ವರ್ತಿಸಿದರೆ ಮಂಡ್ಯದ ಜನರು ರಸ್ತೆತಡೆ ಮಾಡಿ ಪ್ರತಿಭಟಿಸ್ತಾರೆ. ಇಡೀ ಯೋಜನೆ ವ್ಯರ್ಥವಾಗುತ್ತೆ ಎಂದು ಸುಮಲತಾ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಎಚ್ಚರಿಸಿದರು.

Mandya News: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ತರಾಟೆ, ಜೆಡಿಎಸ್​ ಶಾಸಕರಿಗೆ ಮತ್ತೊಮ್ಮೆ ಪಂಥಾಹ್ವಾನ
ಮಂಡ್ಯ ಸಂಸದೆ ಸುಮಲತಾ
TV9 Web
| Edited By: |

Updated on:Oct 18, 2022 | 2:23 PM

Share

ಮಂಡ್ಯ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ (MP Sumalatha) ತರಾಟೆಗೆ ತೆಗೆದುಕೊಂಡಿರುವ ಘಟನೆ ನಗರದಲ್ಲಿ ಮಂಗಳವಾರ (ಅ 18) ನಡೆದಿದೆ. ಸಮಸ್ಯೆ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಅಧಿಕಾರಿ (National Highway Authority of India – NHAI) ಸ್ಥಳಕ್ಕೆ ಬಾರದಿದ್ದಕ್ಕೆ ಸಂಸದೆ ಕೆಂಡಾಮಂಡಲವಾದರು. ಈ ವೇಳೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಅವರಿಗೆ ಕರೆ ಮಾಡಿದ ಸುಮಲತಾ ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ಬಂದಾಗಲೆಲ್ಲಾ ಪರಿಸ್ಥಿತಿ ಹದಗೆಡುತ್ತದೆ ಎಂದು ಈ ವೇಳೆ ಸ್ಥಳೀಯರು ದೂರಿದರು.

ನೀವು ಇಷ್ಟು ಬೇಜವಾಬ್ದಾರಿಯಿಂದ ವರ್ತಿಸಿದರೆ ಮಂಡ್ಯದ ಜನರ ರಸ್ತೆತಡೆ ಮಾಡಿ ಪ್ರತಿಭಟಿಸ್ತಾರೆ. ಇಡೀ ಯೋಜನೆ ವ್ಯರ್ಥವಾಗುತ್ತೆ. ಇದನ್ನು ಇಲ್ಲಿಗೆ ಬಿಡಲ್ಲ, ಮೇಲಿನವರ ಗಮನಕ್ಕೆ ತರ್ತೀನಿ ಮಿಸ್ಟರ್ ಶ್ರೀಧರ್ ಎಂದು ಸುಮಲತಾ ಅವರು ಎಂಜಿನಿಯರ್​ಗೆ ತಾಕೀತು ಮಾಡಿದರು.

ಒಂದೂವರೆ ತಿಂಗಳ ಹಿಂದೆಯೇ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಮೊನ್ನೆ ಸುರಿದ ಮಳೆಯಿಂದಾಗಿ ನೀರು ಹೆದ್ದಾರಿಗೆ ನುಗ್ಗಿತ್ತು. ಜನರ ದೂರಿನ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಮತ್ತೊಮ್ಮೆ ಪರಿಶೀಲನೆ ನಡೆಸಿದರು. ಈ ವೇಳೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.

ಸಂಸದರ ಸ್ಥಳ ಪರಿಶೀಲನೆ ಕುರಿತು ಸಾಕಷ್ಟು ಮೊದಲೇ ಮಾಹಿತಿ ನೀಡಿದ್ದರೂ ಹೆದ್ದಾರಿ ಅಧಿಕಾರಿಯಾಗಲಿ ಅಥವಾ ಗುತ್ತಿಗೆದಾರರಾಗಲಿ ಸ್ಥಳಕ್ಕೆ ಬಂದಿರಲಿಲ್ಲ. ಬದಲಿಗೆ ಕಾಮಗಾರಿ ಗುತ್ತಿಗೆಗೆ ಪಡೆದಿರುವ ದಿಲೀಪ್ ಬಿಲ್ಡ್ ಕಾನ್ ಸಂಸ್ಥೆಯ ಕಿರಿಯ ಅಧಿಕಾರಿ ಸ್ಥಳದಲ್ಲಿದ್ದರು. ಅವರ ಬಳಿ ಹೆಚ್ಚಿನ ಮಾಹಿತಿ ಇರಲಿಲ್ಲ. ಇದರಿಂದ ಸಿಟ್ಟಾದ ಸಂಸದರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್​ಗೆ ಕರೆ ಮಾಡಿ ‘ನಾಟಕ ಮಾಡ್ತಿದ್ದೀರೇನ್ರೀ’ ಎಂದು ತರಾಟೆಗೆ ತೆಗೆದುಕೊಂಡರು.

ಶಾಸಕರಿಗೆ ಸುಮಲತಾ ಪಂಥಾಹ್ವಾನ

ಮಂಡ್ಯದ ಜೆಡಿಎಸ್ ಶಾಸಕರಿಗೆ ಸಂಸದೆ ಸುಮಲತಾ ಸವಾಲು ಹಾಕಿದರು. ಜೆಡಿಎಸ್ ಶಾಸಕರು ತಮ್ಮ ಸಮಯ ತಿಳಿಸಿದರೆ ಸಾಕು. ನಾನು ಅಷ್ಟೊತ್ತಿಗೆ ಮೇಲುಕೋಟೆಗೆ ಬರುತ್ತೇನೆ. ಎಲ್ಲ ಜೆಡಿಎಸ್ ಶಾಸಕರೂ ಬಂದು ಪ್ರಮಾಣ ಮಾಡಲಿ ಎಂದು ಆರು ಶಾಸಕರಿಗೂ ಸುಮಲತಾ ಸವಾಲು ಹಾಕಿದರು.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಿಂದಲೂ ಸುಮಲತಾ ಮತ್ತು ಇತರ ಜೆಡಿಎಸ್ ಶಾಸಕರೊಂದಿಗೆ ಟೆಂಡರ್ ಕಮಿಷನ್ ವಿಚಾರವಾಗಿ ಆಣೆ-ಪ್ರಮಾಣದ ವಿವಾದ ನಡೆಯುತ್ತಲೇ ಇದೆ. ಪರಸ್ಪರ ಆರೋಪ-ಪ್ರತ್ಯಾರೋಪ ಮತ್ತು ವಾಕ್ಸಮರ ತಾರಕಕ್ಕೇರಿದ್ದು, ಮೇಲುಕೋಟೆ ಚಲುವ ನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡಬೇಕು ಎಂದು ಸಮುಲತಾ ಜಿಲ್ಲೆಯ ಎಲ್ಲಾ ಆರು ಜೆಡಿಎಸ್ ಶಾಸಕರಿಗೆ ಸವಾಲು ಹಾಕಿದ್ದಾರೆ.

Published On - 2:19 pm, Tue, 18 October 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ