AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ನಾಟಿಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ಸ್ಪರ್ಧೆ; 2.5 ಕೆಜಿ ಮುದ್ದೆ ತಿಂದು ಗೆದ್ದ ಕೆಂಪರಾಜು! ವಿಡಿಯೋ ನೋಡಿ

2.2 ಕೆಜಿ ಮುದ್ದೆ ತಿಂದು‌ ಹುಲ್ಕೇರೆ ಪ್ರಶಾಂತ್ ಮೂರನೇ ಬಹುಮನ‌ ಪಡೆದಿದ್ದಾರೆ. 2.1 ಕೆಜಿ ಮುದ್ದೆ ತಿಂದು ಹನಿಯಂಬಾಡಿ ಮಹೇಶ್ ಸಮಾಧಾನಕರ ಬಹುಮಾನ‌ ಪಡೆದುಕೊಂಡಿದ್ದಾರೆ.

ಮಂಡ್ಯ: ನಾಟಿಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ಸ್ಪರ್ಧೆ; 2.5 ಕೆಜಿ ಮುದ್ದೆ ತಿಂದು ಗೆದ್ದ ಕೆಂಪರಾಜು! ವಿಡಿಯೋ ನೋಡಿ
ನಾಟಿಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ಸ್ಪರ್ಧೆ
TV9 Web
| Edited By: |

Updated on:Dec 26, 2021 | 5:00 PM

Share

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಗಮನ ಸೆಳೆದ ನಾಟಿಕೋಳಿ ಸಾರಿನೊಂದಿಗೆ ಮುದ್ದೆ ತಿನ್ನುವ ವಿಶೇಷ ಸ್ಪರ್ಧೆ ನಡೆದಿದೆ. ಮಂಡ್ಯ ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ನಡೆದ ಗ್ರಾಮೀಣ ಕ್ರೀಡೆ ಹಲವರ ಗಮನ ಸೆಳೆದಿದೆ. ಗ್ರಾಮದ ವಿಶ್ವೇಶ್ವರಯ್ಯ ಯುವಕರ ಬಳಗದಿಂದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಗ್ರಾಮೀಣ ಕ್ರೀಡೆಯಲ್ಲಿ 50 ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದಾರೆ.

2.5 ಕೆಜಿ ಮುದ್ದೆ ತಿಂದ ಮೊತ್ತಹಳ್ಳಿ ಕೆಂಪರಾಜು ಮೊದಲ ಬಹುಮಾನ ಪಡೆದುಕೊಂಡಿದ್ದಾರೆ. 2.3 ಕೆಜಿ ಮುದ್ದೆ ತಿಂದ ಹುಣಸಹಳ್ಳಿಯ ಶಿವಣ್ಣ ದ್ವಿತೀಯ ಬಹುಮಾನ‌ ಪಡೆದುಕೊಂಡಿದ್ದಾರೆ. 2.2 ಕೆಜಿ ಮುದ್ದೆ ತಿಂದು‌ ಹುಲ್ಕೇರೆ ಪ್ರಶಾಂತ್ ಮೂರನೇ ಬಹುಮನ‌ ಪಡೆದಿದ್ದಾರೆ. 2.1 ಕೆಜಿ ಮುದ್ದೆ ತಿಂದು ಹನಿಯಂಬಾಡಿ ಮಹೇಶ್ ಸಮಾಧಾನಕರ ಬಹುಮಾನ‌ ಪಡೆದುಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗೆದ್ದವರಿಗೆ 5,001 ರೂಪಾಯಿ ಮತ್ತು ಟ್ರೋಫಿ, ದ್ವಿತೀಯ ಬಹುಮಾನ ಗೆದ್ದವರಿಗೆ 3001 ರೂಪಾಯಿ ಮತ್ತು ಟ್ರೋಫಿ, ತೃತೀಯ ಬಹುಮಾನವಾಗಿ ಗೆದ್ದವರಿಗೆ 1001 ರೂಪಾಯಿ ಮತ್ತು ಟ್ರೋಫಿ ನೀಡಲಾಗಿದೆ. ಸಮಾಧಾನಕರ ಬಹುಮಾನ ಪಡೆದವರಿಗೆ ಕೂಡ ಬಹುಮಾನ ವಿತರಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಕೊತ್ತತ್ತಿಯಲ್ಲಿ ಗ್ರಾಮೀಣ ಕೂಟ ಗಮನ ಸೆಳೆದಿದೆ. ನಾಟಿಕೋಳಿ ಸಾರು ಮುದ್ದೆ ತಿನ್ನುವ ಸ್ಪರ್ಧೆಯನ್ನು ನೂರಾರು ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದ ಭತ್ತವನ್ನ ಕೂಯ್ಲು ಮಾಡಿದ ಬಿಜೆಪಿ ಕಾರ್ಯಕರ್ತರು

ಇದನ್ನೂ ಓದಿ: ಮಂಡ್ಯ: ಅಪ್ರಾಪ್ತ ಬಾಲಕಿಯ ಸಾವಿನ ಸುತ್ತ ಅನುಮಾನದ ಹುತ್ತ; ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಪೋಷಕರ ಆರೋಪ

Published On - 5:00 pm, Sun, 26 December 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ