AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲದಲ್ಲಿ JDS ಮುಖಂಡ ಅಪ್ಪುಗೌಡ ಕೊಲೆಗೆ ಯತ್ನ, ಸಿನಿಮಾ ಸ್ಟೈಲ್​ನಲ್ಲಿ ಆರೋಪಿಗಳ ಬೆನ್ನಟ್ಟಿ ವಶಕ್ಕೆ ಪಡೆದ ಪೊಲೀಸ್

ಬೆಳಗ್ಗೆ ದೇವಸ್ಥಾನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಅಪ್ಪುಗೌಡ ಮೇಲೆ ಡ್ಯಾಗರ್​ನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ಇನ್ನು ದುಷ್ಕರ್ಮಿಗಳು ಕೊಲೆ ಮಾಡಲೆಂದೇ ಪ್ಲಾನ್ ಮಾಡಿಕೊಂಡು ಡ್ರಾಗನ್, ಲಾಂಗ್ ತಂದಿದ್ದರು ಎನ್ನಲಾಗಿದೆ.

ದೇಗುಲದಲ್ಲಿ JDS ಮುಖಂಡ ಅಪ್ಪುಗೌಡ ಕೊಲೆಗೆ ಯತ್ನ, ಸಿನಿಮಾ ಸ್ಟೈಲ್​ನಲ್ಲಿ ಆರೋಪಿಗಳ ಬೆನ್ನಟ್ಟಿ ವಶಕ್ಕೆ ಪಡೆದ ಪೊಲೀಸ್
JDS ಮುಖಂಡ ಅಪ್ಪುಗೌಡ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on:Aug 12, 2023 | 3:11 PM

Share

ಮಂಡ್ಯ, ಆ.12: ಜಿಲ್ಲೆಯ ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ(Anjaneya Temple) JDS ಮುಖಂಡ ಅಪ್ಪುಗೌಡ(Appu Gowda) ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು(Maddur Police Station) ವಶಕ್ಕೆ ಪಡೆದಿದ್ದಾರೆ. ಬಿಸಿನೆಸ್ ಮತ್ತು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ JDS​​ ಮುಖಂಡ ಅಪ್ಪುಗೌಡ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಲ್ಲೆಗೊಳಗಾದ ಆಪ್ಪುಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಬೆಳಗ್ಗೆ ದೇವಸ್ಥಾನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಅಪ್ಪುಗೌಡ ಮೇಲೆ ಡ್ಯಾಗರ್​ನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ಇನ್ನು ದುಷ್ಕರ್ಮಿಗಳು ಕೊಲೆ ಮಾಡಲೆಂದೇ ಪ್ಲಾನ್ ಮಾಡಿಕೊಂಡು ಡ್ರಾಗನ್, ಲಾಂಗ್ ತಂದಿದ್ದರು ಎನ್ನಲಾಗಿದೆ. ಅಪ್ಪುಗೌಡ ಮೇಲೆ ಹಲ್ಲೆ ನಡೆಸಿದಾಗ ಸ್ಥಳದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ ಈ ಪರಿಣಾಮ ಸ್ಥಳದಲ್ಲೇ ಲಾಂಗ್ ಬಿಟ್ಟು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ರು. ಸದ್ಯ ಮದ್ದೂರು ಠಾಣೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಹತ್ಯೆಗೆ ಯತ್ನಿಗೆ ಪರಾರಿಯಾಗಿ ಟಾಟಾ ಸುಮೋದಲ್ಲಿ ಹೋಗುವಾಗ ಸಿನಿಮಾ ಸ್ಟೈಲ್​ನಲ್ಲಿ ಬೆನ್ನಟ್ಟಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಪಾವಗಡ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ಸಾವು, ಓರ್ವ ಗಂಭೀರ ಗಾಯ

ಕೊಲೆಗೆ ಮೂರು ದಿನಗಳ ಹಿಂದೆಯೇ ಸಂಚು

ಅಪ್ಪುಗೌಡ ಹತ್ಯೆಗೆ ಮೂರು ದಿನಗಳಿಂದ ಆರೋಪಿಗಳು ಹೊಂಚು ಹಾಕಿದ್ದರು, ಅಪ್ಪುಗೌಡರ ಚಲನ‌ವಲನ ಗಮನಿಸಿ ಸ್ಕೆಚ್ ಹಾಕಿದ್ದರು. ನಿನ್ನೆಯೇ ಮದ್ದೂರಮ್ಮನ ದೇವಾಲಯದ ಬಳಿ ಕೊಲೆ ಮಾಡಲು ಸಂಚು ರೂಪಿಸಿದ್ದರು. ಆದ್ರೆ ನಿನ್ನೆ ಅಲ್ಲಿ ಜನ ಜಾಸ್ತಿಯಿದ್ದ ಹಿನ್ನಲೆ ಇಂದು ಮದ್ದೂರಮ್ಮನ ದೇವಾಲಯದಲ್ಲಿ ಹತ್ಯೆಗೆ ಯತ್ನಿಸಿದ್ದಾರೆ. ಪ್ರತೀ ಶನಿವಾರ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಬರ್ತಿದ್ದ ಅಪ್ಪುಗೌಡ ಇಂದೂ ಕೂಡ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕುವ ವೇಳೆ ಹತ್ಯೆಗೆ ಯತ್ನ ನಡೆದಿದೆ. ಒಬ್ಬ ಡ್ರ್ಯಾಗನ್‌ ನಿಂದ ಇರಿದ್ರೆ ಮತ್ತೊಬ್ಬ ಲಾಂಗ್ ಬೀಸಲು ಯತ್ನಿಸಿದ್ದ ಅದೃಷ್ಟವಶಾತ್ ಅಪ್ಪುಗೌಡ ಎಸ್ಕೇಪ್ ಆಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಪೊಲೀಸ್ ಪೇದೆಯಿಂದ ತಪ್ಪಿದ ಹತ್ಯೆ

ಇನ್ನು ಕೊಲೆ ಯತ್ನ ನಡೆಯುವಾಗ ಮದ್ದೂರು ಠಾಣೆ ಪೊಲೀಸ್ ಪೇದೆ ಕುಮಾರ್ ಸ್ಥಳದಲ್ಲೇ ಇದ್ದರು. ಕುಮಾರ್​ರ ಚಾಣಾಕ್ಷತನದಿಂದ ಹತ್ಯೆ ತಪ್ಪಿದೆ. ಹಲ್ಲೆ ವೇಳೆ ಆರೋಪಿಗಳನ್ನ ಅಟ್ಟಾಡಿಸಿ ಪೇದೆ ಕುಮಾರ್ ಬೆನ್ನಟ್ಟಿದರು. ಹತ್ಯೆ ವಿಫಲವಾದಾಗ ಅಲ್ಲಿಂದ ಓಡಿ ಹೋಗಿ ಟಾಟಾ ಸುಮೋದಲ್ಲಿ ತಪ್ಪಿಸಿಕೊಂಡು ಹೋಗಲು ಆರೋಪಿಗಳು ಯತ್ನಿಸಿದರು. ಆರೋಪಿಗಳಿದ್ದ ಟಾಟಾ ಸುಮೋವನ್ನ ಪೇದೆ ಕುಮಾರ್ ಬೈಕ್ ನಲ್ಲಿ ಹಿಂಬಾಲಿಸಿದ್ದಾರೆ. ಸುಮೋ ಹಿಂಬಾಲಿಸುತ್ತಲೇ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಪೇದೆ ಕುಮಾರ್ ನೀಡಿದ ಮಾಹಿತಿ ಮೇರೆಗೆ ಅಲರ್ಟ್ ಆದ ಪೊಲೀಸರು ಹಲಗೂರು ಬಳಿ ಟಾಟಾ ಸುಮೋ ಅಡ್ಡ ಹಾಕಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಪ್ಪುಗೌಡ ಜೊತೆಯಲ್ಲಿ ಬ್ಯುಸಿನೆಸ್ ಮಾಡುತ್ತಿದ್ದ ವ್ಯಕ್ತಿ ಹುಡುಗರನ್ನ ಕರೆಯಿಸಿ ಅಪ್ಪುಗೌಡ ಹತ್ಯೆಗೆ ಸುಫಾರಿ ನೀಡಿದ್ದರಂತೆ. ಹತ್ಯೆ ಮಾಡಲು ಸುಪಾರಿ ಪಡೆದು ಬೆಂಗಳೂರಿನಿಂದ ಬಂದಿದ್ದ ತಂಡ ಸದ್ಯ ಪೊಲೀಸರ ವಶದಲ್ಲಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:11 pm, Sat, 12 August 23

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ