AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಪರೀಕ್ಷೆಗೆ ಆಬ್ಸೆಂಟ್​! ಯಾಕೆ ಗೊತ್ತಾ?

ಮಂಡ್ಯದ ಪಿಇಎಸ್ ಕಾಲೇಜಿನ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಮುಸ್ಕಾನ್​ಗೆ ಇಂದಿನಿಂದ(ಮಾರ್ಚ್ 24) ಮೂರನೇ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಇಂದು ಬೆಳಿಗ್ಗೆ 9.30ಕ್ಕೆ ಕಾರ್ಪೋರೇಟ್ ಅಕೌಂಟಿಂಗ್ ಪರೀಕ್ಷೆ ಇತ್ತು. ಮುಸ್ಕಾನ್ ಮಾತ್ರ ಪರೀಕ್ಷೆಗೆ ಬಾರದೆ ಗೈರಾಗಿದ್ದಾಳೆ.

ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಪರೀಕ್ಷೆಗೆ ಆಬ್ಸೆಂಟ್​! ಯಾಕೆ ಗೊತ್ತಾ?
ವಿದ್ಯಾರ್ಥಿನಿ ಮುಸ್ಕಾನ್
TV9 Web
| Edited By: |

Updated on: Mar 24, 2022 | 8:33 PM

Share

ಮಂಡ್ಯ:  ಕಾಲೇಜು ಕ್ಯಾಂಪಸ್​ನಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ಮುಸ್ಕಾನ್(Muskan) ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಳು. ಬಳಿಕ ಕೋರ್ಟ್ ಆದೇಶ ಪಾಲಿಸುವುದಾಗಿ ಹೇಳಿಕೊಂಡಿದ್ದ ಮುಸ್ಕಾನ್ ಪರೀಕ್ಷೆಗೆ ಗೈರಾಗಿದ್ದಾಳೆ. ಹಿಜಾಬ್(Hijab) ಧರಿಸೋದಕ್ಕೆ ಅವಕಾಶ ನೀಡದಿದ್ದಕ್ಕೆ ಪರೀಕ್ಷೆಗೆ (Exam) ಬಾರದೆ, ಕಾಲೇಜನ್ನೇ ಬದಲಿಸಲು ಚಿಂತನೆ ನಡೆಸಿದ್ದಾರೆ. ಹಿಜಾಬ್ ಹಾಗೂ ಕೇಸರಿ ವಿವಾದ ತಾರಕಕ್ಕೇರಿದ ಸಂದರ್ಭದಲ್ಲಿ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್, ಜೈ ಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಳು. ಅಂದಿನಿಂದ ಮುಸ್ಕಾನ್ ನಡೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಕೋರ್ಟ್ ತೀರ್ಪು ಬರುವವರೆಗೂ ತಾನು ತರಗತಿಗೆ ಹಾಜರಾಗಲ್ಲ ಎಂದು ಕಾಲೇಜಿನಿಂದಲೇ ದೂರ ಉಳಿದಿದ್ದಳು. ಈಗ ಕೋರ್ಟ್ ತೀರ್ಪು ಬಂದಿದೆ. ಆದರೂ ಕೂಡ ಸೆಮಿಸ್ಟರ್ ಪರೀಕ್ಷೆಗೆ ಗೈರಾಗಿದ್ದಾರೆ.

ಮಂಡ್ಯದ ಪಿಇಎಸ್ ಕಾಲೇಜಿನ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಮುಸ್ಕಾನ್​ಗೆ ಇಂದಿನಿಂದ(ಮಾರ್ಚ್ 24) ಮೂರನೇ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಇಂದು ಬೆಳಿಗ್ಗೆ 9.30ಕ್ಕೆ ಕಾರ್ಪೋರೇಟ್ ಅಕೌಂಟಿಂಗ್ ಪರೀಕ್ಷೆ ಇತ್ತು. ಮುಸ್ಕಾನ್ ಮಾತ್ರ ಪರೀಕ್ಷೆಗೆ ಬಾರದೆ ಗೈರಾಗಿದ್ದಾಳೆ.

ಇನ್ನು ಈ ವಿಚಾರವಾಗಿ ಆಕೆಯ ತಂದೆ ಮಹಮದ್ ಹುಸೇನ್ ಟಿವಿ9ಗೆ ಹೇಳಿಕೆ ನೀಡಿದ್ದು,​ ಮಗಳಿಂದ ಪರೀಕ್ಷೆ ಬರೆಸಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿಯನ್ನ ಕೇಳಿಕೊಂಡ್ರೂ ಅವಕಾಶ ನೀಡಲಿಲ್ಲ. ಹಾಗಾಗಿ ನಮ್ಮ ಮಗಳು ಪರೀಕ್ಷೆ ಬರೆಯುತ್ತಿಲ್ಲ. ಮುಂದಿನ ವರ್ಷ ಬೇರೆ ಕಾಲೇಜಿಗೆ ಸೇರಿಸುತ್ತೇವೆ ಎಂದು ತಿಳಿಸಿದ್ದಾರೆ.

ಶಿಕ್ಷಣಕ್ಕಿಂತ ಹಿಜಾಬ್ ಹೆಚ್ಚು ಅಂತ ಕುಟುಂಬಸ್ಥರು ಮಗಳನ್ನು ಒಂದು ವರ್ಷ ಶಿಕ್ಷಣದಿಂದಲೇ ದೂರ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಸ್ಕಾನ್ ತಂದೆ, ಮಗಳಿಗೆ ಹಿಜಾಬ್ ಧರಿಸಿಕೊಂಡು ಪರೀಕ್ಷೆ ಬರೆಸಲು ಅವಕಾಶ ಕೇಳಿದ ವಿಚಾರವಾಗಿ ಕಾಲೇಜು ಪ್ರಾಂಶುಪಾಲ ಮಹದೇವು ಅವರನ್ನು ಪ್ರಶ್ನಿಸಿದ್ದು, ಇದಕ್ಕೆ ಉತ್ತರ ನೀಡಿದ್ದಾರೆ. ನಾವು ಹೈಕೋರ್ಟ್ ಹಾಗೂ ಸರ್ಕಾರದ ಆದೇಶ ಪಾಲಿಸುತ್ತಿದ್ದೇವೆ. ಮುಸ್ಕಾನ್ ಪರೀಕ್ಷಾ ಪ್ರವೇಶ ಪತ್ರ ಪಡೆಯೋದಕ್ಕೂ ಕಾಲೇಜಿಗೆ ಬಂದಿಲ್ಲ. ಅಲ್ಲದೆ ಅವರ ತಂದೆಯೂ ನಮ್ಮನ್ನ ಸಂಪರ್ಕ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಒಟ್ಟಾರೆ ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದ್ರೂ ಯಾಕೋ ಏನೋ ಕೆಲವು ವಿದ್ಯಾರ್ಥಿನಿಯರು ತೀರ್ಪು ಪ್ರಶ್ನೆ ಮಾಡುವ ಜತೆಗೆ ಶಿಕ್ಷಣದಿಂದಲೇ ದೂರವಾಗುತ್ತಿರೋದು ವಿಪರ್ಯಾಸವೇ ಸರಿ.

ವರದಿ: ದಿಲೀಪ್ ಚೌಡಹಳ್ಳಿ

ಇದನ್ನೂ ಓದಿ:

ಹಿಜಾಬ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’ ಎಂದ ಸಿಜೆಐ

ಶಲ್ಯವನ್ನೇ ದುಪ್ಪಟ್ಟಾ ಮಾಡಿದ ಸಿದ್ದರಾಮಯ್ಯ! ಹಿಜಾಬ್​ಗೆ ಅವಕಾಶ ಕೊಡಿ ಎಂದು ನಾಟಕೀಯವಾಗಿ ಕೇಳಿದ್ದಕ್ಕೆ ಶಿಕ್ಷಣ ಸಚಿವರು ಕೊಟ್ಟ ಉತ್ತರವೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು