AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ
ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Jan 15, 2024 | 11:48 AM

Share

ಮಂಡ್ಯ, ಜನವರಿ 15: ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್ (Love Jihad)​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ (KR Pete) ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕ ಸೈಯದ್​ ತಬ್ರೀಜ್​ ಮತ್ತು ಬಾಲಕಿ ಜನವರಿ 12 ರಂದು ಓಡಿ ಹೋಗಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಕೆ.ಆರ್​ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಸಿದ್ದರು. ದೂರಿನ ಬಳಿಕ ಪೊಲೀಸರು ಇಬ್ಬರಿಗಾಗಿ ಕಾರ್ಯಾಚರಣೆ ನಡೆಸಿದ್ದು, ಜನವರಿ 13 ರಂದು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ. ಬಾಲಕಿಯನ್ನು ಕರೆದೊಯ್ದ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಲವ್​ ಜಿಹಾದ್​ ವಾಸನೆ

ಇನ್ನು ವಿಚಾರ ತಿಳಿಯುತ್ತಿದ್ದಂತೆ ಪೊಲೀಸ್​ ಠಾಣೆ ಎದರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಕೆಆರ್​ ಪೇಟೆ ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅನ್ಯ ಕೋಮಿನವರು ಲವ್ ಜಿಹಾದ್​ಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಕರಣವನ್ನು ಎನ್​ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!