AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್

ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.

ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್
ಕಲ್ಲಡ್ಕ ಪ್ರಭಾಕರ್‌ ಭಟ್‌
TV9 Web
| Edited By: |

Updated on: Dec 24, 2023 | 2:21 PM

Share

ಮಂಡ್ಯ, ಡಿಸೆಂಬರ್ 24): ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಹೇಳಿದ್ದಾರೆ.

ಇಂದು (ಡಿಸೆಂಬರ್ 24) ಮಂಡ್ಯ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್‌ ಭಟ್‌, ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಮೋದಿ ಸರ್ಕಾರ ಬಂದ ಮೇಲೆ ತಲಾಖ್ ಬಂತು. ಅವರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್‌ ಸಂಘರ್ಷ: ಹಿಜಾಬ್‌ ಧರಿಸಿದ್ರೆ ಕೇಸರಿ ಶಾಲು ಎಚ್ಚರಿಕೆ

ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ, ಅದಕ್ಕಾಗಿ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಾಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು. ದೇವರ ಧಯೆ ಅವನಿಗೆ ಶಿಕ್ಷೆ ಆಯಿತು. ಅವನಿಗೂ ಬೆಂಬಲ ವ್ಯಕ್ತಪಡಿಸಿದ್ರು. ಆದರೂ ನಾವು ಸುಮ್ಮನೇ ಇರಬೇಕಾ ಎಂದು ಪ್ರಶ್ನಿಸಿದರು.

ಕ್ಯಾಪ್ಟನ್ .ಪ್ರಾಂಜಲ್ ಬಲಿದಾನಕ್ಕೆ ಕಾರಣರಾದವರು ಕಾಂಗ್ರೆಸ್. ಆ ವಿಷಬೀಜ ಬಿತ್ತಿ, ಬೆಳದವರು ಕಾಂಗ್ರೆಸ್. ದೇಶದ ಆದಾಯದ ಮೊದಲ ಭಾಗ ಮುಸಲ್ಮಾನರಿಗೆ ಎಂದು ಮನಮೋಹನ್ ಸಿಂಗ್ ಹೇಳಿದ್ರು. 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾರಪ್ಪನ ದುಡ್ಡು ಅವರಿಗೆ ನೀವು ಮೀಸಲಿಡಲು. ಸರ್ಕಾರಕ್ಕೆ ತೆರಿಗೆ ಕಟ್ಟುವುದು ಹಿಂದೂಗಳು ಎಂದು ಗುಡುಗಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ