Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಮದ್ವೆಗೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಇಂಜಿನಿಯರ್ ದುರಂತ ಸಾವು!

ಭೀಕರ ರಸ್ತೆ ಅಪಘಾತದಲ್ಲಿ ಇಂಜಿಯರ್​ ಸಾವನ್ನಪ್ಪಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿ ಸ್ವಗ್ರಾಮಕ್ಕೆ ಹೋತ್ತಿದ್ದಾಗ ದುರಂತ ಸಾವು ಕಂಡಿದ್ದಾಳೆ. ಇನ್ನೊಂದು ನೋವಿನ ಸಂಗತಿ ಎಂದರೆ ಮುಂದಿನ ತಿಂಗಳು ಅಂದರೆ ಫೆಬ್ರುವರಿ 16ಕ್ಕೆ ಶರಣ್ಯ ಮದುವೆ ನಿಶ್ಚಯ ಆಗಿತ್ತು. ಆದ್ರೆ, ಸಪ್ತಪದಿ ತಿಳಿಯುವ ಮುನ್ನವೇ ಮಸಣ ಸೇರಿದ್ದಾಳೆ.

ಇನ್ನೇನು ಮದ್ವೆಗೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಇಂಜಿನಿಯರ್ ದುರಂತ ಸಾವು!
Sharanya Gowda
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on:Jan 19, 2025 | 3:41 PM

ಮಂಡ್ಯ/ರಾಮನಗರ, (ಜನವರಿ 19): ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನರೇಗಾ ಮಹಿಳಾ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಶರಣ್ಯ ಗೌಡ (25) ಮೃತ ಮಹಿಳಾ ಇಂಜಿನಿಯರ್. ಮೂಲತಃ ಮಂಡ್ಯದ ಮಳವಳ್ಳಿ ತಾಲೂಕಿನ ಬಳೆಹೊನ್ನಿಗನ ಗ್ರಾಮದ ಶರಣ್ಯ ಅವರು ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ಕೆಲಸ ಮುಗಿಸಿ ಸ್ವಗ್ರಾಮ ಬಳೆಹೊನ್ನಿಗನದಿಂದ ಹಲಗೂರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ನೋವಿನ ವಿಚಾರ ಅಂದ್ರೆ ಶರಣ್ಯ ಗೌಡಗೆ ಮುಂದಿನ ತಿಂಗಳು ಫೆಬ್ರವರಿ 16ರಂದು ಮದುವೆ ನಿಶ್ಚಿಯವಾಗಿತ್ತು. ಆದ್ರೆ, ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲೇ ದುರಂತ ಅಂತ್ಯಕಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.  ನಿನ್ನೆ ಸ್ವಗ್ರಾಮದಿಂದ ಹಲಗೂರಿಗೆ ಹೋಗ್ತಿದ್ದಾಗ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ತೀವ್ರ ರಸ್ತಸ್ರಾವದಿಂದ ಶರಣ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರಣ್ಯ ಗೌಡಗೆ ಫೆಬ್ರವರಿ 16ರಂದು ಮದುವೆ ಫಿಕ್ಸ್ ಆಗಿದ್ದು, ಮನೆಯಲ್ಲಿ ಮದುವೆಯ ಸಿದ್ಧತೆಗಳು ನಡೆದಿದ್ದವು. ಆದ್ರೆ, ಸಪ್ತಪದಿ ತುಳಿಯುವ ಮುನ್ನವೇ ವಧು ಶರಣ್ಯಗೌಡ ಸಾವು ದುರಂತವೇ ಸರಿ.

Published On - 3:41 pm, Sun, 19 January 25

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
Video: ಜಗನ್​ಮೋಹನ್​​ ರೆಡ್ಡಿಯವರ ಭವ್ಯ ಬಂಗಲೆಯ ಒಳ-ಹೊರ ನೋಟ
Video: ಜಗನ್​ಮೋಹನ್​​ ರೆಡ್ಡಿಯವರ ಭವ್ಯ ಬಂಗಲೆಯ ಒಳ-ಹೊರ ನೋಟ