AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway:ಮಾ.12ರಂದು ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಡ್ರೋನ್​​ ಹಾರಾಟ ನಿಷೇಧ

ಪಿಎಂ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದು ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ ಮಾಡಲಿದ್ದಾರೆ. ಹಾಗೂ ಇದೇ ವೇಳೆ ರೋಡ್ ಶೋ ನಡೆಸಲಿದ್ದು ಮೋದಿ ಸಂಚರಿಸು ಮಾರ್ಗದಲ್ಲಿ ಡ್ರೋನ್​​ ಹಾರಾಟ ನಿಷೇಧ ಹೇರಲಾಗಿದೆ.

Bengaluru-Mysuru Highway:ಮಾ.12ರಂದು ಮಂಡ್ಯದಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಡ್ರೋನ್​​ ಹಾರಾಟ ನಿಷೇಧ
ನರೇಂದ್ರ ಮೋದಿ
ಆಯೇಷಾ ಬಾನು
|

Updated on:Mar 09, 2023 | 8:25 AM

Share

ಮಂಡ್ಯ: ಮಂಡ್ಯವನ್ನ ಕಬ್ಜ ಮಾಡಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಖಾಡಕ್ಕೆ ಇಳಿಯುತ್ತಿದ್ದಾರೆ. ಮಾರ್ಚ್ 12ರಂದು ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ(Bengaluru-Mysuru Highway) ಮಾಡಲು ಸಕ್ಕರೆ ನಾಡಿಗೆ ಆಗಮಿಸುತ್ತಿರುವ ಮೋದಿ ಹೈವೇ ಲೋಕಾರ್ಪಣೆ ವೇಳೆ ರೋಡ್ ಶೋ(Modi Road Show) ನಡೆಸಲಿದ್ದಾರೆ. ಈ ಹಿನ್ನೆಲೆ ಮೋದಿ ಸಂಚರಿಸುವ ಮಾರ್ಗದಲ್ಲಿ ಡ್ರೋನ್​​ ಹಾರಾಟ ನಿಷೇಧ ಹೇರಿ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

15 ಕಿಲೋ ಮೀಟರ್ ವರೆಗೂ ಡ್ರೋನ್ ಹಾರಾಟಕ್ಕೆ ನಿರ್ಬಂಧ

ಮಾರ್ಚ್ 12ಕ್ಕೆ ಮಂಡ್ಯದಲ್ಲಿ ಮೋದಿ ಮೆಗಾ ರೋಡ್ ಶೋ ಹಿನ್ನಲೆ ಡ್ರೋನ್ ಹಾಗೂ ಹೆಲಿಕ್ಯಾಮ್ ಹಾರಿಸಲು ಜಿಲ್ಲಾಡಳಿತ ನಿಷೇಧ ಹೇರಿದೆ. ಭದ್ರತಾ ಹಿತಾದೃಷ್ಠಿಯಿಂದ 15 ಕಿಲೋ ಮೀಟರ್ ವರೆಗೂ ಡ್ರೋನ್ ಹಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಎಸ್.ಪಿ.ಜಿ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಏರಿಯಲ್ ಸರ್ವೆ ನಡೆಸಿದೆ. ವಿಶೇಷ ಭದ್ರತಾ ತಂಡದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಮಾನವ ರಹಿತ ಎಲೆಕ್ಟ್ರಿಕಲ್ ವಸ್ತು ಹಾಗೂ ಹೆಲಿಕಾಪ್ಟರ್ ಹಾರಟಕ್ಕೂ ನಿಷೇಧ ಹೇರಲಾಗಿದೆ. ಡ್ರೋನ್ ಅಥವಾ ಹೆಲಿಕ್ಯಾಮ್ ಹಾರಿಸಿದರೆ ಕಾನೂನು ರೀತಿಯ ಕ್ರಮ ತೆಗೆದು ಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Bengaluru-Mysuru Highway: ಮಾರ್ಚ್ 12 ರಂದು ಧಶಪಥ ಹೆದ್ದಾರಿ ಲೋಕಾರ್ಪಣೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಇವೆ. ದೇಶಾದ್ಯಂತ ಗೆದ್ದು ಬೀಗಿದ ಬಿಜೆಪಿಗೆ ಹಳೆ ಮೈಸೂರು ಭಾಗ ಕಬ್ಬಿಣದ ಕಡಲೆ ಆಗಿದೆ. ಹೀಗಾಗಿ ಹಳೆ ಮೈಸೂರು ಭಾಗವನ್ನ ಕಬ್ಜ ಮಾಡಲೇ ಬೇಕಂದು ಪಣ ತೊಟ್ಟಿರೊ ಬಿಜೆಪಿ ಹೈ ಕಮಾಂಡ್ ದಕ್ಷಿಣ ದಂಡಯಾತ್ರೆಗೆ ಚಾಲನೆ ಕೊಟ್ಟಿದೆ. ಚುನಾವಣಾ ಚಾಣಕ್ಯ ಮಂಡ್ಯದ ಗೆಜ್ಜಲಗೆರೆಗೆ ಭೇಟಿ ನೀಡಿ ಮೆಗಾ ಡೈರಿ ಉದ್ಘಾಟನೆ ಮಾಡಿದ್ದರು. ಸದ್ಯ ಈಗ ಮಂಡ್ಯ ಅಖಾಡಕ್ಕೆ ಸ್ವತಃ ಪ್ರಧಾನಿ ಮೋದಿ ಅವರೇ ಎಂಟ್ರಿ ಕೊಡುತ್ತಿದ್ದಾರೆ. ಮಂಡ್ಯದಲ್ಲಿ ರೋಡ್ ಶೋ ನಡೆಸುವ ಮೂಲಕ ನಘರವಾಗಿ ಗೆಜ್ಜಲಗೆರೆ ಕಾಲೋನಿಗೆ ಎಂಟ್ರಿ ಕೊಡಲಿದ್ದಾರೆ. ಮಂಡ್ಯದಿಂದ ಬೈ ರೋಡ್ ನಲ್ಲಿ ಬರುವ ನಮೋ ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟಿಸಿ ಬಳಿಕ ಗೆಜ್ಜಲಗೆರೆ ಕಾಲೋನಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಮಾರ್ಚ್ 12ರಂದು ಮೈಸೂರು ಮೂಲಕ ಚಾಪರ್ ನಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಹೆಲಿಪ್ಯಾಡ್ ಗೆ ಮೋದಿಯ ಚಾಪರ್ ಬಂದು ಲ್ಯಾಂಡ್ ಆಗಲಿದೆ. ಅಲ್ಲಿಂದ ನೇರವಾಗಿ ವಿಶೇಷ ವಾಹನದ ಮೂಲಕ ಫ್ಯಾಕ್ಟರಿ ಸರ್ಕಲ್ ವರೆಗೂ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಗೆಜ್ಜಲಗೆರೆ ಕಾಲೋನಿಯಲ್ಲಿ ಒಂದೂವರೆ ಲಕ್ಷ ಜನ ಭಾಗಿಯಾಗುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮತ ಬೇಟೆಯಾಡಲಿದ್ದಾರೆ. ಮೋದಿ ಎಂಟ್ರಿಯಿಂದ ಸ್ಥಳೀಯ ನಾಯಕರಲ್ಲಿ ಉತ್ಸಾಹ ಇಮ್ಮಡಿಯಾಗಲಿದೆ. ಹಳೆ ಮೈಸೂರು ಭಾಗ ಹಾಗೂ ಮಂಡ್ಯದಲ್ಲಿ ಬಿಜೆಪಿ ಗೆಲ್ಲಲು ಅನುಕೂಲವಾಗಲಿದೆ. ಮೋದಿ ಎಂಟ್ರಿಯಿಂದ ದಳಪತಿಗಳ ಭದ್ರಕೋಟೆ ಛಿದ್ರವಾಗೋದು ಪಕ್ಕಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ.ಆರ್ ಪೇಟೆ ಬಳಿಕ ಇನ್ನುಳಿದ ಕ್ಷೇತ್ರಗಳಲ್ಲಿ ಬಿಜೆಪಿ ನಿಶ್ಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ನಮೋ ಆಗಮನ ಮಂಡ್ಯದಲ್ಲಿ ಬಿಜೆಪಿಗೆ ರಾಜಕೀಯವಾಗಿ ಶಕ್ತಿ ಹೆಚ್ಚಿಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:25 am, Thu, 9 March 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್