Sign In

By signing in or creating an account, you agree with Associated Broadcasting Company's Terms & Conditions and Privacy Policy.

NHAI ಅಧಿಕಾರಿಗಳ ನಿರ್ಲಕ್ಷ್ಯ, ಬೆಂಗಳೂರು-ಮೈಸೂರು ಹೆದ್ದಾರಿಗೆ ಅವಳಡಿಸಿದ್ದ ಎಎನ್​ಪಿಆರ್ ಕ್ಯಾಮರಾಗಳು ಮೂರೇ ದಿನಕ್ಕೆ ಬಂದ್

ಸಾವಿನ ಹೆದ್ದಾರಿ ಎಂತಲೇ ಅಪಖ್ಯಾತಿ ಪಡೆದಿರುವ ನೂತನ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಅಪಘಾತಗಳನ್ನ ಕಡಿಮೆ ಮಾಡಲು ಈಗಾಗಲೇ NHAIಅಧಿಕಾರಿಗಳು ಹಲವು ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಈ ಹಿನ್ನಲೆ ವೇಗದ ಮಿತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೂರು ದಿನಗಳ ಕೆಳಗೆ ಅಳವಡಿಸಿದ್ದ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಎಎನ್​ಆರ್​ಪಿ(ANRP) ಕ್ಯಾಮರಾಗಳು ಮೂರೇ ದಿನಕ್ಕೆ ಬಂದ್ ಆಗಿವೆ.

NHAI ಅಧಿಕಾರಿಗಳ ನಿರ್ಲಕ್ಷ್ಯ, ಬೆಂಗಳೂರು-ಮೈಸೂರು ಹೆದ್ದಾರಿಗೆ ಅವಳಡಿಸಿದ್ದ ಎಎನ್​ಪಿಆರ್ ಕ್ಯಾಮರಾಗಳು ಮೂರೇ ದಿನಕ್ಕೆ ಬಂದ್
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ ವೇ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 03, 2023 | 3:05 PM

ಮಂಡ್ಯ, ಆ.3: ಸದಾ ಒಂದಿಲ್ಲೊಂದು ವಿವಾದಗಳಿಂದ ಸಾವಿನ ಹೆದ್ದಾರಿಯಂತಲೇ ಅಪಖ್ಯಾತಿ ಪಡೆದಿರುವ ನೂತನ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳ(Accidents) ಸಂಖ್ಯೆ ಹೆಚ್ಚಳವಾಗಿ ಸಾವು ನೋವುಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಅಪಘಾತಗಳನ್ನ ತಡೆಗಟ್ಟಲು ಎನ್​ಹೆಚ್​ಎಐ ಹಾಗೂ ಪೊಲೀಸ್ ಇಲಾಖೆ ಹಲವು ಸುರಕ್ಷತಾ ಕ್ರಮಗಳನ್ನ ವಹಿಸಿದೆ. ಈ ನಿಟ್ಟಿನಲ್ಲಿ ಒಂದೆಡೆ ಆಗಸ್ಟ್ 1ರಿಂದ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ಯಾಕ್ಟರ್​ಗಳ ಸಂಚಾರಕ್ಕೆ ಬ್ರೇಕ್ ಹಾಕಿ, ಸರ್ವಿಸ್ ರಸ್ತೆಯಲ್ಲಿ ಸಂಚರಿಸುವಂತೆ ಆದೇಶ ಮಾಡಿದೆ. ಮತ್ತೊಂದೆಡೆ ವೇಗದ ಮಿತಿಗೆ ಕಡಿವಾಣ ಹಾಕಲು ಹೆದ್ದಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ANRP(Automatic Number Plate Recognition Camera) ಕ್ಯಾಮರಾವನ್ನ ಎರಡು ಕಡೆಗಳಲ್ಲಿ ಅವಳಡಿಕೆ ಮಾಡಲಾಗಿದೆ. ಆದರೆ, ಇದು ಅಳವಡಿಸಿದ ಮೂರೇ ದಿನಕ್ಕೆ ಬಂದ್​ ಆಗಿದೆ.

ಈ ಎಎನ್​ಆರ್​ಪಿ ಕ್ಯಾಮರಾಗಳು ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತವೆ. ಅಲ್ಲದೆ ವಾಹನಗಳ ನಂಬರ್ ಪ್ಲೇಟ್​ಗಳನ್ನ ರೀಡ್ ಮಾಡಿ, 100 ಕಿಲೋ ಮೀಟರ್​ಗಿಂತಲೂ ವೇಗವಾಗಿ ಸಂಚಾರ ಮಾಡಿದ್ರೆ, ಅಂತಹ ವಾಹನಗಳ ಮಾಹಿತಿಯನ್ನು ಎನ್​ಹೆಚ್​ಎಐ ಕಂಟ್ರೋಲ್ ರೂಮ್ ಹಾಗೂ ಪೊಲೀಸ್ ಇಲಾಖೆಗೂ ಕೂಡ ಮಾಹಿತಿ ಕೊಡುತ್ತದೆ. ಅದರ ಆಧಾರದ ಮೇಲೆ ಪೊಲೀಸರು ವಾಹನ ಸವಾರಿಗೆ ದಂಡ ವಿಧಿಸಬಹುದಾಗಿದೆ. ಆದರೆ, ಕ್ಯಾಮರಾಗಳು ಅಳವಡಿಕೆ ಮಾಡಿ ಮೂರೇ ದಿನದಲ್ಲಿ ಬಂದ್ ಆಗಿದ್ದು, ಎನ್​ಹೆಚ್​ಎಐ ನಿರ್ಲಕ್ಷ್ಯ ತೋರಿದೆ.

ಇದನ್ನೂ ಓದಿ:CM Reviews Expressway: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ವೀಕ್ಷಣೆಗೆ ದುಂದುವೆಚ್ಚ ಯಾಕೆ ಮುಖ್ಯಮಂತ್ರಿಯವರೇ?

ಅಂದಹಾಗೆ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್ ಹಾಗೂ ರಾಮನಗರ ತಾಲೂಕಿನ ಬಿಡದಿ ಬಳಿ ಈ ಎಎನ್​ ಪಿಆರ್ ಕ್ಯಾಮರಾಗಳನ್ನು ಅವಳಡಿಕೆ ಮಾಡಲಾಗಿದೆ. ಇನ್ನು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಜುಲೈ 29ರಂದು ಉಮ್ಮಡಹಳ್ಳಿ ಗೇಟ್ ಬಳಿ ಸಿಎಂ ದಶಪಥ ರಸ್ತೆ ವೀಕ್ಷಣೆ ಮಾಡಿ ಅಧಿಕಾರಿಗಳ ಜೊತೆ ಚರ್ಚೆ ಕೂಡ ನಡೆಸಿದ್ದರು. ಸಿಎಂ ಅವರು ಬರುತ್ತಾರೆ ಎಂದೇ ಜುಲೈ 29 ರಂದು ಕ್ಯಾಮರಾಗಳನ್ನ ಅಳವಡಿಕೆ ಮಾಡಿ ಅನೇಕ ಕ್ರಮಗಳನ್ನ ತೆಗೆದುಕೊಂಡಿದ್ದೇವೆ ಎಂದು ಎನ್​ಹೆಚ್​ಎಐ ಅಧಿಕಾರಿಗಳು ಬಡಾಯಿ ಕೊಚ್ಚಿಕೊಂಡಿದ್ದರು. ಆದರೆ, ಬಂದು ಹೋದ ಮೂರೇ ದಿನಕ್ಕೆ ಕ್ಯಾಮರಾಗಳು ಬಂದ್ ಆಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ NHAI ಅಧಿಕಾರಿಗಳು

ಇನ್ನು ಇದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಲು ಎನ್​ಹೆಚ್​ಎಐ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಒಟ್ಟಾರೆ ಅಪಘಾತಗಳನ್ನ ತಡೆಗಟ್ಟುವ ಸಲುವಾಗ ಅಳವಡಿಕೆ ಮಾಡಲಾಗಿದ್ದ ಕ್ಯಾಮರಾಗಳು ಮೂರೇ ದಿನಕ್ಕೆ ಬಂದ್ ಆಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತೆ ಆಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Thu, 3 August 23

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು