AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮೇಕೆದಾಟು ಯೋಜನೆ ಆದರೇ ಇಂತಹ ಸಂದರ್ಭದಲ್ಲಿ ನೀರು ಬಿಡಬಹುದು. ರಾಜ್ಯ ಸರ್ಕಾರ ಆದಷ್ಟು ಬೇಗ ಮೇಕೆದಾಟು ಯೋಜನೆ ಕೈಗೆ ಎತ್ತಿಕೊಳ್ಳಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದರು.

ಕಾವೇರಿ ವಿವಾದ: ನ್ಯಾಯಾಲಯದ ಆದೇಶ ಪಾಲನೆ ಮಾಡಿದರೆ ಜನರ ಬದುಕು ನಶಿಸಿ ಹೋಗುತ್ತದೆ; ನಿರ್ಮಲಾನಂದನಾಥ ಶ್ರೀ
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ
TV9 Web
| Updated By: ವಿವೇಕ ಬಿರಾದಾರ|

Updated on:Sep 22, 2023 | 1:34 PM

Share

ಮಂಡ್ಯ ಸೆ.22: ತಮಿಳುನಾಡಿಗೆ ಮತ್ತೆ ಕಾವೇರಿ ನೀರು (Cauvery) ಹರಿಸುವಂತೆ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದ ಬೆನ್ನಲ್ಲೇ ಮಂಡ್ಯ (Mandya) ರೈತರ ಸರಣಿ ಪ್ರತಿಭಟನೆಗಳು ಮುಂದುವರೆದಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಧರಣಿ ನಡೆಸುತ್ತಿದ್ದಾರೆ. ಈ ಧರಣಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), ಸಂಸದೆ ಸುಮಲತಾ ಅಂಬರೀಶ್​​ (Sumalata Ambareesh) ಪುತ್ರ, ನಟ ಅಭಿಷೇಕ್​ ಅಂಬರೀಶ್, ಕನ್ನಡ ಸಾಹಿತ್ಯ ಪರಿಷತ್​​ನ ಅಧ್ಯಕ್ಷ ಡಾ. ಮಹೇಶ್ ಜೋಶಿ ಸಾಥ್​​ ನೀಡಿದ್ದಾರೆ.

ನಮ್ಮ ಮುಂದೆ ಬಳಹ ವರ್ಷದಿಂದ ಕಾವೇರಿ ನೀರಿನ ಹಂಚಿಕೆ ಸಮಸ್ಯೆ ಇದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. 1990ರಲ್ಲಿ ಬಂದ ಕಾವೇರಿ ಟ್ರಿಬ್ಯುನಲ್​ನಲ್ಲಿ ನೀರಿನ ಹಂಚಿಕೆ ಆಗಿದೆ. ತಮಿಳುನಾಡಿಗೆ ನೀರು ಬಿಟ್ಟರೇ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ. ಮನುಷ್ಯನ ಅಸ್ವಿತ್ವ ಇಲ್ಲದಂತೆ ಆಗಲಿದೆ. ಕೋರ್ಟ್​​ನ ಆದೇಶ ಪಾಲನೆ‌ ಮಾಡಬೇಕು. ನ್ಯಾಯಧೀಶರು ಕೂಡ ನಮ್ಮ ನೋವನ್ನು ನೋಡಿ ಆದೇಶ ನೀಡಬೇಕು. ನ್ಯಾಯಾಲಯದ ಆದೇಶ  ಪಾಲನೆ ಮಾಡಿದರೇ ಜನರ ಬದುಕು ನಶಿಸಿ ಹೋಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ಆದಷ್ಟು ಬೇಗ ಮೇಕೆದಾಟು ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲಿ

ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಏಳು ಟಿಎಂಸಿ ನೀರು ಬಿಟ್ಟರೇ ಸಾಕಷ್ಟು ಸಮಸ್ಯೆ ಆಗಲಿದೆ. ರಾಜ್ಯ ಸರ್ಕಾರ ಕೋರ್ಟ್​​ನಲ್ಲಿ ಸರಿಯಾಗಿ ವಾದ ಮಂಡನೆ ಮಾಡಬೇಕು. ಬೆಂಗಳೂರಿಗೆ ಪ್ರತಿವರ್ಷ 20 ರಿಂದ 30 ಟಿಎಂಸಿ ನೀರುಬೇಕು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಂತ್ರಿಗಳ ಜೊತೆ ಮಾತನಾಡುತ್ತೇವೆ. ಮೇಕೆದಾಟು ಯೋಜನೆ ಆದರೇ ಇಂತಹ ಸಂದರ್ಭದಲ್ಲಿ ನೀರು ಬಿಡಬಹುದು. ರಾಜ್ಯ ಸರ್ಕಾರ ಆದಷ್ಟು ಬೇಗ ಮೇಕೆದಾಟು ಯೋಜನೆ ಕೈಗೆ ಎತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:  ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಆದೇಶ; ಮಂಡ್ಯದಲ್ಲಿ ಬುಗಿಲೆದ್ದ ಆಕ್ರೋಶ

ರೈತರು ಸುಮ್ಮನೆ ರಸ್ತೆಗೆ ಬರುವುದಿಲ್ಲ. ರೈತನಿಗೆ ನೋವಿದೆ. ಇವತ್ತಿನ ಸಂಪುಟ ಸಭೆಯಲ್ಲಿ ರೈತರ ಪರ ಸರ್ಕಾರ ತೀರ್ಮಾನ ಮಾಡಬೇಕು. ಹೆಚ್​ ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ನೀರನ್ನ ಯಾವುದೇ ಕಾರಣಕ್ಕೂ ಬಿಡಬಾರದು. ಪ್ರಜೆಗಳ ಹಿತವನ್ನು ಕಾಪಾಡುವ ಕೆಲಸ ಯಾವುದೇ ಸರ್ಕಾರ ಮಾಡಲಿ. ಸದ್ಯ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವ ಸ್ಥಿತಿ ಬಂದಿದೆ. ವಸ್ತುಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್​ಗೆ ಸರ್ಕಾರ ಸೂಕ್ತ ಮನವರಿಕೆ ಮಾಡಲಿ. ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ರೈತರ ಪರವಾಗಿ ಆದಿಚುಂಚನಗಿರಿ ಪೀಠ ಸದಾ ನಿಮ್ಮ ಜೊತೆ ಇರುತ್ತೆ. ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಹೋರಾಟ ಮುಂದುವರಿಸಲಿ ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:32 pm, Fri, 22 September 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್