AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸದ್ಯಕ್ಕೆ ಬಿಜೆಪಿ ಸೇರುವ ಅವಶ್ಯಕತೆ ಇಲ್ಲ, ಬಿಜೆಪಿ ಸೇರುವ ಬಗ್ಗೆ ನಾನು ಎಲ್ಲೂ ಹೇಳಿಲ್ಲ: ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ

sumalatha ambareesh: ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ಆದರೆ ನನಗೆ ಈಗ ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ -ಸಂಸದೆ ಸುಮಲತಾ

ನನಗೆ ಸದ್ಯಕ್ಕೆ ಬಿಜೆಪಿ ಸೇರುವ ಅವಶ್ಯಕತೆ ಇಲ್ಲ, ಬಿಜೆಪಿ ಸೇರುವ ಬಗ್ಗೆ ನಾನು ಎಲ್ಲೂ ಹೇಳಿಲ್ಲ: ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ
ಮೈಸೂರಿನಲ್ಲಿ ಮೋದಿ ಕಾರ್ಯಕ್ರಮ: ವೇದಿಕೆ ಮೇಲೆ ಮಂಡ್ಯ ಸಂಸದೆ ಸುಮಲತಾ ಪ್ರತ್ಯಕ್ಷ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 28, 2022 | 3:27 PM

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದು ಎರಡು ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾಗಿದೆ. ಈ‌ ಕಾರಣದಿಂದ ಮುಖಂಡರಿಗೆ ಸಂಸದರ ನಿಧಿ ಬಗ್ಗೆ ತಿಳಿಸುತ್ತಿದ್ದೇನೆ. ಮುಖಂಡರು ಹಿಂದೆ ಫಂಡ್ ಬಗ್ಗೆ ಕೇಳಿದ್ದರು. ಈ ಬಗ್ಗೆ ಪ್ರಸ್ತಾಪ ಮಾಡಲು ಅವರನ್ನು ಸಭೆ ಕರೆದಿದ್ದೇನೆ. ಹಾಗಂತ ಈ ಸಭೆ ಬಿಜೆಪಿ ಸೇರುವ ಬಗ್ಗೆ ಅಲ್ಲ. ನಾನು ಬಿಜೆಪಿ (BJP) ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ. ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದರೆ, ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದಿದ್ದಾರೆ. ಆದರೆ ನನಗೆ ಈಗ ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ, ಈಗ ಈ ಪ್ರಸ್ತಾಪವೇ ಬೇಡ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಇದನ್ನು ಬಹಿರಂಗವಾಗಿ ಹೇಳಲು ಆಗಲ್ಲ. ಜನರು ಏನು ಅಭಿಪ್ರಾಯ ಹೇಳಿದ್ದಾರೆ ಅದನ್ನು ಹೇಳಲ್ಲ. ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ನಾನು ಹೇಳಲ್ಲ. ಎಲ್ಲರೂ ಸ್ವತಂತ್ರರು, ಯಾವ ಪಕ್ಷಕ್ಕಾದ್ರು ಸೇರಬಹುದು. ನನ್ನ ಚುನಾವಣೆ ವೇಳೆ ಎಲ್ಲಾ ಪಕ್ಷದವರು ದುಡಿದಿದ್ದಾರೆ. ಅಭಿಷೇಕ್ ಚುನಾವಣೆ ಸ್ಪರ್ಧೆ ಆತನಿಗೆ ಬಿಟ್ಟಿದ್ದು. ಸಿನಿಮಾಗೆ ಬಾ ಎಂದು ನಾವು ಹೇಳಿಲ್ಲ, ರಾಜಕೀಯ ಬಗ್ಗೆನೂ ನಾವು ಹೇಳಲ್ಲ. ಇದು ಆತನ ವೈಯಕ್ತಿಕ ವಿಚಾರ ಎಂದು ಸಂಸದೆ ಸುಮಲತಾ (mandya mp sumalatha ambareesh) ಹೇಳಿದ್ದಾರೆ.

Sumalatha: ಮಾಧ್ಯಮದವರ ಪ್ರಶ್ನೆಗೆ ಹೇಗಿತ್ತು ಸಂಸದೆ ರಿಯಾಕ್ಷನ್

Also Read: ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು

Also Read: ಪಿಎಸ್ಐ ಆಕ್ರಮದ ನಡುವೆ ಮತ್ತೊಂದು ಪ್ರಕರಣ ಬಯಲು; ಕಾಮಗಾರಿ ಬಿಲ್ ಮಂಜೂರಿಗಾಗಿ ಲಂಚ ಪಡೆದ ವಿಡಿಯೋ ಬಿಡುಗಡೆ ಮಾಡಿದ AAP

Published On - 2:46 pm, Thu, 28 April 22

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ