AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು: ಕೆಆರ್​ಎಸ್​ ಹಿನ್ನೀರು ಪ್ರದೇಶ ಒತ್ತುವರಿಗೆ ತಡೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಹಿನ್ನೀರು ಪ್ರದೇಶವನ್ನು ಒತ್ತುವರಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ವಿಚಾರ ತಿಳಿದು ಟಿವಿ9 ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ವರದಿ ಮಾಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಒತ್ತುವರಿಯನ್ನು ತಡೆದಿದ್ದಾರೆ.

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು: ಕೆಆರ್​ಎಸ್​ ಹಿನ್ನೀರು ಪ್ರದೇಶ ಒತ್ತುವರಿಗೆ ತಡೆ
ಕೆಆರ್​ಎಸ್​​ ಡ್ಯಾಂ
ಪ್ರಶಾಂತ್​ ಬಿ.
| Edited By: |

Updated on:Jun 27, 2024 | 8:26 AM

Share

ಮಂಡ್ಯ, ಜೂನ್​ 27: ಕೃಷ್ಣರಾಜ ಸಾಗರ (KRS)​​ ಜಲಾಶಯದ ಹಿನ್ನೀರು ಪ್ರದೇಶ ಒತ್ತುವರಿ ಬಗ್ಗೆ ಟಿವಿ9 ವರದಿ ಪ್ರಸಾರ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಒತ್ತುವರಿಯನ್ನು ತಡೆದಿದ್ದಾರೆ. ಕೆಆರ್​ಎಸ್ ಜಲಾಶಯದ ಹಿನ್ನೀರಿನ ಪ್ರದೇಶದ ಜಾಗವನ್ನು ಒತ್ತುವರಿ ಮಾಡಲಾಗುತ್ತಿತ್ತು. ಕೇರಳ (Kerala) ಮೂಲದ ನಕೇಶ್ ಜಾನ್ ಮ್ಯಾಥ್ಯೂ ಎಂಬವರು ಜೆಸಿಬಿ ಮೂಲಕ ಜಲಾಶಯದ ಭೂಮಿಯಲ್ಲಿ ಗುಂಡಿ ತೆಗೆಸಿ ದೊಡ್ಡ ದೊಡ್ಡ ಕಲ್ಲುಗಳನ್ನು ಗುಂಡಿಯಲ್ಲಿ ಹಾಕಿ ಭೂಮಿಯನ್ನ ಒತ್ತುವರಿ ಮಾಡಲು ಮುಂದಾಗಿದ್ದರು.

ಮ್ಯಾಥ್ಯೂ ಅವರು ಪಾಂಡವಪುರ ತಾಲೂಕಿನ ಚಿಕ್ಕಾರಳ್ಳಿ ಗ್ರಾಮದ ಸರ್ವೆ ನಂಬರ್ 279ರಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದಾರೆ. ಜಮೀನನ ಪಕ್ಕದಲ್ಲೇ ಡ್ಯಾಂನ ಹಿನ್ನೀರಿನ ಜಾಗವಿದೆ. ಆ ಜಾಗವನ್ನು ಇದೀಗ ಒತ್ತುವರಿ ಮಾಡಲು ಮುಂದಾಗಿದ್ದರು. ಸ್ಥಳೀಯ ಜನಪ್ರತಿನಿಧಿಗಳು, ರಾಜಕಾರಣಿಗಳ ಸಹಾಯದಿಂದ ಅತಿಕ್ರಮಣ ಮಾಡಿ, ಭೂಮಿಯನ್ನ ಒತ್ತುವರಿ ಮಾಡುತ್ತಿದ್ದರು. ಇದು ಸ್ಥಳೀಯರ ಆಕ್ರೋಶಕ್ಕೂ ಕೂಡ ಕಾರಣವಾಗಿತ್ತು.

ಈ ಬಗ್ಗೆ ಟಿವಿ9 ವಿಸ್ತೃತ ವರದಿ ಮಾಡಿದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಅಕ್ರಮ ಒತ್ತುವರಿಗಾಗಿ ತೆಗೆಯಲಾಗಿದ್ದ ಗುಂಡಿ ಮುಚ್ಚಲು ಸೂಚನೆ ನೀಡಿದ್ದಾರೆ. ಬಳಿಕ ಜೆಸಿಬಿ ಸಹಾಯದಿಂದ ಜಮೀನು ಮಾಲೀಕ ಗುಂಡಿ ಮುಚ್ಚಿದ್ದಾನೆ.

ಇದನ್ನೂ ಓದಿ: ಕೇಂದ್ರ ಹಾಗೂ ರಾಜ್ಯ ಸಚಿವರ ನಡುವೆ ಜಟಾಪಟಿ: ಮಂಡ್ಯದಲ್ಲಿ ನೂತನ ಸಕ್ಕರೆ ಕಾರ್ಖಾನೆಗೆ ವಿರೋಧ

ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಎಸ್​ಇ ರಘುರಾಮನ್ ಮಾತನಾಡಿ, ಗಮನಕ್ಕೆ ಬಂದಿದ್ದು, ಸ್ಥಳ ಪರಿಶೀಲನೆ ಮಾಡಲಾಗಿದ್ದು, ಒತ್ತುವರಿ ಮಾಡುವುದನ್ನು ಈಗಾಗಲೇ ತಡಿಯಲಾಗಿದೆ. ಜಂಟಿ ಸರ್ವೆ ನಡೆಸಿ ವರದಿ ಬರುವವರೆಗೂ ಯಾವುದೇ ಕಾಮಗಾರಿ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ, ಹಳೇ ಮೈಸೂರು ಭಾಗದ ಜನರ ಜೀವನಾಡಿ. ಇದೇ ಜಲಾಶಯವನ್ನು ನಂಬಿಕೊಂಡು ಲಕ್ಷಾಂತರ ರೈತರು ವ್ಯವಸಾಯ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.

ಕೃಷ್ಣ ರಾಜ ಸಾಗರ ಅಣೆಕಟ್ಟನ್ನು 1924 ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಇದು ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ. ಕೆಲ ತಿಂಗಳ ಹಿಂದೆ ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಕೆಆರ್​ಎಸ್​ನ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Thu, 27 June 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?