AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ! 3 ಲಾರಿ ಪಡಿತರ ಅಕ್ಕಿ ವಶಕ್ಕೆ

ಬಾಲಾಜಿ ರೈಸ್ ಮಿಲ್ ದಾಳಿ ನಡೆಸಿದಾಗ ನಕಲಿ ಬ್ರಾಂಡ್ ಸೃಷ್ಟಿಸಿ ಪಾಲಿಶ್ ಅಕ್ಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಫ್ರಿಕಾ, ಮಲೇಷ್ಯಾ, ಸೌದಿ ಹೆಸರಿನ ಬ್ರಾಂಡ್​ನಲ್ಲಿ ಮಾರಾಟ ಮಾಡುತ್ತಿದ್ದರಂತೆ.

ಮಂಡ್ಯದ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ! 3 ಲಾರಿ ಪಡಿತರ ಅಕ್ಕಿ ವಶಕ್ಕೆ
3 ಲಾರಿ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ
TV9 Web
| Edited By: |

Updated on: Nov 21, 2021 | 3:15 PM

Share

ಮಂಡ್ಯ: ಜಿಲ್ಲೆಯ ಬಾಲಾಜಿ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು ಮೂರು ಲಾರಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ನೇತೃತ್ವದಲ್ಲಿ ಅಕ್ಕಿ ಜಪ್ತಿ ಮಾಡಲಾಗಿದೆ. ಆಂಧ್ರದಿಂದ ಪಡಿತರ ಅಕ್ಕಿ ತಂದು ಪಾಲಿಶ್ ಮಾಡಿ ರಫ್ತು ಮಾಡುತ್ತಿದ್ದರು. ಪಾಲಿಶ್ ಅಕ್ಕಿ ಸಣ್ಣ ಅಕ್ಕಿ ರೀತಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು. 10ಕ್ಕೂ ಹೆಚ್ಚು ಬ್ರಾಂಡ್ ಮೂಲಕ ದೇಶ ವಿದೇಶಗಳಿಗೆ ರಫ್ತು ಮಾಡುತ್ತಿದ್ದರು.

ಬಾಲಾಜಿ ರೈಸ್ ಮಿಲ್ ದಾಳಿ ನಡೆಸಿದಾಗ ನಕಲಿ ಬ್ರಾಂಡ್ ಸೃಷ್ಟಿಸಿ ಪಾಲಿಶ್ ಅಕ್ಕಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಫ್ರಿಕಾ, ಮಲೇಷ್ಯಾ, ಸೌದಿ ಹೆಸರಿನ ಬ್ರಾಂಡ್​ನಲ್ಲಿ ಮಾರಾಟ ಮಾಡುತ್ತಿದ್ದರಂತೆ. ಸದ್ಯ ಆಂಧ್ರಪ್ರದೇಶದಿಂದ ತಂದಿದ್ದ 3 ಲಾರಿ ಪಡಿತರ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಬಾಗಲಕೋಟೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 200 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಂದಾಯ ಇಲಾಖೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಬಾರಪೇಟ ಗಲ್ಲಿಯ ಗೋಡೌನ್ನಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸುಲೇಮಾನ್ ಎಂಬುವರ ಗೋಡೌನ್​ನಲ್ಲಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಕ್ಕೆ ಪಡೆದಿದ್ದರು.

ಪಡಿತರ ಅಕ್ಕಿ ಸೇರಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಅಕ್ಕಿಯನ್ನು ಸುಲೇಮಾನ್ ಎಂಬುವವರು ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದರು. ಗೋದಾಮಿನಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿರುವ ಬಗ್ಗೆ ನಿನ್ನೆ ರಾತ್ರಿ ಅನಾಮಿಕರಿಂದ ಆಹಾರ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಆಹಾರ ಇಲಾಖೆ ಡಿಡಿ ಶ್ರೀಶೈಲ್ ಕಂಕಣವಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದರು. ಸದ್ಯ ಅಧಿಕಾರಿಗಳು ಗೋಡೌನ್​ನ ಸೀಜ್ ಮಾಡಿದ್ದರು.

ಇದನ್ನೂ ಓದಿ

ಮೋದಿ ಜೀ-ಯೋಗಿ ಜೀ: ಅಪರೂಪದ ಫೋಟೋ ಶೇರ್​ ಮಾಡಿಕೊಂಡು ಸಣ್ಣ ಕವನವನ್ನೇ ಬರೆದ ಉತ್ತರಪ್ರದೇಶ ಸಿಎಂ

ಕ್ರಿಸ್‌ಮಸ್, ಹೊಸ ವರ್ಷದ ಪ್ರಯುಕ್ತ ವಿಶೇಷ ರೈಲುಗಳನ್ನು ಪ್ರಾರಂಭಿಸಲಿರುವ ಭಾರತೀಯ ರೈಲ್ವೆ; ಮಾಹಿತಿ ಇಲ್ಲಿದೆ

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ