AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Melukote: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಗುರಿಯಾದ ತಂಗಿ ಕೊಳ, ಮೇಲುಕೋಟೆಯಲ್ಲಿ ಭಕ್ತರಿಗೆ ಭಾರಿ ನಿರಾಸೆ

Akka Tangi Kola: ರಕ್ಕಸ ಮಳೆಗೆ ಪುರಾಣ ಪ್ರಸಿದ್ದ ತಂಗಿ ಕೊಳದ ತಡೆ ಗೋಡೆಗಳು ಕುಸಿದಿತ್ತು.. ಆದ್ರೆ ಈಗ ಮಳೆ ನಿಂತು ತಿಂಗಳುಗಳೇ ಆಗಿವೆ.. ಆದರೂ ಸಹ ಕಲ್ಯಾಣಿಯನ್ನ ದುರಸ್ಥಿ ನಡೆಸಲು ಅಧಿಕಾರಿಗಳು ಮುಂದಾಗಿಲ್ಲ..

Melukote: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಗುರಿಯಾದ ತಂಗಿ ಕೊಳ, ಮೇಲುಕೋಟೆಯಲ್ಲಿ ಭಕ್ತರಿಗೆ ಭಾರಿ ನಿರಾಸೆ
ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಗುರಿಯಾದ ತಂಗಿ ಕೊಳ
TV9 Web
| Edited By: |

Updated on: Jan 07, 2023 | 6:06 AM

Share

ಮಂಡ್ಯ ಜಿಲ್ಲೆಗೆ ಹೆಮ್ಮೆಯ ಕೀರೀಟ ಅಂದ್ರೆ ಅದು ಪುರಾಣ ಪ್ರಸಿದ್ದ ಮೇಲುಕೋಟೆ (Melukote).. ಚಲುವನಾರಾಯಣನ (cheluvanarayana swamy) ದರ್ಶನ ಪಡೆಯಲು ಹೊರ ರಾಜ್ಯಗಳಿಂದ ಯಾತ್ರಾತ್ರಿಗಳು ಬರ್ತಾರೆ.. ಪವಿತ್ರ ತಂಗಿ ಕೊಳದ ಕಲ್ಯಾಣಿ ನೀರನ್ನ ಸ್ಪರ್ಶಿಸಿ ಪುನೀತರಾಗ್ತಾರೆ.. ಆದ್ರೆ ಇಂತಹ ಪ್ರಸಿದ್ದ ಸ್ಥಳದ ಸ್ಥಿತಿ ಹೇಗಿದೆ ಗೊತ್ತಾ..? ಈ ರಿಪೋರ್ಟ್ ನೋಡಿ… `ಅಲ್ಲಿನ ಪಾರ್ಕಿಂಗ್ ಲಾಟ್ ಸದಾ ವಾಹನಗಳಿಂದ ಭರ್ತಿಯಾಗಿರುತ್ತದೆ. ಕಣ್ಣಾಡಿಸಿದ ಕಡೆಯಲ್ಲಾ ಪ್ರವಾಸಿಗರ ದಂಡು ತುಂಬಿರುತ್ತದೆ. ಹೊರ ಜಿಲ್ಲೆ ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ಯಾತ್ರಿಗಳು ಭಕ್ತಗಣ ಅಲ್ಲಿ ಕಾಣಬರುತ್ತಾರೆ.. ಈ ಎಲ್ಲಾ ದೃಶ್ಯ ಕಣ್ಣಿಗೆ ಬೀಳುವುದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ. ಆದರೆ ಇಂತಹ ಪುರಾಣ ಪ್ರಸಿದ್ದ ಮೇಲುಕೋಟೆಯ ಪ್ರವಾಸಿ ತಾಣದಲ್ಲಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.. ಮಳೆಯಿಂದ ತಂಗಿ ಕೊಳದ ತಡೆ ಗೋಡೆ (Akka Tangi Kola) ಕುಸಿದಿದ್ದು ಆರು ತಿಂಗಳು ಕಳೆದ್ರು ತಡೆ ಗೋಡೆ ನಿರ್ಮಾಣ ಮಾಡದೆ ಅಸಡ್ಡೆ ತೋರಿದ್ದಾರೆ ಎಂದು ಸ್ಥಳೀಯರಾದ ನಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲೇನಾಗಿದೆಯೆಂದರೆ ಕಳೆದ ವರ್ಷ ಮಂಡ್ಯ ಜಿಲ್ಲಾದ್ಯಂತ ಭಾರಿ ಮಳೆ ಸುರಿದಿತ್ತು.. ಮಳೆರಾಯನ ಆರ್ಭಟಕ್ಕೆ ಎಲ್ಲೆಡೆ ಪ್ರವಾಹ ಸೃಷ್ಟಿಯಾಗಿತ್ತು.. ಅದೇ ರೀತಿ ಮೇಲುಕೋಟೆ ಹಾಗೂ ಸುತ್ತಮುತ್ತ ಉಧೋ ಎಂದು ಮಳೆ ಸುರಿದಿತ್ತು. ರಣ ರಕ್ಕಸ ಮಳೆಗೆ ಪುರಾಣ ಪ್ರಸಿದ್ದ ತಂಗಿ ಕೊಳದ ತಡೆ ಗೋಡೆಗಳು ಕುಸಿದು ಆತಂಕ ಸೃಷ್ಟಿಯಾಗಿತ್ತು.. ಆದ್ರೆ ಈಗ ಮಳೆ ನಿಂತು ತಿಂಗಳುಗಳೇ ಕಳೆದು ಹೋಗಿದೆ.. ಆದರೂ ಸಹ ಕಲ್ಯಾಣಿಯನ್ನ ದುರಸ್ಥಿ ನಡೆಸಲು ಅಧಿಕಾರಿಗಳು ಮುಂದಾಗಿಲ್ಲ..

Officials yet to repair collapsed Wall Of Akka Tangi Kola In Melukote in Mandya

ದಿನ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಯಾತಾತ್ರಿಗಳು ಮೇಲುಕೋಟೆ ಚಲುವನಾರಾಯಣನ ದರ್ಶನ ಪಡೆಯುತ್ತಾರೆ. ಬಳಿಕ ಅಕ್ಕ ತಂಗಿ ಕೊಳ ಧನುಷ್ ಕೋಟಿ ತಾಣವನ್ನ ವೀಕ್ಷಣೆ ಮಾಡ್ತಾರೆ.. ಇಂತ ಪವಿತ್ರ ಪುರಾಣ ಪ್ರಸಿದ್ದ ತಾಣಗಳನ್ನ ಉಳಿಸಿಕೊಂಡು ಹೋಗುವುದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಸ್ಥಳೀಯ ಜಿಲ್ಲಾಡಳಿತದ ಜವಾಬ್ದಾರಿ.. ಆದ್ರೆ ದುರಸ್ಥಿ ಕಾರ್ಯ ಮಾಡದೆ ನಿರ್ಲಕ್ಷ ವಹಿಸಿದ್ದಾರೆ.. ಈ ಹಿನ್ನೆಲೆಯಲ್ಲಿ ಮೇಲುಕೋಟೆ ಗ್ರಾಮಸ್ಥರು ಹಾಗೂ ಪ್ರವಾಸಿಗರು ಅಧಿಕಾರಿಗಳ ನಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವರದಿ: ಸೂರಜ್ ಪ್ರಸಾದ್, ಟಿವಿ 9, ಮಂಡ್ಯ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ