AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ್ಸೆಂಟೇಜ್ ಭೂತ! ಮಾಮೂಲು ನೀಡುವಂತೆ ಪಿಡಿಒಗಳಿಗೆ EO ಕಿರುಕುಳ? ಪರ್ಸೆಂಟೇಜ್ ಕೇಳುವ ವಿಡಿಯೋ ವೈರಲ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ಭೈರಪ್ಪ ಯೋಜನೆಗೆ ಇಂತಿಷ್ಟು ಹಣ ಅಂತ ಮೊದಲೆ ಫಿಕ್ಸ್ ಮಾಡಿಕೊಳ್ಳುತ್ತಿದ್ದರಂತೆ. ಅಷ್ಟು ಹಣ ಕೊಟ್ರೆ ಅದು ನನಗೆ ಸಾಲಲ್ಲ ಅನ್ನೋ ಕಿರಿಕ್ ಬೇರೆ ಮಾಡ್ತಿದ್ದಾರಂತೆ.

ಪರ್ಸೆಂಟೇಜ್ ಭೂತ! ಮಾಮೂಲು ನೀಡುವಂತೆ ಪಿಡಿಒಗಳಿಗೆ EO ಕಿರುಕುಳ? ಪರ್ಸೆಂಟೇಜ್ ಕೇಳುವ ವಿಡಿಯೋ ವೈರಲ್
ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ
TV9 Web
| Edited By: |

Updated on:Feb 03, 2022 | 11:24 AM

Share

ಮಂಡ್ಯ: ಪರ್ಸೆಂಟೇಜ್ ನೀಡುವಂತೆ ಪಿಡಿಒಗಳಿಗೆ EO ಕಿರುಕುಳ? ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ವಿರುದ್ಧ ಶ್ರೀರಂಗಪಟ್ಟಣ ತಾಲೂಕಿನ ಪಿಡಿಒಗಳು ಆರೋಪ ಮಾಡಿದ್ದಾರೆ. EO ಭೈರಪ್ಪ ವಿರುದ್ಧ ಜಿ.ಪಂ. ಸಿಇಒಗೆ PDOಗಳಿಂದ ದೂರು ಸಲ್ಲಿಸಲಾಗಿದೆ. ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಶೇಕಡಾ 30ರಷ್ಟು ಪರ್ಸೆಂಟೇಜ್ ಕೇಳುತ್ತಾರೆಂದು ಪಿಡಿಒಗಳು ಆರೋಪ ಮಾಡಿದ್ದಾರೆ. ಇ-ಸ್ವತ್ತು ಮಾಡಿಸುವವರಿಂದ ಹಣ ಪಡೆದು ನನಗೆ ನೀಡಿ ಎಂದು ಪಿಡಿಒಗಳ ಬಳಿ ಪರ್ಸೆಂಟೇಜ್ ಕೇಳುತ್ತಾರೆ. ನೇರವಾಗಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಾರೆ. ಕೇಳಿದಷ್ಟು ಪರ್ಸೆಂಟೇಜ್ ನೀಡಲೇಬೇಕೆಂದು ಕಿರುಕುಳ ಮಾಡುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ಭೈರಪ್ಪ ಯೋಜನೆಗೆ ಇಂತಿಷ್ಟು ಹಣ ಅಂತ ಮೊದಲೆ ಫಿಕ್ಸ್ ಮಾಡಿಕೊಳ್ಳುತ್ತಿದ್ದರಂತೆ. ಅಷ್ಟು ಹಣ ಕೊಟ್ರೆ ಅದು ನನಗೆ ಸಾಲಲ್ಲ ಅನ್ನೋ ಕಿರಿಕ್ ಬೇರೆ ಮಾಡ್ತಿದ್ದಾರಂತೆ. ಹೀಗಾಗಿ ಭೈರಪ್ಪರ ಕಿರುಕುಳಕ್ಕೆ ಬೇಸತ್ತು ಪಿಡಿಓಗಳು ಸಿಇಓಗೆ ದೂರು ನೀಡಿದ್ದಾರೆ. ಆದರೆ ದೂರು ನೀಡಿ ಒಂದೂವರೆ ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಹಿರಿಯ ಅಧಿಕಾರಿಗಳ ನಡೆ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸಾಕ್ಷಿಗಳಿದ್ರು ಕ್ರಮ ಏಕಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ.

ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಶೇಕಡಾ 30ರಷ್ಟು ಪರ್ಸೆಂಟೇಜ್ ಕೇಳುತ್ತಾರೆ. ಇ-ಸ್ವತ್ತು ಮಾಡಿಸುವವರಿಂದ ಹಣ ಪಡೆದು ನನಗೆ ನೀಡಿ ಎಂದು ಪಿಡಿಒಗಳ ಬಳಿ ಪರ್ಸೆಂಟೇಜ್ ಕೇಳುತ್ತಾರೆ. ನೇರವಾಗಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಾರೆ. ಕೇಳಿದಷ್ಟು ಪರ್ಸೆಂಟೇಜ್ ನೀಡಲೇಬೇಕೆಂದು ಕಿರುಕುಳ ನೀಡುತ್ತಾರೆ ಎಂದು ಪಿಡಿಒಗಳು ಆರೋಪಿಸಿದ್ದು EO ಕಿರುಕುಳಕ್ಕೆ ಬೇಸತ್ತು EO ಪರ್ಸೆಂಟೇಜ್ ಕೇಳುವ ಆಡಿಯೋ, ವಿಡಿಯೋವನ್ನು ವೈರಲ್ ಮಾಡಿದ್ದಾರೆ.

ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ -ಸಿಇಓ ದಿವ್ಯಾ ಪ್ರಭು ಇನ್ನು ಈ ಬಗ್ಗೆ ಮಂಡ್ಯ ಜಿ.ಪಂ ಸಿಇಓ ದಿವ್ಯಾ ಪ್ರಭು ಮಾತನಾಡಿದ್ದು, ಪಿಡಿಓಗಳು ಈ ಬಗ್ಗೆ ದೂರು ಕೊಟ್ಟಿದ್ದಾರೆ. ಅದರ‌ ಕುರಿತು ಪರಿಶೀಲನೆ ನಡೆಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ರಚನೆ ಮಾಡಿದ್ವಿ. ಇದೀಗಾ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡಿದ್ದಾರೆ. ಮೇಲ್ನೋಟಕ್ಕೆ ಇಓ ಒತ್ತಡ ಹಾಕಿದ್ದಾರೆ ಎಂದು ವರದಿ ಕೊಟ್ಟಿದ್ದಾರೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೆ. ಆಡಿಯೋ ವೀಡಿಯೋ ಸಾಕ್ಷಿ ಎಲ್ಲವನ್ನು ಸೇರಿ ವರದಿ ಕೊಡಲಾಗುವುದು. ಸರ್ಕಾರಕ್ಕೆ ಅಮಾನತು ಮಾಡುವಂತೆ ವರದಿ‌ ಕೊಡುತ್ತೇವೆ. ಸಿಇಓ ಬಗ್ಗೆಯು ಆಡಿಯೋದಲ್ಲಿ ಆರೋಪ ಮಾಡಿದ್ದಾರೆ. ಸೋಲರ್ ದೀಪದ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಸಮಯದಲ್ಲಿ ಯಾವುದೇ ಯೋಜನೆ ಆಗಿಲ್ಲ. ನಾನು ಜಿಲ್ಲೆಗೆ ಬಂದಾಗಿನಿಂದಲು ಅಭಿವೃದ್ಧಿ ಬಗ್ಗೆ ಕೆಲಸ‌ ಮಾಡಿದ್ದೇನೆ‌. ನನ್ನ ವಿರುದ್ದದ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಗ್ರೂಪ್‌ ಎ ಹಂತದ ಅಧಿಕಾರಿಯಾಗಿದ್ರಿಂದ ನಾನು ಕ್ರಮ ತೆಗೆದುಕೊಳ್ಳಲು ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹಾದಿಯೇ ತೋರಿದ ಹಾದಿ ; ಬೀದಿಯನ್ನೇ ನೋಡದ ಮಂಡ್ಯದ 105ರ ನಿಂಗಮ್ಮ ಬೀದಿಯಲ್ಲಿಯೇ ಬದುಕುವಂತಾಯಿತು

Published On - 10:53 am, Thu, 3 February 22

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!