AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

76ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಆಹ್ವಾನಿತರಾಗಿ ಮಂಡ್ಯದ ರೈತನಿಗೆ ಪಿಎಂಒ ಆಹ್ವಾನ

ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯದ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಿ ಕಚೇರಿ ಆಹ್ವಾನ ನೀಡಿದೆ.

76ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಆಹ್ವಾನಿತರಾಗಿ ಮಂಡ್ಯದ ರೈತನಿಗೆ ಪಿಎಂಒ ಆಹ್ವಾನ
76ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಆಹ್ವಾನಿತರಾಗಿ ಮಂಡ್ಯದ ರೈತ ಎನ್​ಹೆಚ್​ ವಿರೂಪಾಕ್ಷಪ್ಪ ಅವರಿಗೆ ಪಿಎಂಒ ಆಹ್ವಾನ
ಪ್ರಶಾಂತ್​ ಬಿ.
| Edited By: |

Updated on:Aug 10, 2023 | 9:44 PM

Share

ಮಂಡ್ಯ, ಆಗಸ್ಟ್ 10: ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ (Independence Day) ವಿಶೇಷ ಆಹ್ವಾನಿತರನ್ನಾಗಿ ಮಂಡ್ಯದ (Mandya) ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ.

ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿರೂಪಾಕ್ಷಪ್ಪ, ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿರುವುದರಿಂದ ಅಧಿಕೃತವಾಗಿ ನನ್ನನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯಿಂದ ಆಹ್ವಾನಿಸಿದ್ದಾರೆ. ಇದಕ್ಕಾಗಿ ಕರ್ನಾಟಕದ ಹಾಗೂ ಜಿಲ್ಲೆಯ ರೈತರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಡ್ಯ ಜಿಲ್ಲೆಯ ರೈತ ವಿರೂಪಾಕ್ಷಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಇವರನ್ನು ಕಳುಹಿಸಿ ಕೊಡುವಂತೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಸೂಚನೆ ಬಂದಿದೆ. ಹೀಗಾಗಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿರೂಪಾಕ್ಷಪ್ಪ ಅವರ ಜೊತೆ ಒಬ್ಬ ಅಧಿಕಾರಿಯನ್ನೂ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ಇದನ್ನೂ ಓದಿ: ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ

ಎ ನಾಗತಿಹಳ್ಳಿಯಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಜಮೀನುವೊಂದಿರುವ ವಿರೂಪಾಕ್ಷಪ್ಪ, ಪೂರ್ಣ ಜಮೀನಿನಲ್ಲಿ ಸಾವಯವ ಕೃಷಿ ಹಾಗೂ ಉನ್ನತ ಸಾಂದ್ರ ಬೇಸಾಯ ಪದ್ದತಿಯನ್ನ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಕೃಷಿ ಬೆಳೆ, ರಾಗಿ, ಜೋಳ ಹಾಗೂ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದಾರೆ.

ಜೊತೆಗೆ ಮಾಡಾಗಲ ಮತ್ತು ಡ್ರಾಗನ್ ಫ್ರೂಟ್​​ ಗಿಡಗಳನ್ನ ಬೆಳೆದಿದ್ದು, ಏಲಕ್ಕಿ ಬೆಳೆಯನ್ನು ಬೆಳೆದಿದ್ದಾರೆ. ಇನ್ನು 2022ರಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಹಯೋಗದಲ್ಲಿ ಜಮೀನಿನಲ್ಲಿಯೇ ಪ್ರಾತಕ್ಷಿತೆ ಕೂಡ ನಡೆದಿದೆ. ಸಾವಯವ ಕೃಷಿ ಬಗ್ಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಹಾ ನೀಡಿದ್ದಾರೆ. ಸಾವಿರಾರು ರೈತರು ಇವರ ಜಮೀನಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಇವರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಇವರನ್ನು ಗುರುತಿಸಿ 77ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆ್ವಹಾನ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಮಮಂಗಲದ ಕೃಷಿ ಅಧಿಕಾರಿ ಯೋಗರಾಜ್ ಅವರಿಗೆ ಇವರನ್ನ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕರೆದುಕೊಂಡು ಬರುವ ಜವಬ್ದಾರಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Thu, 10 August 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್