AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ

ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೆಯದು ಹೆಣ್ಣು ಮಗುವಾಗುವ ಶಂಕೆ ಇದೆ. ಹೀಗಾಗಿ ಭ್ರೂಣ ಲಿಂಗ ಪತ್ತೆ, ಹತ್ಯೆಗೆ ದಂಪತಿ ಬಂದಿದ್ದಾರೆ. ಆರೋಗ್ಯಾಧಿಕಾರಿ ಈ ಸಂಬಂಧ ದೂರು ನೀಡಿದ್ದು, ದೂರಿನ‌ ಅನ್ವಯ ದಂಪತಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ: ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ
ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ
TV9 Web
| Updated By: preethi shettigar|

Updated on:Oct 12, 2021 | 12:02 PM

Share

ಮಂಡ್ಯ: ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ಮಂಡ್ಯದ ವಿವೇಕಾನಂದ ಜೋಡಿ ರಸ್ತೆಯಲ್ಲಿರುವ ನಮ್ಮ ಮನೆ ಪಾಲಿ ಕ್ಲಿನಿಕ್ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್ ದಾಳಿ ಮಾಡಿದ್ದಾರೆ. ಈ ವೇಳೆ ದಂಪತಿ ಭ್ರೂಣ ಲಿಂಗ ಪತ್ತೆಗೆ ಬಂದಿರುವುದಾಗಿ  ತಪ್ಪೊಪ್ಪಿಕ್ಕೊಂಡಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೂರನೆಯದು ಹೆಣ್ಣು ಮಗುವಾಗುವ ಶಂಕೆ ಇದೆ. ಹೀಗಾಗಿ ಭ್ರೂಣ ಲಿಂಗ ಪತ್ತೆ, ಹತ್ಯೆಗೆ ದಂಪತಿ ಬಂದಿದ್ದಾರೆ. ಆರೋಗ್ಯಾಧಿಕಾರಿ ಈ ಸಂಬಂಧ ದೂರು ನೀಡಿದ್ದು, ದೂರಿನ‌ ಅನ್ವಯ ದಂಪತಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಂಪತಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕ್ಲಿನಿಕ್​ನ ಸಿಬ್ಬಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಈ ಹಿಂದೆಯೂ ಹಲವು ಭ್ರೂಣ ಲಿಂಗ ಪತ್ತೆ, ಹತ್ಯೆ ಮಾಡಿರುವ ಶಂಕೆ ಉಂಟಾಗಿದೆ.

ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಅಪ್ರಾಪ್ತೆ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ಪತಿಯನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಹೆಣ್ಣು ಮಗುವಾಗಿದ್ದು, ಈ ವೇಳೆ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತೆಯ ಪತಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಕಾಡುತ್ತಿದೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಕಾನೂನುಬಾಹಿರ ಚಟುವಟಿಕೆಗಳ ತಡೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಿದ್ಧತೆ

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 11:58 am, Tue, 12 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ