AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಎರಡೂವರೆ ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ

ಎರಡೂವರೆ ತಿಂಗಳ ಗರ್ಭಿಣಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೇಗಳಪುರ ಗ್ರಾಮದಲ್ಲಿ ನಡೆದಿದೆ.

Mandya News: ಎರಡೂವರೆ ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ
ಮೃತ ರಮ್ಯ
TV9 Web
| Edited By: ವಿವೇಕ ಬಿರಾದಾರ|

Updated on: Jan 01, 2023 | 2:15 PM

Share

ಮಂಡ್ಯ: ಎರಡೂವರೆ ತಿಂಗಳ ಗರ್ಭಿಣಿ (Pregnant) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಮೇಗಳಪುರ ಗ್ರಾಮದಲ್ಲಿ ನಡೆದಿದೆ. ಹೆಚ್.ವೈ.ರಮ್ಯಾ (24) ಮೃತ ಮಹಿಳೆ. ರಮ್ಯಾ 5 ವರ್ಷದ ಹಿಂದೆ ಕುಮಾರ್ ಎಂಬಾತನನ್ನು ಮದುವೆಯಾಗಿದ್ದಳು. ದಂಪತಿಗೆ 4 ವರ್ಷದ ಹೆಣ್ಣು ಮಗುವಿದ್ದು, ಈಗ ಮತ್ತೆ ಗರ್ಭಿಣಿಯಾಗಿದ್ದಳು. ಕುಮಾರ್ ಕುಟುಂಬಸ್ಥರು ಕಳೆದ 1 ವರ್ಷದಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಕುಟುಂಬಸ್ಥರ ಕಾಟ ತಾಳಲಾರದೆ ತಂದೆ ಮನೆಯಿಂದ 4.5 ಲಕ್ಷ ರೂ. ತಂದುಕೊಟ್ಟಿದ್ದಳು. ಇಷ್ಟಾದರು ಹಣದ ದಾಹ ಕಡಿಮೆಯಾಗದೆ ಮತ್ತೆ ಬೇಡಿಕೆ ಇಟ್ಟಿದ್ದರು.

ಇದೇ ವಿಚಾರಕ್ಕೆ ಕುಮಾರ್ ಕುಟುಂಬಸ್ಥರುಆಗಾಗ ಜಗಳ ತೆಗೆದು ರಮ್ಯಾಗೆ ಕಿರುಕುಳ ನೀಡುತ್ತಿದ್ದರಂತೆ. ನಿನ್ನೆ (ಡಿ.31/2022) ಗಂಡ ಹಾಗೂ ಆತನ ಮನೆಯವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ರಮ್ಯ ಆತ್ಮಹತ್ಯೆ ಮಾಡಿಕೊಂಡಿಲ್ಲ ಗಂಡ ಹಾಗೂ ಆತನ ಕುಟುಂಬಸ್ಥರು ಕೊಲೆಗೈದು ನೇಣುಹಾಕಿದ್ದಾರೆಂದು ರಮ್ಯಾ ತಂದೆ ಯೋಗೇಶ್ ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು