ದಿನಗಳೆದಂತೆ ಹೆಚ್ಚಾಗುತ್ತಲೇ ಇದೆ ಧರ್ಮ ದಂಗಲ್: ಮಂಡ್ಯದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂದನ್ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ದಿನೇ ದಿನೆ ಧರ್ಮ ದಂಗಲ್ ವಿಚಾರ ಹೆಚ್ಚಾಗುತ್ತಿದೆಯೇ ಹೊರತು ಕಡೆಮೆಯಾಗುತ್ತಿಲ್ಲ. ಶ್ರೀರಂಗಪಟ್ಟಣದಲ್ಲಿ ಹಲವು ದೇವಸ್ಥಾನಗಳನ್ನು ಕೆಡವಿ ಮುಸ್ಲಿಮರು ಮಸೀದಿ ಕಟ್ಟಿರುವುದಾಗಿ ಮಾಜಿ ಎಂಎಲ್​ಸಿ ಗೋ. ಮಧುಸೂದನ್ ಗಂಭೀರ ಆರೋಪ ಮಾಡಿದ್ದಾರೆ.

ದಿನಗಳೆದಂತೆ ಹೆಚ್ಚಾಗುತ್ತಲೇ ಇದೆ ಧರ್ಮ ದಂಗಲ್: ಮಂಡ್ಯದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂದನ್ ಸ್ಪೋಟಕ ಹೇಳಿಕೆ
ಮಾಜಿ ಎಂಎಲ್​ಸಿ ಗೋ. ಮಧುಸೂದನ್
Updated By: ಗಂಗಾಧರ​ ಬ. ಸಾಬೋಜಿ

Updated on: Jun 06, 2022 | 8:08 AM

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಹಲವು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ದೇಗುಲಗಳನ್ನು ಕೆಡವಿ ಮುಸ್ಲಿಮರು ಮಸೀದಿ ಕಟ್ಟಿರುವುದಾಗಿ ಆರೋಪಿಸಿ, ನಗರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂದನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೆ ಧರ್ಮ ದಂಗಲ್ ವಿಚಾರ ಹೆಚ್ಚಾಗುತ್ತಿದೆಯೇ ಹೊರತು ಕಡೆಮೆಯಾಗುತ್ತಿಲ್ಲ. ನಿಮಿಷಾಂಬ ದೇವಸ್ಥಾನದ ಬಳಿ ಚೆನ್ನಾಂಬ ದೇವಸ್ಥಾನವಿದ್ದು, ಗೋಸಾಯ್ ಗೌಡ್ರ ಗಲ್ಲಿಯಲ್ಲಿ ಈಗ ಉರ್ದು ಶಾಲೆ ನಡೆಯುತ್ತಿದೆ. ಮುಂಚೆ ಅಲ್ಲಿ ವರದರಾಜೇಸ್ವಾಮಿ ದೇಗುಲವಿತ್ತು. ದೇಗುಲದ ಒಳಗೆ ಅರ್ಚಕನನ್ನೇ ಟಿಪ್ಪು ಕೊಂದುಹಾಕಿ, ಬಳಿಕ ಮೂರ್ತಿಯನ್ನ ಒಡೆದು ಈಗ ‌ಉರ್ದು ಶಾಲೆ ನಿರ್ಮಿಸಿದ್ದಾರೆ ಎಂದು ಆರೋಪಿಸಿದರು. ಟಿಪ್ಪುವಿನ ಅರಮನೆ ಹಿಂಭಾಗದಲ್ಲೇ ಈಶ್ವರ ದೇವಸ್ಥಾನವಿದ್ದು, ಅದನ್ನು ಸಹ ಟಿಪ್ಪು ಕೆಡವಿದ್ದಾನೆಂದು ಗಂಭೀರ ಆರೋಪ ಮಾಡಿದ್ದು, ಗೋ. ಮಧುಸೂಧನ್ ಸ್ಪೋಟಕ ಹೇಳಿಕೆ ಈಗ ಸಾಕಷ್ಟು ಚರ್ಚಗೆ ಗ್ರಾಸವಾಗಿದೆ.

ಜಾಮೀಯ ಮಸೀದಿ ಶೇ.100ರಷ್ಟು ಮಸೀದಿಯೇ: ಆಸಿಫ್ ಸೇಠ್

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಶೇ.100ರಷ್ಟು ಮಸೀದಿಯೇ ಎಂದು ಟಿಪ್ಪು ವಕ್ಫ್ ಬೋರ್ಡ್ ಉಪಾಧ್ಯಕ್ಷ ಆಸಿಫ್ ಸೇಠ್ ಹೇಳಿಕೆ ನೀಡಿದ್ದಾರೆ. ಜಾಮಿಯಾ ಮಸೀದಿ ಬಳಿ ಮಾತನಾಡಿದ ಅವರು, ಮಸೀದಿ ಇರುವ ಜಾಗ ವಕ್ಫ್ ಬೋರ್ಡ್​ಗೆ ಸೇರಿದ್ದಾಗಿದೆ. ಇದರ ನಿರ್ವಹಣೆಯನ್ನ ಎಎಸ್​ಐ ಮಾಡುತ್ತಿದೆ. ಟಿಪ್ಪು ವಕ್ಫ್ ಬೋರ್ಡ್ ಯಾವಾಗ ಸ್ಥಾಪನೆ ಆಯ್ತೋ ಅಂದಿನಿಂದ ಇದು ವಕ್ಫ್ ಬೋರ್ಡ್ ಆಸ್ತಿಯಾಗಿದೆ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ಟಿಪ್ಪು ಜಾಗವನ್ನೆಲ್ಲ ಆರ್ಕ್ಯಾಲಜಿ ಡಿಪಾರ್ಟ್ಮೆಂಟ್ ಅವರು ನಿರ್ವಹಣೆಗೆ ಪಡೆದಿದೆ ಎಂದರು.

ಇದನ್ನೂ ಓದಿ: Rakshit Shetty Birthday: ರಕ್ಷಿತ್​ ಶೆಟ್ಟಿ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್​ ಆಗಿಸಿದ ಅಭಿಮಾನಿಗಳು

ಟಿಪ್ಪು ಒಬ್ಬ ಸಂತ, ಸಂತರ ಕೆಲಸ ಹಿಂದೂ, ಮುಸ್ಲಿಂ ಎನ್ನದೆ ಒಟ್ಟಿಗೆ ಬದುಕುವುದು. ಚಿಲ್ಲರೆ ಪ್ರಚಾರ ಪಡೆಯಲು ಇಂದು ಈ ರೀತಿ ಮಾಡಲಾಗುತ್ತಿದೆ. ಹಿಂದೂ ಸಂಸ್ಕೃತಿ ಇರುವ ಪಕ್ಕಾ ಹಿಂದೂಗಳು ಇಂಥ ಕೆಲಸ ಮಾಡುವುದಿಲ್ಲ. ಹಿಂದೂ ಮತ್ತು ಮುಸ್ಲಿಂ ಇಲ್ಲಿ ಎರಡು ಕಣ್ಣುಗಳು ಇದ್ದಂತೆ. ಸರ್ಕಾರದ ಮೇಲೆ ನಂಬಿಕೆ ಇದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ತಾರೆ. ಮಸೀದಿಗೆ ಭದ್ರತೆ ನೀಡುವ ಮೂಲಕ ಮುಖ್ಯಮಂತ್ರಿಗಳು ಹಾಗೂ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ ಎಂದು ಹೇಳಿದರು. ಟಿಪ್ಪು ಸುಲ್ತಾನ್ ಕಾಲದಿಂದಲೂ ಇಲ್ಲಿ ಮದರಸ ನಡೆದುಕೊಂಡು ಬರ್ತಿದೆ. ಬ್ರಿಟಿಷರಿಗೆ ಮುಸ್ಲಿಮರನ್ನ ಕಂಡರೆ ಆಗಲ್ಲ. ಹೀಗಾಗಿ ಟಿಪ್ಪು ಕೊಂದ ಬಳಿಕ ಅವರಿಗೆ ಸಂತೋಷವಾಯ್ತು. ಮೈಸೂರು ಗೆಜಿಟಿಯರ್​ನಲ್ಲಿ ಉಲ್ಲೇಖ ಆಗಿರೋದು ಬ್ರಿಟಿಷರ ಕಾಲದಲ್ಲಿ. ಬ್ರಿಟಿಷರ ಉಲ್ಲೇಖವನ್ನ ನಾವು ಒಪ್ಪುವುದಿಲ್ಲ. ಇಲ್ಲಿ ಮಸೀದಿ ಕಾಣುತ್ತಿದ್ದೆ. ಇದು ಶೇ.100ರಷ್ಟು ಮಸೀದಿಯೇ ಎಂದರು. ಅಲ್ಲದೆ, ಸಬ್ಕ ಸಾತ್ ಸಬ್ಕ ವಿಕಾಸ್ ಎಂದು ನಮ್ಮ ಮೋದಿ ಹೇಳಿದ್ದಾರೆ. ಅದರಂತೆ ನಾವೆಲ್ಲ ನಡೆಯಬೇಕು ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.