AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vokkaliga: ಸಮುದಾಯಗಳಿಗಾಗಿ ಮೀಸಲಾತಿ ಕೂಗು -ಮದ್ದೂರಿನಲ್ಲಿ ಆರಂಭಗೊಂಡ ಒಕ್ಕಲಿಗ ಸಮುದಾಯ ಪ್ರತಿಭಟನೆ

Reservation: ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಮೀಸಲಾತಿ ನೀಡುವಂತೆ ಹೋರಾಟ ಆರಂಭವಾಗಿದೆ. ಒಕ್ಕಲಿಗ ಜನಾಂಗಕ್ಕೆ 4 % ನಿಂದ 12 %ಗೆ ಮೀಸಲಾತಿ ಹೆಚ್ಚಿಸಲು ಆಗ್ರಹ ಕೇಳಿಬಂದಿದೆ.

Vokkaliga: ಸಮುದಾಯಗಳಿಗಾಗಿ ಮೀಸಲಾತಿ ಕೂಗು -ಮದ್ದೂರಿನಲ್ಲಿ ಆರಂಭಗೊಂಡ ಒಕ್ಕಲಿಗ ಸಮುದಾಯ ಪ್ರತಿಭಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 28, 2022 | 12:59 PM

Share

ಮಂಡ್ಯ: ರಾಜ್ಯದಲ್ಲಿ ಆಯಾ ಸಮುದಾಯಗಳಿಗಾಗಿ ಮೀಸಲಾತಿ (Reservation) ಎಂಬ ಕೂಗು ತೀವ್ರಗೊಂಡಿದೆ. ಇದೀಗ ಮೀಸಲಾತಿ ವಿಚಾರಕ್ಕೆ ಒಕ್ಕಲಿಗರ ಸರದಿ (Vokkaliga Protest). ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ (Maddur) ಒಕ್ಕಲಿಗ ಸಮುದಾಯ ಪ್ರತಿಭಟನೆಯಲ್ಲಿ ನಿರತವಾಗಿದೆ. ಕೆಂಪೇಗೌಡ ಒಕ್ಕಲಿಗರ ಸಂಘದಿಂದ ಈ ಪ್ರತಿಭಟನೆ ನಡೆಯುತ್ತಿದೆ.

ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಮೀಸಲಾತಿ ನೀಡುವಂತೆ ಹೋರಾಟ ಆರಂಭವಾಗಿದೆ. ಒಕ್ಕಲಿಗ ಜನಾಂಗಕ್ಕೆ 4 % ನಿಂದ 12 %ಗೆ ಮೀಸಲಾತಿ ಹೆಚ್ಚಿಸಲು ಆಗ್ರಹ ಕೇಳಿಬಂದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಿಂದ ಒಕ್ಕಲಿಗರ ಹೋರಾಟ ಆರಂಭವಾಗಿದ್ದು, ಮೀಸಲಾತಿ ನೀಡುವಂತೆ ಮದ್ದೂರಿನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸಹ ಪಕ್ಷತೀತವಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಒಕ್ಕಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಮದ್ದೂರು ಪ್ರವಾಸಿ ಮಂದಿರದಿಂದ ನರಸಿಂಹಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ಆರಂಭವಾಗಿದೆ. ಮೆರವಣಿಗೆ ನಂತರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸಭೆಯ ನೇತೃತ್ವವನ್ನು ಶ್ರೀ ನಂಜಾವಧೂತ ಸ್ವಾಮೀಜಿ ವಹಿಸಲಿದ್ದಾರೆ. ಸಭೆಯಲ್ಲಿ ಜೆಡಿಎಸ್‌ ಶಾಸಕರು, ಕಾಂಗ್ರೆಸ್ ಮಾಜಿ ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದಾರೆ.

SC/ST ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ. ರಾಜ್ಯದಲ್ಲಿ ಒಕ್ಕಲಿಗರು ಈಗ ತಮ್ಮ ಸಮುದಾಯದ ಮೀಸಲಾತಿಯನ್ನು ಶೇ.12ಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನ್ಯಾಯಾಲಯಗಳು ಮತ್ತು ಹಿಂದುಳಿದ ವರ್ಗಗಳ ಆಯೋಗದ ಶಿಫಾರಸುಗಳನ್ನು ಆಧರಿಸಿ ಮಾತ್ರ ಸರ್ಕಾರವು ಕಾರ್ಯನಿರ್ವಹಿಸಬಹುದು ಎಂದು ಹೇಳಿರುವುದು ಗಮನಾರ್ಹ.

ಒಕ್ಕಲಿಗರ ಪ್ರಮುಖ ಮಠವಾದ ಆದಿಚುಂಚನಗಿರಿಯ ಸ್ವಾಮಿ ನಿರ್ಮಲಾನಂದನಾಥ ಅವರು ರಾಜ್ಯದ ಜನಸಂಖ್ಯೆಯಲ್ಲಿ ಶೇ. 16ರಷ್ಟು ಒಕ್ಕಲಿಗರು ಇದ್ದರೂ, ಸಮುದಾಯಕ್ಕೆ ಕೇವಲ ಶೇ. 4ರಷ್ಟು ಮೀಸಲಾತಿ ಇದೆ ಎಂಬ ಕೂಗು ಎತ್ತಿದ್ದಾರೆ. ಸೀಲಿಂಗ್ ಅನ್ನು ಶೇಕಡಾ 50 ಕ್ಕೆ ನಿಗದಿಪಡಿಸಲಾಗಿದೆ. ಹಾಗಾಗಿ ನಾವು ನಮ್ಮ ಮೀಸಲಾತಿಯನ್ನು ಹೆಚ್ಚಿಸುವ ಬೇಡಿಕೆಯನ್ನು ಎತ್ತಿರಲಿಲ್ಲ. ಆದರೆ ಮಿತಿಯನ್ನು ಉಲ್ಲಂಘಿಸಿ ಮೀಸಲಾತಿ ನೀಡಲು ಸರ್ಕಾರ ಸಿದ್ಧವಿದೆ. ಹಾಗಾಗಿ ಸರ್ಕಾರವು ಒಕ್ಕಲಿಗರಿಗೂ 4 ಪ್ರತಿಶತದಿಂದ 12 ಪ್ರತಿಶತಕ್ಕೆ ಮೀಸಲಾತಿ ಹೆಚ್ಚಿಸಲಿ ಎಂದಿದ್ದಾರೆ.

ಕರ್ನಾಟಕದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಹೆಚ್ಚಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಮೀಸಲಾತಿಯನ್ನು ಶೇಕಡಾ 56 ಕ್ಕೆ ಏರಿಸಲಾಗಿದೆ. ಪರಿಶಿಷ್ಟ ಜಾತಿಗಳಿಗೆ (ಎಸ್‌ಸಿ) ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೂರರಿಂದ ಏಳು ಶೇಕಡಾಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕದಲ್ಲಿ ಮೀಸಲಾತಿಯನ್ನು ಹೆಚ್ಚಿಸುವ ಅಥವಾ ತಮ್ಮ ಮೀಸಲಾತಿ ಸ್ಥಿತಿಯನ್ನು ಬದಲಾಯಿಸುವ ವಿವಿಧ ಸಮುದಾಯಗಳ ಬೇಡಿಕೆಗಳ ಬೆಳೆಯುತ್ತಿರುವ ಪಟ್ಟಿಯಲ್ಲಿ ಇದೀಗ ಒಕ್ಕಲಿಗರದ್ದೂ ಸೇರಿದಂತಾಗಿದೆ. ಪ್ರಮುಖವಾಗಿ ವಾಲ್ಮೀಕಿಗಳು (ಎಸ್‌ಟಿ) ಶೇ 7.5 ಮೀಸಲಾತಿಯನ್ನು ಕೋರಿದ್ದಾರೆ. ಪಂಚಮಸಾಲಿಗಳು (ಪ್ರಬಲ ಲಿಂಗಾಯತ ಸಮುದಾಯದ ಒಂದು ಪಂಗಡ) ಇತರ ಹಿಂದುಳಿದ ವರ್ಗಗಳಿಗೆ (OBC) ಮೀಸಲಾದ ‘2A’ ಮೀಸಲಾತಿ ವರ್ಗದ ಅಡಿಯಲ್ಲಿ ಸರ್ಕಾರವನ್ನು ಸೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅಂತೆಯೇ, ಕುರುಬ ಜನಾಂಗದವರೂ ತಮ್ಮನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಅಲ್ಪಾವಧಿ ಹೋರಾಟ ನಡೆಸಿದ್ದರು.

ಮಾರ್ಚ್ 2021 ರಲ್ಲಿ, ಕರ್ನಾಟಕ ಸರ್ಕಾರವು ಕರ್ನಾಟಕದ ಮೀಸಲಾತಿ ಮ್ಯಾಟ್ರಿಕ್ಸ್‌ನಲ್ಲಿ ಬದಲಾವಣೆಗಳನ್ನು ತರುವ ಎಲ್ಲಾ ಮೀಸಲಾತಿ ಬೇಡಿಕೆಗಳನ್ನು ಪರಿಶೀಲಿಸಲು ಮಾಜಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸುಭಾಷ್ ಬಿ ಆದಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.

Published On - 12:16 pm, Fri, 28 October 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ