AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರಿಗಾಗಿ ನಿರ್ಮಾಣವಾಗುತ್ತಿರೋ ಮನೆಗಳು ಹಾಳುಬಿದ್ದಿವೆ, ಹಣದ ಅಭಾವ ಇದೆ ಎಂದ ಮಂಡ್ಯ ಶಾಸಕ ರವಿ ಗಣಿಗಾ

ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸ್ಥಳೀಯ ಶಾಸಕ ರವಿಕುಮಾರ್ ಗಣಿಗಾ, ಈ ಸಂಬಂಧ ಮೂರು ಬಾರಿ ಭೇಟಿ ನೀಡಿದ್ದೇನೆ. ಹಣದ ಅಭಾವ ಇದೆ. ಶೀಘ್ರವೇ ಕಾಮಗಾರಿ ಮುಗಿಸಿ ಹಸ್ತಾಂತರ ಮಾಡಲಾಗುವುದು ಎನ್ನುತ್ತಿದ್ದಾರೆ. ಒಟ್ಟಾರೆ ಬಡವರಿಗಾಗಿ ನಿರ್ಮಾಣ ಮಾಡುತ್ತಿರೋ ಮನೆಗಳು ಕಾಮಗಾರಿಗೂ ಪೂರ್ಣಗೊಳ್ಳದೇ, ಬಡವರಿಗೆ ಹಂಚಿಕೆಯಾಗದೇ ಹಾಳುಕೊಂಪೆಯಾಗುತ್ತಿದೆ.

ಬಡವರಿಗಾಗಿ ನಿರ್ಮಾಣವಾಗುತ್ತಿರೋ ಮನೆಗಳು ಹಾಳುಬಿದ್ದಿವೆ, ಹಣದ ಅಭಾವ ಇದೆ ಎಂದ ಮಂಡ್ಯ ಶಾಸಕ ರವಿ ಗಣಿಗಾ
ಬಡವರಿಗಾಗಿ ನಿರ್ಮಾಣವಾಗುತ್ತಿರೋ ಮನೆಗಳು ಹಾಳುಬಿದ್ದಿವೆ, ಹಣದ ಅಭಾವ ಇದೆ ಎಂದ ಮಂಡ್ಯ ಶಾಸಕ ರವಿ ಗಣಿಗಾ
ಪ್ರಶಾಂತ್​ ಬಿ.
| Edited By: |

Updated on: Nov 02, 2023 | 6:19 PM

Share

ಅವು ಬಡವರಿಗಾಗಿ ಕೋಟ್ಯಾಂತರ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರೋ ಮನೆಗಳು. ಆದರೆ ಮನೆಗಳ ನಿರ್ಮಾಣ ಕಾರ್ಯ ಆರಂಭಗೊಂಡು ವರ್ಷಗಳು ಕಳೆಯುತ್ತಾ ಬಂದಿದ್ದರೂ ಮನೆ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿಲ್ಲ. ನಿರ್ಮಾಣಗೊಂಡಿರೋ ಮನೆಗಳು ಸಹ ಇದೀಗ ಹಾಳುಕೊಂಪೆಯಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುತ್ತಿದೆ. ನಿರ್ಮಾಣಗೊಂಡು ಹಂಚಿಕೆಯಾಗದೇ ಇರೋ ನೂರಾರು ಮನೆಗಳು. ನಿರ್ಮಾಣಗೊಂಡಿರೋ ಮನೆಗಳಿಗೆ ತೆಪೆ ಹಾಕುತ್ತಿರೋ ಕೆಲಸಗಾರರು. ಪುಡಿಪುಡಿಯಾಗಿರೋ ಕಿಟಕಿ ಗ್ಲಾಸ್ ಗಳು. ಅಂದಹಾಗೆ ಇಂತಹ ದೃಶ್ಯ ಕಂಡು ಬಂದಿರುವುದು ಸಕ್ಕರೆನಗರಿ ಮಂಡ್ಯದಲ್ಲಿ. ಹೌದು ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ ವತಿಯಿಂದ ಮಂಡ್ಯದ ಚಿಕ್ಕಮಂಡ್ಯ ಬಳಿ ಕೆರೆ ಅಂಗಳದಲ್ಲಿ ಸುಮಾರು 80 ಕೋಟಿ ವೆಚ್ಚದಲ್ಲಿ 576 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ.

ಅಂದಹಾಗೆ 2016ರಲ್ಲೇ ಮನೆಗಳ ನಿರ್ಮಾಣಕ್ಕೆ ಅನುಮತಿ ಪಡೆದು ಮನೆಗಳ ಕಾರ್ಯ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದೆ. ಒಂದೆಡೆ ಮನೆಗಳ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ಪೂರ್ಣಗೊಂಡಿಲ್ಲ. ಮತ್ತೊಂದೆಡೆ ಪೂರ್ಣಗೊಂಡಿರೋ ಮನೆಗಳ ಇದೀಗ ಅನೈತಿಕ ಚಟುವಟಿಕೆಯ ತಾಣವಾಗಿದೆ. ಅಲ್ಲದೆ ಬಾಗಿಲುಗಳು ಸಹಾ ಮುರಿದು ಬಂದಿವೆ, ಮತ್ತೊಂದು ಕಡೆ ಕಿಡಿಗೇಡಿಗಳು ಮನೆಗಳ ಕಿಟಿಕಿ ಗ್ಲ್ಯಾಸ್ ಗಳನ್ನ ಹೊಡೆದು ಹಾಕಿದ್ದಾರೆ. ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಬಡವರಿಗೆ ಹಂಚಿಕೆ ಮಾಡಿದ್ರೆ ಬಡವರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಇದುವರೆಗೂ ಮನೆಗಳ ಹಂಚಿಕೆ ಕಾರ್ಯ ಮಾತ್ರ ಆಗಿಲ್ಲ. ಇದು ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.

ಇದನ್ನೂ ಓದಿ: ಸಾಮಾಜಿಕ ಮೌಢ್ಯಕ್ಕೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ ಈ ಬಾರಿಯಾದರೂ ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸುತ್ತಾರಾ? ಸದ್ಯದ ಯಕ್ಷ ಪ್ರಶ್ನೆ!

ಅಂದಹಾಗೆ ಮಂಡ್ಯದ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿ ತಮಿಳು ಕಾಲೋನಿ ಇದ್ದು, ಜಾಗ ಸಾಕಷ್ಟು ವಿವಾದವಾಗಿದೆ. ಇಲ್ಲಿರುವ ನಿವಾಸಿಗಳಿಗೆ ಈ ಮನೆಗಳನ್ನ ಕೊಡಲೆಂದು ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಕಳಪೆ ಕಾಮಗಾರಿಯೆಂದು ಅಲ್ಲಿನ ನಿವಾಸಿಗಳು ಈ ಮನೆಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೋಟ್ಯಾಂತರ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರೋ ಮನೆಗಳು ಹೊಳೆಯಲ್ಲಿ ಹುಣಸೆಯನ್ನ ಹಿಂಡಿದಂತೆ ಆಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸ್ಥಳೀಯ ಶಾಸಕ ರವಿಕುಮಾರ್ ಗಣಿಗಾ, ಈ ಸಂಬಂಧ ಮೂರು ಬಾರಿ ಭೇಟಿ ನೀಡಿದ್ದೇನೆ. ಹಣದ ಅಭಾವ ಇದೆ. ಶೀಘ್ರವೇ ಕಾಮಗಾರಿ ಮುಗಿಸಿ ಹಸ್ತಾಂತರ ಮಾಡಲಾಗುವುದು ಎನ್ನುತ್ತಿದ್ದಾರೆ. ಒಟ್ಟಾರೆ ಬಡವರಿಗಾಗಿ ನಿರ್ಮಾಣ ಮಾಡುತ್ತಿರೋ ಮನೆಗಳು ಕಾಮಗಾರಿಗೂ ಪೂರ್ಣಗೊಳ್ಳದೇ, ಬಡವರಿಗೆ ಹಂಚಿಕೆಯಾಗದೇ ಹಾಳುಕೊಂಪೆಯಾಗುತ್ತಿದೆ.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ