AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಸಾವು

12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಸಾವು
ಎಸ್​​.ಎನ್​​.ಕುಮಾರ್
TV9 Web
| Edited By: ಆಯೇಷಾ ಬಾನು|

Updated on:Nov 14, 2022 | 3:36 PM

Share

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ಕಾರೆಮನೆ ಗೇಟ್ ಬಳಿ ನಡೆದಿದೆ. ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಮಗ, ನಿವೃತ್ತ ಯೋಧ ಎಸ್​​.ಎನ್​​.ಕುಮಾರ್(34) ಮೃತ ದುರ್ದೈವಿ. ಮಂಡ್ಯದಿಂದ ಸಾತನೂರಿಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್​ನಿಂದ ಬಿದ್ದು ಕುಮಾರ್ ಅವರು ಸಾವನ್ನಪ್ಪಿದ್ದಾರೆ.

12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಕಾನ್ಸ್​​ಟೇಬಲ್​ ಹುದ್ದೆಗೆ ಆಯ್ಕೆ ಆಗಿದ್ದರು. ನಿನ್ನೆ ಮಂಡ್ಯದಿಂದ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಭಾರತೀಯ ಸೇನೆಯಲ್ಲಿ ನಿವೃತ್ತರಾದ ನಂತರ ಊರಿಗೆ ಆಗಮಿಸಿದ್ದ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದರು. ಸದ್ಯ ಧಾರವಾಡದಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ತರಬೇತಿಯನ್ನು ಪಡೆಯುತ್ತಿದ್ದ ಕುಮಾರ್​, ರಜೆ ಮೇರೆಗೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: Turkey Blast ಇಸ್ತಾಂಬುಲ್‌ನಲ್ಲಿ ಬಾಂಬ್ ಇರಿಸಿದ್ದು ಸಿರಿಯಾದ ಮಹಿಳೆ: ಟರ್ಕಿ ಪೊಲೀಸ್

ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಇನ್ನು ಮಂಡ್ಯ ತಾಲೂಕಿನ ಸಾತನೂರಿನಲ್ಲಿ ಕುಮಾರ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕುಮಾರ್ 10 ವರ್ಷದ ಹಿಂದೆ ಕೋಮಲಾ ಎಂಬುವರನ್ನು ವಿವಾಹವಾಗಿದ್ದರು. ಕುಮಾರ್ ತಂದೆಯೂ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಮಗನನ್ನ ಕಳೆದು ಕೊಂಡು ಈಗ ತಂದೆ ನರಸಯ್ಯ ಕಣ್ಣೀರಿಡುತ್ತಿದ್ದಾರೆ. ಕುಮಾರ್ ನಿವೃತ್ತ ಯೋಧರಾದ ಕಾರಣ ಮಂಡ್ಯ ಜಿಲ್ಲಾಡಳಿತದಿಂದ ಗಾರ್ಡ್ ಆಫ್ ಆನರ್ ನೀಡಲಾಗುತ್ತಿದೆ.

ಆಟೋ ಚಾಲಕನ ಮೇಲೆ ತಲವಾರು ದಾಳಿ

ಮಂಗಳೂರು: ಆಟೋ ಚಾಲಕನ ಮೇಲೆ ತಲವಾರು ದಾಳಿ ನಡೆಸಿ ಕೊಲೆ ಯತ್ನ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಆಟೋ ಚಾಲಕ ಶಾಕೀರ್(30) ಮೇಲೆ ದಾಳಿ ನಡೆದಿದೆ. ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್​ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 2:01 pm, Mon, 14 November 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ