AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ

ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೂಜಾ ಕೈಂಕರ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ ಪಾಲ್ಗೊಂಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ ಮಾಡಲಾಗಿದೆ. ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್. ಅಶೋಕ ಅವರು ಜೂನ್ 2 ರಂದು ಅಸ್ತಿ ವಿಸರ್ಜನೆ ಮಾಡಿದ್ದರು.

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ
1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ
TV9 Web
| Edited By: |

Updated on:Oct 04, 2021 | 12:44 PM

Share

ಮಂಡ್ಯ: ಕೊವಿಡ್‌ನಿಂದ ಮೃತಪಟ್ಟವರ ಪಿಂಡ ಪ್ರದಾನ ಕಾರ್ಯವನ್ನು ಕಂದಾಯ ಸಚಿವ ಆರ್.ಅಶೋಕ ಮಾಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಮೃತರ ಪಿಂಡ ಪ್ರದಾನ ಕಾರ್ಯ ಮಾಡಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಘೋಸಾಯಿ ಘಾಟ್‌ ಬಳಿಯ ಕಾವೇರಿ ನದಿಯಲ್ಲಿ ಇಂದು (ಅಕ್ಟೋಬರ್ 4) ಪಿಂಡ ಪ್ರದಾನ ಕಾರ್ಯ ನಡೆದಿದೆ.

ಕಾವೇರಿ ನದಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೂಜಾ ಕೈಂಕರ್ಯದಲ್ಲಿ ಕಂದಾಯ ಸಚಿವ ಆರ್.ಅಶೋಕ ಪಾಲ್ಗೊಂಡಿದ್ದಾರೆ. 1 ಸಾವಿರಕ್ಕೂ ಹೆಚ್ಚು ಜನರಿಗೆ ಸಾಮೂಹಿಕವಾಗಿ ಪಿಂಡ ಪ್ರಧಾನ ಕಾರ್ಯ ಮಾಡಲಾಗಿದೆ. ಈ ಹಿಂದೆಯೂ ಕೂಡ ರಾಜ್ಯ ಸರ್ಕಾರದ ಪರವಾಗಿ ಸಚಿವ ಆರ್. ಅಶೋಕ ಅವರು ಜೂನ್ 2 ರಂದು ಅಸ್ತಿ ವಿಸರ್ಜನೆ ಮಾಡಿದ್ದರು. ಬೆಳಕವಾಡಿ ಗ್ರಾಮದ ಬಳಿಯ ಕಾವೇರಿ ನದಿ ದಡದಲ್ಲಿ ಅಸ್ತಿ ವಿಸರ್ಜನೆ ಮಾಡಲಾಗಿತ್ತು. ಕುಟುಂಬದವರು ಅಸ್ಥಿ ಕೊಂಡೊಯ್ಯದೇ ಬಾಕಿ ಉಳಿದಿದ್ದ ಸುಮಾರು 950 ಜನರ ಅಸ್ಥಿ ವಿಸರ್ಜನೆ ಮಾಡಲಾಗಿತ್ತು. ಈಗ ಪಿತೃ ಪಕ್ಷದ ಸಂದರ್ಭದಲ್ಲಿ ಮತ್ತೆ ಇನ್ನುಳಿದ ಜನರ ಅಂತಿಮ‌ ವಿಧಿ ವಿಧಾನಕ್ಕೆ ರಾಜ್ಯ ಸರ್ಕಾರ ತಿರ್ಮಾನ ಮಾಡಿದೆ.

ಮಂಡ್ಯ: ಸತ್ತವರು ಅನಾಥರಲ್ಲ, ಒಂದೊಂದು ಕಾರಣಕ್ಕೆ ಅಸ್ತಿ ವಿಸರ್ಜನೆ ಮಾಡಿಲ್ಲ:  ಆರ್.ಅಶೋಕ್ ಹಲವು ಕಾರಣಗಳಿಂದಾಗಿ ಮೃತರ ಕುಟುಂಬಸ್ಥರು ಅಸ್ಥಿ ವಿಸರ್ಜಿಸಿರಲಿಲ್ಲ. ಅನಾಥ ಅಸ್ಥಿಗಳನ್ನು ವಿಸರ್ಜಿಸುವ ಕೆಲಸ ಸರ್ಕಾರ ಮಾಡಿತ್ತು. ಈಗ ಸತ್ತವರಿಗೆ ಸದ್ಗತಿ ದೊರಕಿಸುವ ಕಾರ್ಯ ಮಾಡಲಾಗ್ತಿದೆ. ಪಿಂಡ ಪ್ರಧಾನ ಮಾಡಿದರೆ ಸತ್ತವರ ಆತ್ಮಕ್ಕೆ ಶಾಂತಿ ಸಿಗುವ ನಂಬಿಕೆ ಹಿಂದೂ ಧರ್ಮದಲ್ಲಿದೆ. ಹಾಗಾಗಿ ಸತ್ತವರು ಅನಾಥರಾಗಬಾರದೆಂದು ಸರ್ಕಾರ ಈ ಕೆಲಸ ಮಾಡುತ್ತಿದೆ. ಪ್ರಚಾರ ಸಿಗಲಿ ಎಂದು ನಾನು ಮಾಡುತ್ತಿಲ್ಲ. ಈ ಪುಣ್ಯದ ಕಾರ್ಯದಿಂದ ಆತ್ಮತೃಪ್ತಿ ಸಿಕ್ಕಿದೆ ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್‌ನಲ್ಲಿ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟುನಿಟ್ಟಾಗಿ‌ ಇದ್ದೀನಿ. ಮೂರು ದಿನಗಳ‌ ಕಟ್ಟು ನಿಟ್ಟಾಗಿ ಇರಬೇಕು ಎಂದು ಹೇಳಿದ್ದಾರೆ. ಇವತ್ತು ಅವಲಕ್ಕಿ ಬಿಟ್ಟು ಬೇರೆ ಏನು ಸೇವನೆ ಮಾಡಿಲ್ಲ. ಸತ್ತವರೆಲ್ಲರೂ ನಮ್ಮವರೇ ಎಂದು ಈ ಕಾರ್ಯ ಮಾಡುತ್ತಿದ್ದೇವೆ. ಈ ಪುಣ್ಯದ ಕೆಲಸಗಳಿಗೆ ಮಹಾತ್ಮ ಗಾಂಧೀಜಿ ನನಗೆ ಪ್ರೇರಣೆ. ಅವರಿಗೂ ಪೂಜೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಬಲಿಯಾದ ಅನಾಥ ಮೃತ ಶವಗಳಿಗೆ ಸರ್ಕಾರದಿಂದ ಮೋಕ್ಷ

ಬೆಂಗಳೂರು ನಗರದಲ್ಲಿ 185 ಶಿಥಿಲ ಕಟ್ಟಡಗಳು: ಕಂದಾಯ ಸಚಿವ ಆರ್.ಅಶೋಕ್

Published On - 11:43 am, Mon, 4 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ